ನೀನೇ ಕುಣಿಸುವೆ ಜೀವರನು……

ನೀನೇ ಕುಣಿಸುವೆ ಜೀವರನು
ಹೆಸರಿನ ಜೊತೆಗೇ ಭಾಗವತರಾಗಿದ್ದರು ನೆಬ್ಬೂರರು: ಕೆರೇಕೈ
(ಶಿರಸಿ:ಮೇ,20-) ನೆಬ್ಬೂರು ನಾರಾಯಣ ಭಾಗವತ್ ಅವರು ಹಾಡಿದ ಜನಪ್ರಿಯ ಪದ್ಯಗಳ ಪ್ರಸ್ತುತಿ, ಅವರ ಒಡನಾಟದ ಮೆಲಕು ಹಾಕುವ ಮೂಲಕ ನಗರದ ಯೋಗ ಮಂದಿರದಲ್ಲಿ ನೀನೆ ಕುಣಿಸುವೆ ಜೀವರನು ಗಾನ ಹಾಗೂ ವಚನ ನಮನ ಕಾರ್ಯಕ್ರಮ ಜರುಗಿತು.
ಅಗಲಿದ ಯಕ್ಷಗಾನದ ಮೇರು ಭಾಗವತ ನೆಬ್ಬೂರು ನಾರಾಯಣ ಭಾಗವತ ಅವರ ಸಂಸ್ಮರಣೆಯಲ್ಲಿ ರವಿವಾರ ಸಿದ್ದಾಪುರ, ಶಿರಸಿ, ಯಲ್ಲಾಪುರ ತಾಲೂಕಿನ ವಿವಿಧ ಸಂಘಟನೆಗಳಿಂದ ಕಲಾಭಿಮಾನಿಗಳು, ಒಡನಾಡಿಗಳು ಭಾವಪೂರ್ಣವಾಗಿ ನಮನ ಸಲ್ಲಿಸಿದರು.
ನುಡಿ ನಮನ ಸಲ್ಲಿಸಿದ ವಿದ್ವಾನ್ ಉಮಾಕಾಂತ ಭಟ್ಟ ಕೆರೇಕೈ, ನೆಬ್ಬೂರರ ಪ್ರೀತಿ, ಭಾಗವತರ ಕಲೆ ನಮಗೆ ಇಷ್ಟವಾಗಲು ಕಾರಣ. ಪ್ರೀತಿ ಇರಬೇಕು ಎಂಬ ನಿರ್ಬಂಧವಿಲ್ಲ. ನಿರ್ವಾಜ್ಯವಾಗಿ ಸಮಾಜವನ್ನು ಪ್ರೀತಿಸುವ ವಿಶಿಷ್ಟ ಅರ್ಹತೆ ಇತ್ತು. ಯಾವ ಕಾರಣಕ್ಕೆ ಒಡನಾಟಕ್ಕೆ ಬಂದರೂ ಪ್ರೀತಿಯಿಂದ ಕಟ್ಟು ಹಾಕುತ್ತಿತ್ತು. ಜಗಳ ಮಾಡಿದವರೂ ಭಾಗವತರನ್ನು ಮರೆಯಲು ಸಾಧ್ಯವಿಲ್ಲ. ಜೀವ ಕಲೆಯನ್ನು ತುಂಬಿಸುವ ಪ್ರೀತಿ ಅದು ಎಂದರು.
ಒಂದು ಮನೆಯ ಕೊರತೆಯನ್ನು ತೋರಿಸದೇ ಅದನ್ನು ದಾಟುವ ಇಂಥ ಆದರ್ಶ ಗೃಹಸ್ಥರನ್ನು ನಾನು ನೋಡಿಲ್ಲ. ಇದು ಅನುಕರಣೀಯ ಸಂಸ್ಕಾರ. ಜೀವನ ಮಾದರಿಯಾಗಿದ್ದವರು. ತುಂಬಾ ಜನರಿಗೆ ಅವರಾಗಿ ಸಹಾಯ ಮಾಡಿದ್ದರು ಎಂದ ಅವರು, ನೆಬ್ಬೂರು ಭಾಗವತರ ಭಾಗವತಿಕೆ ಬಗ್ಗೆ ಮಾತನಾಡಲು ಧೈರ್ಯ ಹಾಗೂ ಅನುಭವ ಬೇಕು. ಏಕೆಂದರೆ ಅವರು 2 ವರ್ಷ ಮಾತ್ರ ಸಂಗೀತ ಮಾಡಿ 63 ವರ್ಷ ಭಾಗವತಿಕೆ ಮಾಡಿದವರು. ಅವರ ಹೆಸರಿನ ಜೊತೆ ಭಾಗವತ ಎಂಬುದೂ ಸೇರುವಷ್ಟು ಒಂದಾಗಿದ್ದರು ಭಾಗವತಿಕೆಯಲ್ಲಿ. ಅವರ ಮಾದರಿ ಶ್ರೇಷ್ಠವಾದದ್ದು. ತೆರೆದ ಕಂಠದ ಭಾಗವತರು ಅವರು ಎಂದೂ ಬಣ್ಣಿಸಿದರು.
ಸಂಕಲ್ಪದ ಮುಖ್ಯಸ್ಥ ಪ್ರಮೋದ ಹೆಗಡೆ ಯಲ್ಲಾಪುರ ನೆಬ್ಬೂರರು ಸರಳ. ಭಾಗವತಿಕೆಯಲ್ಲಿ ಶ್ರೀಮಂತಿಕೆ ಇದ್ದವರು. ಅವರ ನೆನಪನ್ನು ಪ್ರತೀ ವರ್ಷ ಮಾಡಕೊಳ್ಳಬೇಕು. ನೆಬ್ಬೂರರು ಬಾರದ ಲೋಕಕ್ಕೆ ಹೋಗಿದ್ದಾರೆ. ಅವರ ನೆನಪಿಡುವ ಕಾರ್ಯ ಮಾಡಬೇಕು. ಅಗೋಚರ ಕುಟುಂಬ ಇದೆ. ಕಲಾವಿದರ, ಯಕ್ಷಗಾನ ಕುಟುಂಬ ಅದು. ನಮ್ಮ ಕುಟುಂಬದ ಹಬ್ಬ ಮಾಡಬೇಕು. ಜಬ್ದಾರಿಯುತವಾಗಿ ಯಕ್ಷಗಾನ ಕುಟುಂಬ ಒಂದಾಗಬೇಕು. ಹೊಸ ಸೃಷ್ಟಿ ಬಹಳ ಕಡಿಮೆ ಆಗಿದೆ. ಕಳೆದುಕೊಳ್ಳುವುದು ಹೆಚ್ಚಾಗಿದೆ ಎಂದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೋ. ಎಂ.ಎ.ಹೆಗಡೆ ದಂಟ್ಕಲ್ ಮಾತನಾಡಿ, ನೆಬ್ಬೂರರ ನೆನಪೇ ಇಲ್ಲಾಗಬೇಕು. ಅದಕ್ಕೇ ಕಟುವಾಗಿ ಹೇಳಬೇಕು. ನಾನು ಅಲ್ಲ, ನಮ್ಮಂತಹ ಹಲವಾರು ಜನರನ್ನು ಸಿದ್ಧಗೊಳಿಸಿದ ಅವಿಸ್ಮರಣೀಯ ಎಂಬ ರೀತಿಯಲ್ಲಿ ಪ್ರಭಾವ ಬೀರಿದ ನೆಬ್ಬೂರರಗೆ ಕುಸುಮ ಅರ್ಪಿಸಬೇಕು. ಔಚಿತ್ಯ ಬಂಧಕ್ಕೆ ಕಟ್ಟು ಬಿದ್ದವರು. ಪದ್ಯವನ್ನು ಅನಗತ್ಯ ವಿಸ್ತಾರ ಮಾಡಿಲ್ಲ. ಭಾಗವತರಲ್ಲಿ ಎರಡು ಮಾದರಿ. ಬುದ್ಧಿಯಿಂದ ಭಾಗವತರು. ಹೃದಯದಿಂದ ಭಾಗವತರು. ಹೃದಯದ ಭಾಗವತಿಕೆಯಲ್ಲಿ ಗೆದ್ದವರು ಎಂದರು.
ಉದ್ಯಮಿ ಆರ್.ಜಿ.ಭಟ್ಟ ವರ್ಗಾಸರ ಉಪಸ್ಥಿತರಿದ್ದರು. ಜಯರಾಮ ಹೆಗಡೆ, ಆರ್.ಎಂ.ಹೆಗಡೆ ಕಾನಗೋಡ, ನೇತ್ರಾವತಿ ಹೆಗಡೆ, ವಿ.ಆರ್.ಹೆಗಡೆ, ಹಿತ್ಲಕೈ ಗಣಪತಿ ಹೆಗಡೆ, ಜಿ.ಎನ್.ಹೆಗಡೆ ಹಾವಳಿಮನೆ, ಇತರರು ನುಡಿ ನಮನ ಸಲ್ಲಿಸಿದರು. ಆರ್.ಎಸ್.ಹೆಗಡೆ ಭೈರುಂಬೆ ಸ್ವಾಗತಿಸಿದರು. ಸಂಘಟಕ ನಾಗರಾಜ್ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಶಿವಾನಂದ ದೀಕ್ಷಿತ ವಂದಿಸಿದರು. ರಾಘವೇಂದ್ರ ಬೆಟ್ಟಕೊಪ್ಪ ವಂದಿಸಿದರು.
ಗಾನ ನಮನ:
ನೀನೇ ಕುಣಿಸುವೆ ಜೀವರನು, ನೋವು ನಲಿವಿನ ಜೀವನ ಕಂಡಾಯ್ತು, ಇಳಿದ ಪ್ರಶಾಂತದಲಿ.., ಚೆಲುವರನ್ನು ನೋಡಿದರೆ, ರಂಗ ನಾಯಕ ಸೇರಿದಂತೆ ನೆಬ್ಬೂರರ ಇಷ್ಟದ ಪದ್ಯಗಳನ್ನು ಹೆಸರಾಂತ ಭಾಗವತರಾದ ಕೇಶವ ಹೆಗಡೆ ಕೊಳಗಿ, ಶಂಕರ ಬ್ರಹ್ಮೂರು, ಶಂಕರ ಭಾಗವತ್, ಪ್ರಸನ್ನ ಹೆಗ್ಗಾರ ಸಹಕಾರ ನೀಡಿದರು.
ಯೋಗ ಮಂದಿರ, ಯಕ್ಷ ಶಾಲ್ಮಲಾ, ನೆಬ್ಬೂರು ಪ್ರತಿಷ್ಠಾನ, ವಿಶ್ವಶಾಂತಿ ಸೇವಾ ಟ್ರಸ್ಟ, ಹವ್ಯಕ ಕ್ಷೇಮಾಭಿವೃದ್ಧಿ ಟ್ರಸ್ಟ, ಸಂಕಲ್ಪ ಯಲ್ಲಾಪುರ, ಮಾತೃ ಮಂಡಳಿ ಸ್ವರ್ಣವಲ್ಲೀ, ಶಬರ ಸಂಸ್ಥೆ ಸೋಂದಾ, ಸಾಮ್ರಾಟ್ ಹೋಟೆಲ್, ಯಕ್ಷ ಸಂಭ್ರಮ, ನಾದ ಶಂಕರ, ಯಕ್ಷ ಭಾರತೀ, ಹೆಕ್ಷ ಗೆಜ್ಜೆ, ಅಂಕ ಸಂಸಾರ, ಯಕ್ಷ ಶುಭೋದಯ, ಗೆಳೆಯರ ಬಳಗ ಭೈರುಂಬೆ, ಯಕ್ಷಸಿರಿ ವಾನಳ್ಳಿ, ಯಕ್ಷ ಸಂಗಮ ಆದರ್ಶ ವನಿತಾ ಸಮಾಜ, ಯಕ್ಷ ಕಿರಣ ಕೋಳಿಗಾರ, ಅನಂತ ಯಕ್ಷಕಲಾ ಪ್ರತಿಷ್ಠಾನ ಸಿದ್ದಾಪುರ, ಶಂಭು ಶಿಷ್ಯ ಯಕ್ಷಗಾನ ಪ್ರತಿಷ್ಠಾನ ಕಲಗದ್ದೆ, ಒಡ್ಡೋಲಗ, ಯಕ್ಷ ಚಂದನ ದಂಟ್ಕಲ್, ರಾಯಸಂ ಮಂಚಿಕೇರೆ ಇನ್ನಿತರ ಸಂಘಟನೆಗಳು ಸಹಕಾರ ನೀಡಿದ್ದವು.

ಭಾವ ಅರಿತು, ಸಂಕೀರ್ಣ ಸ್ಥಿತಿ ಅರಿತು ಹಾಡಿದವರು ನೆಬ್ಬೂರರು. ಇಡೀ ಸನ್ನಿವೇಶ ತುಂಬಿಕೊಂಡು ಹಾಡಿ ಜನ ಮಾನಸದಲ್ಲಿ ನಿಂತವರು. ನೆಬ್ಬೂರರಂತೆ ಹಾಡಲು ಸಾಧ್ಯವಿಲ್ಲ.

  • ಪ್ರೋ. ಎಂ.ಎ.ಹೆಗಡೆ ದಂಟ್ಕಲ್, ಅಧ್ಯಕ್ಷರು ಯಕ್ಷಗಾನ ಅಕಾಡೆಮಿ ಭಾಗವತಿಕೆಯಲ್ಲಿ ಪ್ರತ್ಯೇಕತೆ ಮನಸ್ಸೇ ಹೊರತು ಪಾತ್ರದ ಭಾವ ತೋರಿಸುವದಿಲ್ಲ. ಯಕ್ಷಗಾನದ ಪಾರಂಪರಿಕ ಆಕರ ವ್ಯಕ್ತಿ ಆಗಿದ್ದವರು ನೆಬ್ಬೂರರು.- ವಿ.ಉಮಾಕಾಂತ ಭಟ್ಟ ಕೆರೇಕೈ, ವಿದ್ವಾಂಸ

ಯಕ್ಷಗಾನ ಕಲಾವಿದರನ್ನೂ ಜೋಡಿಸುವ ಕಾರ್ಯ ನೆಬ್ಬೂರರು ಮಾಡಿದ್ದರು.

  • ಪ್ರಮೋದ ಹೆಗಡೆ ಯಲ್ಲಾಪುರ, ಸಂಕಲ್ಪ

ನೆಬ್ಬೂರು ಪ್ರತಿಷ್ಠಾನದಿಂದ ನೆಬ್ಬೂರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಯೋಜಿಸಿದ್ದೇವೆ.

  • ಜಿ.ಎನ್.ಹೆಗಡೆ ಹಾವಳಿಮನೆ, ಪ್ರತಿಷ್ಠಾನದ ಅಧ್ಯಕ್ಷರು

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *