ರೈತರಿಂದ ಸನ್ಮಾನಿತರಾದ ಅಧಿಕಾರಿ ಕೊಟ್ಟ ಭರವಸೆ 2 ವರ್ಷಗಳ ನಿವೃತ್ತಿ ನಂತರದ ಉಚಿತ ಸೇವೆ!


(ಸಿದ್ದಾಪುರ.ಜೂ,07-) ತಾಲೂಕಿನ ರೇಷ್ಮೆ ಇಲಾಖೆಯಲ್ಲಿ ಹಲಗೇರಿ ವಲಯದ ವಲಯಾಧಿಕಾರಿಯಾಗಿ ಸೇವೆಸಲ್ಲಿಸಿ ಮೇ 31ರಂದು ನಿವೃತ್ತಿಹೊಂದಿದ ಉಮೇಶ ಟಪಾಲರಿಗೆ ರೇಷ್ಮೆ ಬೆಳೆಗಾರರು(ರೈತರು) ಸನ್ಮಾನಿಸಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ ಅಪರೂಪದ ಕಾರ್ಯಕ್ರಮ ನಡೆದಿದೆ.
ಗುರುವಾರ ಇಲ್ಲಿಯ ಟಿ.ಎಂ.ಎಸ್. ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ರೇಷ್ಮೆಬೆಳೆ ಉತ್ತಮ ಪ್ರಗತಿ ಹೊಂದಲು ಶ್ರಮಿಸಿದ ಉಮೇಶ ಟಪಾಲರನ್ನು ಹಾಗೂ ಅವರ ಸಹಧರ್ಮಿಣಿ ವಿಜಯಾ ನಾಯ್ಕರನ್ನು ರೈತರು ಸ್ವಯಂ ಪ್ರೇರಿತರಾಗಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಉಮೇಶ ಟಪಾಲ ಕಳೆದ 25ವರ್ಷಗಳಿಂದ ನಿರಂತರವಾಗಿ ರೈತರ ನಿಕಟಸಂಪರ್ಕದಲ್ಲಿದ್ದು ರೇಷ್ಮೆ ಬೆಳೆಗಾರರ ಉಧ್ಯಮ ಪ್ರಗತಿಹೊಂದಲು ಶ್ರಮಿಸಿದ್ದೇನೆ. ಪ್ರಾರಂಭದಲ್ಲಿ ಕಡಿಮೆ ಇದ್ದ ರೈತರ ಸಂಖ್ಯೆ ಹೆಚ್ಚಾಗುವಂತೆ, ರೇಷ್ಮೆಕೃಷಿ ಲಾಭದಾಯಕವಾಗುವಂತೆ ಸೇವೆ ಮಾಡಿದ್ದೇನೆ. ರೇಷ್ಮೆ ಕೃಷಿ ಕ್ಷೀಣವಾಗುತ್ತಿರುವ ಸಂದರ್ಭದಲ್ಲೂ ನಮ್ಮ ಭಾಗದಲ್ಲಿ ಹೊಸ ಹೊಸ ತಾಂತ್ರಿಕತೆಗಳನ್ನು ಅಳವಡಿಸಿ ಕಡಿಮೆ ಖರ್ಚಿನಲ್ಲಿ ರೈತರಿಗೆ ಅಧಿಕಲಾಭ ಬರುವಂತೆ ನೋಡಿಕೊಂಡಿದ್ದೇನೆ. ನಿವೃತ್ತಿಯ ನಂತರವೂ ಇನ್ನೆರಡು ವರ್ಷಗಳಕಾಲ ಪ್ರತಿಫಲಾಪೇಕ್ಷೆ ಇಲ್ಲದೆ ರೈತರಿಗೆ ನೆರವು ನೀಡಲು ಸಿದ್ದನಿದ್ದೇನೆ ಎಂದರು.
ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ರೇಷ್ಮೆ ಇಲಾಖೆಯ ಉಪನಿರ್ಧೇಶಕಿ ವಿ.ವರಲಕ್ಷ್ಮಿ , ನಿವೃತ್ತ ನೌಕರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್, ಪರಾಗ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಶಿವಳಮನೆ ಸಿಇಒ ಪ್ರಶಾಂತ ಜೋಷಿ ಉಮೇಶ ಟಪಾಲರ ಸೇವೆಯನ್ನು ಶ್ಲಾಘಿಸಿದರು.
ಕಮಲಾಕರ ನಾಯ್ಕ ಹೇರೂರು ವೇದಿಕೆಯಲ್ಲಿದ್ದರು. ಅಧ್ಯಕ್ಷತೆ ವಹಿಸಿದ್ದ ರೈತಸಂಘದ ಅಧ್ಯಕ್ಷ ವೀರಭದ್ರ ನಾಯ್ಕ ಮಾತನಾಡಿ ಉಮೇಶ ಟಪಾಲರು ಸೇವೆಯಲ್ಲಿದ್ದಾಗ ರಜೆಇದ್ದರೂ ಅದನ್ನು ಪಡೆಯದೆ ರೈತರೊಂದಿಗೆ ಸಹಕರಿಸಿದ್ದಾರೆ. ಇದು ಅವರ ಕರ್ತವ್ಯ ಪರತೆಯನ್ನು ಸೂಚಿಸುತ್ತದೆ ಎಂದರು. ಹೆಗ್ಗರಣಿ ರೇಷ್ಮೆ ವಲಯಾಧಿಕಾರಿ ಆರ್. ಟಿ. ಭಟ್ಟ ಸ್ವಾಗತಿಸಿ ನಿರೂಪಿಸಿದರು. ಪ್ರಭಾರ ತಾಲೂಕಾ ರೇಷ್ಮೆ ಅಧಿಕಾರಿ ಆರ್. ಎನ್. ಶಾನಭಾಗ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *