
ಪರಿಸರ ಕಾಪಾಡುವ ಮನಸ್ಥಿತಿ ಮನೆಯಿಂದಲೇ ಆರಂಭವಾಗಬೇಕು
: ಬಾಲಸುಬ್ರಹ್ಮಣ್ಯ

(ಯಲ್ಲಾಪುರ:ಜೂ.10-) “ಪರಿಸರ ಕಾಪಾಡುವ ಮನಸ್ಥಿತಿ ಮಕ್ಕಳಿಗೆ ಮನೆಯಿಂದಲೇ ಆರಂಭವಾಗಬೇಕು”ಎಂದು ಯಲ್ಲಾಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಬಾಲಸುಬ್ರಹ್ಮಣ್ಯ ಎಂ. ಹೇಳಿದರು.
ಅವರು ಇಂದು ಆನಗೋಡ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ ಬೆಂಗಳೂರು “ಹಕ್ಕಿಗಳು ಹಾರುತಿವೆ ನೋಡಿದಿರಾ?!” ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
“ಹಕ್ಕಿಗಳು ಎಷ್ಟು ಪರಿಸರ ಸ್ನೇಹಿ ಆಗಿವೆ. ಹಣ್ಣುಗಳನ್ನು ತಿಂದು ಬೀಜ ಪ್ರಸಾರ ಮಾಡುವ ಮೂಲಕ ಗಿಡಮರಗಳು ನಿರಂತರವಾಗಿ ಬೆಳೆದುಕೊಂಡು ಬರುವಂತೆ ಮಾಡುತ್ತವೆ. ಹಾಗೆಯೇ ನಾವೂ ಕೂಡ ಮನೆಯಲ್ಲಿ ಹಣ್ಣುಗಳನ್ನು ತಿಂದಾದ ಮೇಲೆ ಬೀಜಗಳನ್ನು ಸಂರಕ್ಷಿಸಿ ನೆಟ್ಟು ಪರಿಸರವನ್ನು ಬೆಳೆಸಬೇಕು. ಮಕ್ಕಳಿಗೆ ಈಗಲೇ ಪಕ್ಷಿಗಳ ಕುರಿತು ಮಾಹಿತಿ ನೀಡಿ ಪರಿಸರ ಪ್ರೇಮ ಬೆಳೆಸುವಂಥ ಯೋಜನೆ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಯೋಗ್ಯವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗ್ರಾ.ಪಂ. ಉಪಾಧ್ಯಕ್ಷ ರಾಮಚಂದ್ರ ಚಿಕ್ಯಾನಮನೆ, “ಪರಿಸರ ಸಂರಕ್ಷಣೆಯ ಕೆಲಸ ಪ್ರತಿಯೊಬ್ಬರ ಕರ್ತವ್ಯವೆಂಬ ಭಾವನೆ ಮೂಡುವುದು ಅವಶ್ಯವಾಗಿದೆ” ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಸುಧಾಕರ ನಾಯಕ ಸ್ವಾಗತಿಸಿದರು.
ಐಎಫ್ಎ ಗ್ರ್ಯಾಂಟಿ, ಮಕ್ಕಳ ಸಾಹಿತಿ ಗಣೇಶ ಪಿ. ನಾಡೋರ ಪ್ರಾಸ್ತಾವಿಕವಾಗಿ ಮಾತನಾಡಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
