ಯುವಕವಿಯ ಭಾವಗಳು ಬಸುರಾದಾಗ

ಭಾವಗಳು ಬಸುರಾದಾಗ
ಲೇಖಕರು : ಅರುಣ ಕೊಪ್ಪ, ಪೋ. ಉಂಬ್ಳೇಕೊಪ್ಪ
ತಾಲೂಕ : ಶಿರಸಿ (ಉ.ಕ.) 581 318
ಮೊ. : 9483666942
(ಕವನ ಸಂಕಲನ )
ಅರುಣ ಕೊಪ್ಪರ ಭಾವಗಳು ಬಸುರಾದಾಗ ಕವನ ಸಂಕಲನಕ್ಕೆ ಹಿರಿಯ ಪತ್ರಕರ್ತ ಜಯರಾಮ ಹೆಗಡೆ ಶಿರಸಿ ಮುನ್ನುಡಿ ಬರೆದಿದ್ದಾರೆ. ಬೆನ್ನುಡಿಯಲ್ಲಿ ಸಾಹಿತಿ ಡಾ|| ಬೇರ್ಯರಾಮಕುಮಾರ ಅರುಣಕೊಪ್ಪ ರನ್ನು ಪರಿಚಯಿಸಿದ್ದಾರೆ.
ಸಾಲದು ಎಂಬಂತೆ ಡಾ|| ಅಜಿತ್ ಹೆಗಡೆ ಹರೀಶಿಯವರೂ ಕೂಡಾ ಇವರನ್ನು ಓದುಗರಿಗೆ ಪರಿಚಯಿಸಿದ್ದಾರೆ. ಇವರ ಮೊದಲ ಕವನ ಸಂಗ್ರಹ ಹನಿಗಳ ಹಂದರ ಎರಡನೆ ಸಾಹಿತ್ಯ ಕೃತಿಯೇ ಭಾವಗಳು ಬಸುರಾದಾಗ (ಕವನ ಸಂಕಲನ)
ಈ ಸಂಕಲನದಲ್ಲಿ ಸಣ್ಣದು ದೊಡ್ಡದು ಸೇರಿ ಒಟ್ಟೂ 76 ಕವನಗಳಿವೆ.
ಭಾವಗಳು ಬಸುರಾದಾಗ ಏನಾಗುತ್ತದೆ? ಎಂಬುದಕ್ಕೆ ಕವಿ ಅರುಣ ನಾಯ್ಕ ಕೊಪ್ಪರ ಈ ಕವನ ಸಂಕಲನವನ್ನು ಓದಿದರೆ ಎಲ್ಲವೂ ಗೊತ್ತಾಗುತ್ತದೆ. ಎಂದು ಒಂದೇ ಮಾತಿನಲ್ಲಿ ಇದಕ್ಕೆ ವಿಮರ್ಶಿಸಬಹುದು.
ಆದರೆ ಅದು ವಿಮರ್ಶಕನ ತರ್ಕಬದ್ಧ ಲಕ್ಷಣವಲ್ಲ ಮತ್ತು ಔಚಿತ್ಯವೂ ಅಲ್ಲ. ಮತ್ತು ಕವಿ ಇಟ್ಟುಕೊಂಡ ವಿಶಾಲ ಆಸೆ, ಆಕಾಂಕ್ಷೆ ಹರವನ್ನು ಮೊಟಕುಗೊಳಿಸಿದಂತಾಗಬಹುದೇನೂ?! ಅಲ್ಲದೆ ಬೆಳೆವ ಸಿರಿ ಮೊಳಕೆಯಲಿಯೇ ಚಿವುಟುವುದು ವಿಮರ್ಶೆ ಆಗಲಾರದು.
ಕಾವ್ಯದ ಸಾರ, ಅದು ಸಾಗಿದ ಸತ್ಪಥ ಮತ್ತು ಕಾವ್ಯದ ಓದು ಅದು ಹೇಳುವ ಫಲಶ್ರುತಿ ಮತ್ತು ಅದರ ಒಳಧ್ವನಿ ಏನು ಎಂಬುದನ್ನು ತೆರೆದಿಡುವುದೇ ವಿಮರ್ಶೆ ಎನಿಸಿಕೊಳ್ಳುತ್ತದೆ.
ಕಾವ್ಯ ಅಥವಾ ಕವನ ಅದೇನು ಅಷ್ಟು ಸುಲಭವೇನಲ್ಲ. ಹೀಗೆ ಕಾವ್ಯ ರೂಪದಲ್ಲಿ ಹೇಳುವಾಗ ವಿಷಯದ ಪ್ರತಿಪಾದನೆ ಇಟ್ಟುಕೊಂಡಿರುವ ವಸ್ತುವಿನ ಅಸ್ತಿತ್ವ ಮತ್ತು ಭಾವ ಪ್ರತಿಮೆಗಳ ತುಲನಾತ್ಮಕ ಚಿಂತನೆ ಮಾಡುವದು, ಕಾವ್ಯ ರಚನೆಯ ನೀತಿ ಸಂಹಿತೆಯ ಉಲ್ಲಂಘನೆಯಾಗದಂತೆ ರಚಿಸುವುದೇ ಕವಿಯ ಮೇಧಾಶಕ್ತಿಗೆ ಒಡ್ಡುವ ಸವಾಲಾಗಿರುತ್ತದೆ.
ಒಳ ಮನಸ್ಸಿನ ಆಳದಲ್ಲಿ ಹುದುಗಿದ ಯೋಚನೆಯನ್ನು ಭಾವನಾತ್ಮಕವಾಗಿ ಹೊರಹಾಕುವ ಮುನ್ನ ಅದು ಬಸುರಲ್ಲಿ ಬೆಳೆಯುತ್ತಿರುವ ಮಗುವಂತೆಯೇ ಎಂಬುದನ್ನು ಕೊಪ್ಪರÀವರು ತಮ್ಮದೇ ಆದ ಶೈಲಿಯಲ್ಲಿ ಸಾಕಷ್ಟು ಅರ್ಥಪೂರ್ಣವಾಗಿ ಹೇಳಿದ್ದಾರೆ.
ಉದಾ :- ಕವನ 1 ಅವ್ವನ ಕನಸು ಪ್ರೀತಿ ಪಾತ್ರ ನಾ ಇಷ್ಟಿತ್ತು ಮಮತೆಯ ಘನತೆ
ಸಲ್ಲಿಸುವ ಗೌರವಕೆ ಕಿಂಚಿತ್ತು ಹೆಚ್ಚಲ್ಲ ಈ ಹೃದಯದಿಂದ
ಹಸಿವಾದ ಈ ಮನಸ್ಸಿಗೆ ನೀಗಲು ಸಾಕು ನನ್ನ ಅವ್ವನ ಕನಸು
ಹೇಗೆ ತಮ್ಮ ಮನಸನ್ನು ಕಾವ್ಯಾತ್ಮಕವಾಗಿ ಮಾರ್ಪಡಿಸಿಕೊಳ್ಳುವ ರೀತಿ ತುಂಬಾ ಹರಿತ ಮತ್ತು ಮೇಲ್‍ಸ್ತರದ ವಿಚಾರಗಳಾಗಿವೆ.
ಕವನ 6 ವೇದಿಕೆ :
ಒಂದೇ ಬೇರು ಒಂದೇ ಕೊಂಬೆ ಹಸಿರು ಹಲವು
ಸದಾ ಏಕತೆಯ ಉಸಿರು ರಂಗು ಈ ಸಂಜೆ
ಹೀಗೆ ಹಲವು ಹತ್ತು ಕವನಗಳ ಸಾಲಿನಲ್ಲಿ ಸ್ರಜನಶೀಲತೆ ಇದೆ.
ಉದಾ : ಕವನ 8 :- ಮೂಡುವ ಕಾಡುವ ಮನಗಳ ಮಾತಿಗೆ
ಹಾಡು ಪಾಡುವ ಒಲವಿನ ಗಡಿಬಿಡಿಗೆ
ನಾ ಹೇಗೆ ಹೋಗಿ ಸಹಿಸಲಿ ನೀ ಹೇಳು
ಹೇಗೆ ಮನಸ್ಸಿನ ಭಾವನೆಗಳನ್ನು ಭಾವನೆಯ ಬಸುರಲ್ಲಿಟ್ಟು ಹೇಳುವ ಅವರ ಮನಸ್ಸಿನ ಸ್ಥಾಯಿ ಸ್ಥಿತಿ ಅದರ ಮೇರು ವಿಚಾರಕ್ಕೆ ಮೆರಗು ತಂದಿದೆ.
ಉದಾಃ ಕವನ 60 : – ಶೀರ್ಶಿಕೆಯ ಕವನ “ಭಾವಗಳ ಬಸುರಾದಾಗ” ಇದರಲ್ಲಿ
ಭಾವಗಳು ಬಸುರಾದಾಗ ಹರಿಸುವುದು ಸಂಗೀತ ಸಾಹಿತ್ಯದ ಕಾವ್ಯ ರಸದೌತಣ ಎಂದಿದ್ದಾರೆ.
ಭಾವದ ಅಭಿವ್ಯಕ್ತಿಗೆ ಸಾಹಿತ್ಯ ಸಂಗೀತಕಲೆ ಎಲ್ಲವೂ ಲೀನವಾಗುತ್ತದೆ ಎಂಬುದನ್ನು ಸಾರವತ್ತಾಗಿ ಬಣ್ಣಿಸಿದ್ದಾರೆ.
ಕವಿಯನ್ನು ಹೊಗಳಿ ಹೊಗಳಿ ಹೊನ್ನ ಶೂಲಕ್ಕೇರಿಸುವುದು ವಿಮರ್ಶೆಯೆ ಸರಿ ಸಮರ್ಪಕ ಪರಿಕಲ್ಪನೆಯಾಗಲಾರದು. ಕೆಲವು ಕವಿತೆಗಳು ಪ್ರಾಸರಹಿತವಾಗಿ ಅತಿ ಉದ್ದುದ್ದ ಸಾಲುಗಳಾಗಿ ಗದ್ಯದ ರೂಪ ತಳೆದಿರುವುದು ಓದುಗನ ಸಹನೆಯನ್ನು ಪರೀಕ್ಷಿಸುವಂತಿದೆ.
ಉದಾ ಹರಿಸಬೇಕೆಂದರೆ :
ನಿನ್ನ ನೆನಪಲಿ, ಗುಬ್ಬಿಗೂಡು, ನಮ್ಮ ಭಾರತ ಸಂವಿಧಾನ, ಹೀಗೆ ಕೆಲವಷ್ಟು ಕವನಗಳು ಮಿತಿಮೀರಿ ಬೆಳೆದು ನಿಂತಿವೆ. ಇವುಗಳು ಕಾವ್ಯಕ್ಕೆ ಭೂಷಣವಲ್ಲ ಎಂದೆನಿಸುತ್ತದೆ.
ಕಲ್ಪನೆಯನ್ನು ಕವನವನ್ನಾಗಿಸುವ ಶಕ್ತಿ ಈ ಕವಿಗೆ ಚೆನ್ನಾಗಿದೆ. ತುಂಬಾ ಭಾವಾಭಿವ್ಯಕ್ತಿಯಲ್ಲಿ ಅಭಿವ್ಯಕ್ತಿಸುವ ರೀತಿಯಲ್ಲಿ ಸುತ್ತು ಬಳಸದಿರುವುದು ಒಳ್ಳೆಯದು.
ಉದಾ : ನಾನು ಕವಿಯಲ್ಲ ಕವನ 9 :
ಮೂಡಿದ ಮನದ ಮರದಿ ಭಾವವೆಂಬ ಕೊಂಬೆ !
ಎತ್ತರದಿ ಸಿಗದ ಹಾಗೆ ಹಸಿರು ಎಲೆಗಳ ಚಪ್ಪರ ಮುಗಿಯದ ಹಕ್ಕಿ ಸಾಲಿನ ಆಸನ ನೋಡಿದಾಕ್ಷಣ ಕವನ
ನಾನು ಕವಿಯಲ್ಲ
ಕವಿಯ ವಿಚಾರಧಾರೆ ಹರಿತವಾಗಿದೆ.
ವೈಚಾರಿಕತೆಯ ಹರವು ವಿಶಾಲವಾಗಿದೆ. ಸಂವೇದನಾಶೀಲತೆ ಎಲ್ಲಾ ಕವನಗಳಲ್ಲಿಯೂ ಇದೆ.
ಮನಸ್ಸಿಗೆ ಮುದ ನೀಡುವ ಶಕ್ತಿ ಕವನಗಳಿಗಿದೆ. ಬಸಿರು ಎನ್ನುವ ಶಬ್ದಾರ್ಥವೇ ಹಡೆಯುವ ಮೊದಲು ಇರುವ ತಾಯಿಯ ಸ್ಥಿತಿ. ಹುಟ್ಟುವ ಮಗುವಿನ ಬಗ್ಗೆ ತಾಯಿ ಏನೆಲ್ಲ ಚಿಂತಿಸುತ್ತಾಳೆ. ಏನೆಲ್ಲ ಕನಸು ಕಾಣುತ್ತಾಳೆ. ಹೇಳತೀರದು. ಹುಟ್ಟುವ ಮಗುವಿನ ಬಗ್ಗೆ ತರತರದ ಕನಸು ಕಾಣುತ್ತಾಳೆ. ಸರ್ವಾಂಗ ಸುಂದರವಾಗಿ ಮಗು ಹುಟ್ಟಲಿ ಎಂದು ಹಾರೈಸುತ್ತಾಳೆ. ಈ ಕವಿಯ ಎಲ್ಲ ಕವಿತೆಯಲ್ಲಿಯೂ ಇಂತಹ ಹಾರೈಕೆ ಎದ್ದು ಕಾಣುತ್ತದೆ.
ಶಬ್ದಗಳ ಕೊರತೆ ಈ ಕವಿಗೆ ಇಲ್ಲ. ವಸ್ತುವನ್ನು ಹುಡುಕುವ ದಿವ್ಯ ಶೋಧಕ ಶಕ್ತಿ ತುಂಬಾ ಇದೆ.
ಗೂಡ ನಿಗೂಢವಾಗಿ ವಿಷಯವನ್ನು ಸಾದರಪಡಿಸುವ ರೀತಿ ಓದುಗನಿಗೆ ಸ್ವಲ್ಪ ಕಬ್ಬಿಣದ ಕಡಲೆಯಾದರೂ ಪ್ರಬುದ್ಧ ಓದುಗನಿಗೆ ಏನೂ ಕಷ್ಟವೆನಿಸಲಾರದು. ಇವರ ಬರಹ ಪ್ರಬುದ್ಧತೆಯ ಪ್ರಬಲ ಪ್ರತಿಬಿಂಬ ಇವರ ಮನಸ್ಸು ಎನ್ನಬಹುದು. ಕವಿಗೆ ತುಂಬಾ ಭವಿಷ್ಯವಿದೆ. ವಿಚಾರದ ಅರಿಕೆ ಸಾಕಷ್ಟು ಮನಸ್ಸಿನ ಆಳಕ್ಕಿಳಿದಾಗಲೇ ಚಿಗುರುವ ಸಾಹಿತ್ಯದ ಕೊಂಬೆ ಬಲಿಷ್ಠವಾಗುತ್ತದೆ. ಕಾವ್ಯಕ್ಕೆ ಗಟ್ಟಿತನ ಬರುತ್ತದೆ. ವಿಚಾರವ ಅದುಮಿ ಹಿಡಿದಾಗ ಭಾವನೆಗಳು ಸ್ಪೋಟಗೊಳ್ಳುತ್ತವೆ ಎಂಬುದನ್ನು ಕೆಲವು ಕವನಗಳು ಸಾಬೀತುಪಡಿಸಿವೆ.
ಕಾವ್ಯವೆಂದರೆ ಕಲ್ಪನೆ ಮತ್ತು ಭಾವಗಳ ಸಂಗಮ (ಹ್ಯಾಜ್‍ಲೀಟ್) ಇಂಗ್ಲೀಷ್ ಕವಿಕಾವ್ಯವೆಂದರೆ ಸೌಂದರ್ಯದ ಲಯಬದ್ಧ ಸೃಷ್ಟಿ ಎಂದಿದ್ದಾರೆ. (ಕೆಬ್ಲ) ಕವಿ
ಅಚಿಡಿಟಥಿಟe ಹೇಳಿದ್ದಾರೆ. Poeಣಡಿಥಿ ತಿe ತಿiಟಟ ಛಿಚಿಟಟ musiಛಿಚಿಟ ಣhough ಎohಟಿsoಟಿ ಸಂಗೀತಮಯ ಚಿಂತನೆಯೇ ಕಾವ್ಯ ಹೇಳುತ್ತಾರೆ.
ಎohಟಿsoಟಿ ಹೇಳುತ್ತಾರೆ. Poeಣಡಿಥಿ is meಣಡಿiಛಿಚಿಟ ಛಿomಠಿosiಣioಟಿ (ಕಾವ್ಯವೆಂದರೆ ಚಂದೋಬಂದ ರಚನೆ)
ಎರ್ಡಸ್ ವಿತ್ರ ಹೇಳುತ್ತಾನೆ (Poeಣಡಿಥಿ is ಣhe bಡಿeಚಿಣh ಚಿಟಿಜ ಜಿiಟಿeಡಿ sಠಿiಡಿiಣ oಜಿ ಚಿಟಟ ಞಟಿoತಿಟeಜge ) ಕಾವ್ಯವು ಎಲ್ಲ ಜ್ಞಾನಕ್ಕಿಂತ ಮಿಗಿಲಾದ ಚೈತನ್ಯ ಉಸಿರು.
ಮೇಲೆ ಹೇಳಿದ ಈ ಎಲ್ಲ ಅಂಶಗಳನ್ನು ಈ ಕವಿ ತಿಳಿದುಕೊಂಡು ಮುನ್ನಡೆಯಲಿ.
ಸಮಕಾಲೀನ ಸಮಸ್ಯೆಗಳ ಬಗ್ಗೆ ಕವಿ ದೃಷ್ಟಿ ಹಾಯಿಸಿದರೆ ಒಳಿತು. ಒಟ್ಟಾರೆ ಕವಿಯ ಈ ಎರಡನೆ ಹೆಜ್ಜೆ ಗಟ್ಟಿತನದ ದಿಟ್ಟ ಹೆಜ್ಜೆಯಾಗಿದೆ. ಕವಿಯ ಭವಿಷ್ಯ ಉಜ್ವಲವಾಗಲಿ, ಸಾಹಿತ್ಯಯಾನ ಚೆನ್ನಾಗಿ ಸಾಗಲಿ ಎಂದು ಹಾರೈಸುವೆ. ಇಂತಿ
ಶ್ರೀ ಜಿ.ವಿ. ಕೊಪ್ಪಲತೋಟ
(ಕವಿಗಳು ವಿಮರ್ಶಕರು)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *