ಹಕ್ಕಿಗಳು ಹಾರುತಿವೆ ನೋಡಿದಿರಾ?!

ಪರಿಸರ ಕಾಪಾಡುವ ಮನಸ್ಥಿತಿ ಮನೆಯಿಂದಲೇ ಆರಂಭವಾಗಬೇಕು
: ಬಾಲಸುಬ್ರಹ್ಮಣ್ಯ

(ಯಲ್ಲಾಪುರ:ಜೂ.10-) “ಪರಿಸರ ಕಾಪಾಡುವ ಮನಸ್ಥಿತಿ ಮಕ್ಕಳಿಗೆ ಮನೆಯಿಂದಲೇ ಆರಂಭವಾಗಬೇಕು”ಎಂದು ಯಲ್ಲಾಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ಬಾಲಸುಬ್ರಹ್ಮಣ್ಯ ಎಂ. ಹೇಳಿದರು.
ಅವರು ಇಂದು ಆನಗೋಡ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿದ್ದ ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ ಬೆಂಗಳೂರು “ಹಕ್ಕಿಗಳು ಹಾರುತಿವೆ ನೋಡಿದಿರಾ?!” ಯೋಜನೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
“ಹಕ್ಕಿಗಳು ಎಷ್ಟು ಪರಿಸರ ಸ್ನೇಹಿ ಆಗಿವೆ. ಹಣ್ಣುಗಳನ್ನು ತಿಂದು ಬೀಜ ಪ್ರಸಾರ ಮಾಡುವ ಮೂಲಕ ಗಿಡಮರಗಳು ನಿರಂತರವಾಗಿ ಬೆಳೆದುಕೊಂಡು ಬರುವಂತೆ ಮಾಡುತ್ತವೆ. ಹಾಗೆಯೇ ನಾವೂ ಕೂಡ ಮನೆಯಲ್ಲಿ ಹಣ್ಣುಗಳನ್ನು ತಿಂದಾದ ಮೇಲೆ ಬೀಜಗಳನ್ನು ಸಂರಕ್ಷಿಸಿ ನೆಟ್ಟು ಪರಿಸರವನ್ನು ಬೆಳೆಸಬೇಕು. ಮಕ್ಕಳಿಗೆ ಈಗಲೇ ಪಕ್ಷಿಗಳ ಕುರಿತು ಮಾಹಿತಿ ನೀಡಿ ಪರಿಸರ ಪ್ರೇಮ ಬೆಳೆಸುವಂಥ ಯೋಜನೆ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಯೋಗ್ಯವಾಗಿದೆ” ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಗ್ರಾ.ಪಂ. ಉಪಾಧ್ಯಕ್ಷ ರಾಮಚಂದ್ರ ಚಿಕ್ಯಾನಮನೆ, “ಪರಿಸರ ಸಂರಕ್ಷಣೆಯ ಕೆಲಸ ಪ್ರತಿಯೊಬ್ಬರ ಕರ್ತವ್ಯವೆಂಬ ಭಾವನೆ ಮೂಡುವುದು ಅವಶ್ಯವಾಗಿದೆ” ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಸುಧಾಕರ ನಾಯಕ ಸ್ವಾಗತಿಸಿದರು.
ಐಎಫ್‍ಎ ಗ್ರ್ಯಾಂಟಿ, ಮಕ್ಕಳ ಸಾಹಿತಿ ಗಣೇಶ ಪಿ. ನಾಡೋರ ಪ್ರಾಸ್ತಾವಿಕವಾಗಿ ಮಾತನಾಡಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *