ರೈತರಿಂದ ಸನ್ಮಾನಿತರಾದ ಅಧಿಕಾರಿ ಕೊಟ್ಟ ಭರವಸೆ 2 ವರ್ಷಗಳ ನಿವೃತ್ತಿ ನಂತರದ ಉಚಿತ ಸೇವೆ!


(ಸಿದ್ದಾಪುರ.ಜೂ,07-) ತಾಲೂಕಿನ ರೇಷ್ಮೆ ಇಲಾಖೆಯಲ್ಲಿ ಹಲಗೇರಿ ವಲಯದ ವಲಯಾಧಿಕಾರಿಯಾಗಿ ಸೇವೆಸಲ್ಲಿಸಿ ಮೇ 31ರಂದು ನಿವೃತ್ತಿಹೊಂದಿದ ಉಮೇಶ ಟಪಾಲರಿಗೆ ರೇಷ್ಮೆ ಬೆಳೆಗಾರರು(ರೈತರು) ಸನ್ಮಾನಿಸಿ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ ಅಪರೂಪದ ಕಾರ್ಯಕ್ರಮ ನಡೆದಿದೆ.
ಗುರುವಾರ ಇಲ್ಲಿಯ ಟಿ.ಎಂ.ಎಸ್. ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ರೇಷ್ಮೆಬೆಳೆ ಉತ್ತಮ ಪ್ರಗತಿ ಹೊಂದಲು ಶ್ರಮಿಸಿದ ಉಮೇಶ ಟಪಾಲರನ್ನು ಹಾಗೂ ಅವರ ಸಹಧರ್ಮಿಣಿ ವಿಜಯಾ ನಾಯ್ಕರನ್ನು ರೈತರು ಸ್ವಯಂ ಪ್ರೇರಿತರಾಗಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಉಮೇಶ ಟಪಾಲ ಕಳೆದ 25ವರ್ಷಗಳಿಂದ ನಿರಂತರವಾಗಿ ರೈತರ ನಿಕಟಸಂಪರ್ಕದಲ್ಲಿದ್ದು ರೇಷ್ಮೆ ಬೆಳೆಗಾರರ ಉಧ್ಯಮ ಪ್ರಗತಿಹೊಂದಲು ಶ್ರಮಿಸಿದ್ದೇನೆ. ಪ್ರಾರಂಭದಲ್ಲಿ ಕಡಿಮೆ ಇದ್ದ ರೈತರ ಸಂಖ್ಯೆ ಹೆಚ್ಚಾಗುವಂತೆ, ರೇಷ್ಮೆಕೃಷಿ ಲಾಭದಾಯಕವಾಗುವಂತೆ ಸೇವೆ ಮಾಡಿದ್ದೇನೆ. ರೇಷ್ಮೆ ಕೃಷಿ ಕ್ಷೀಣವಾಗುತ್ತಿರುವ ಸಂದರ್ಭದಲ್ಲೂ ನಮ್ಮ ಭಾಗದಲ್ಲಿ ಹೊಸ ಹೊಸ ತಾಂತ್ರಿಕತೆಗಳನ್ನು ಅಳವಡಿಸಿ ಕಡಿಮೆ ಖರ್ಚಿನಲ್ಲಿ ರೈತರಿಗೆ ಅಧಿಕಲಾಭ ಬರುವಂತೆ ನೋಡಿಕೊಂಡಿದ್ದೇನೆ. ನಿವೃತ್ತಿಯ ನಂತರವೂ ಇನ್ನೆರಡು ವರ್ಷಗಳಕಾಲ ಪ್ರತಿಫಲಾಪೇಕ್ಷೆ ಇಲ್ಲದೆ ರೈತರಿಗೆ ನೆರವು ನೀಡಲು ಸಿದ್ದನಿದ್ದೇನೆ ಎಂದರು.
ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ರೇಷ್ಮೆ ಇಲಾಖೆಯ ಉಪನಿರ್ಧೇಶಕಿ ವಿ.ವರಲಕ್ಷ್ಮಿ , ನಿವೃತ್ತ ನೌಕರ ಸಂಘದ ಅಧ್ಯಕ್ಷ ಸಿ.ಎಸ್.ಗೌಡರ್, ಪರಾಗ ಫಾರ್ಮರ್ ಪ್ರೊಡ್ಯೂಸರ್ ಕಂಪನಿ ಶಿವಳಮನೆ ಸಿಇಒ ಪ್ರಶಾಂತ ಜೋಷಿ ಉಮೇಶ ಟಪಾಲರ ಸೇವೆಯನ್ನು ಶ್ಲಾಘಿಸಿದರು.
ಕಮಲಾಕರ ನಾಯ್ಕ ಹೇರೂರು ವೇದಿಕೆಯಲ್ಲಿದ್ದರು. ಅಧ್ಯಕ್ಷತೆ ವಹಿಸಿದ್ದ ರೈತಸಂಘದ ಅಧ್ಯಕ್ಷ ವೀರಭದ್ರ ನಾಯ್ಕ ಮಾತನಾಡಿ ಉಮೇಶ ಟಪಾಲರು ಸೇವೆಯಲ್ಲಿದ್ದಾಗ ರಜೆಇದ್ದರೂ ಅದನ್ನು ಪಡೆಯದೆ ರೈತರೊಂದಿಗೆ ಸಹಕರಿಸಿದ್ದಾರೆ. ಇದು ಅವರ ಕರ್ತವ್ಯ ಪರತೆಯನ್ನು ಸೂಚಿಸುತ್ತದೆ ಎಂದರು. ಹೆಗ್ಗರಣಿ ರೇಷ್ಮೆ ವಲಯಾಧಿಕಾರಿ ಆರ್. ಟಿ. ಭಟ್ಟ ಸ್ವಾಗತಿಸಿ ನಿರೂಪಿಸಿದರು. ಪ್ರಭಾರ ತಾಲೂಕಾ ರೇಷ್ಮೆ ಅಧಿಕಾರಿ ಆರ್. ಎನ್. ಶಾನಭಾಗ ವಂದಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *