ರೈತನ ಕಣ್ಣೀರು

ರೈತ ದೇಶದ ಬೆನ್ನೆಲುಬು
ಎಂದು ಭಾಷಣ ಬೀಗಿದರೆ ಸಾಕೆ|
ನೋವುಗಳೇ ಗುಡುಗಿ ರೈತನ ಕಣ್ಣೀರು
ಮಳೆಯಾಗಿ ಹರಿಯುವುದು ಯಾಕೆ||
ಮೂರು ಹೊತ್ತು ಅನ್ನವೇ ಬೇಕು
ಪ್ರತಿಯೊಬ್ಬರ ಬದುಕಿನ ನಾಳೆಗೆ|
ಧಾವಿಸಿ ಬನ್ನಿರಿ ಎಲ್ಲರೂ
ಒಗ್ಗಟ್ಟಾಗಿ ಭವಿಷ್ಯದ ಏಳ್ಗೆಗೆ||
ಮುಗಿಲು ಮುಟ್ಟುವವರೆಗೂ ಕಾವು
ಹೋರಾಡಿ ಶ್ರಮದ ಗೆಲುವಿಗೆ|
ಅನ್ಯಾಯ ದೌರ್ಜನ್ಯಗಳ ತಡೆಗೆ
ನಿಲ್ಲಿ ನೇಗಿಲ ಯೋಗಿಯ ನೆರವಿಗೆ…ಒಪ್ಪತ್ತು ಗಂಜಿಗೆ ದಿನವಿಡೀ ದುಡಿದು
ಬೆವರಲ್ಲಿ ಮೈ ಬಸಿಯುತ್ತಿರುವನು|
ಕೇಳುವವರಿಲ್ಲದೆ ಇವನ ಪಾಡು
ಹಾಡುಹಗಲೇ ಕುಸಿದು ಕುಳಿತಾನು||
ಕೀಟನಾಶಕ ರಸಗೊಬ್ಬರ
ವಿದ್ಯುತ್ ನೀರು ದುಬಾರಿ ಪರಿಕರ|
ಭರವಸೆ ನೀಡಿದ ಸರಕಾರ
ಸಹಾಯಧನ ಕಡಿತಗೊಳಿಸಿ ಹರೋಹರ||
ಕಷ್ಟ ನಷ್ಟಗಳ ಆಗರ
ಜೀವನವೇ ಇಲ್ಲಿ ಅತಿ ಭಾರ|
ಪ್ರತಿಭಟಿಸಿ ಸಿಡಿದೆದ್ದು ನಿಂತರೆ ರೈತ
ನಾಡಿಗೆ ನಾಡೇ ಹಾಹಾಕಾರ…ಅತಿವೃಷ್ಟಿ ಅನಾವೃಷ್ಟಿ|
ಬಡತನವೇ ಇಲ್ಲಿ ಪಿತ್ರಾರ್ಜಿತ ಆಸ್ತಿ ||
ಅಸ್ಥಿರ ಮಾರುಕಟ್ಟೆಯ ವಸತಿ
ವೈಜ್ಞಾನಿಕ ಸಂಸ್ಕರಣೆಯು ನಾಸ್ತಿ||
ಖರ್ಚು ವೆಚ್ಚವಾಗಿ ಅಗಣಿತ
ಬೆಂಬಲ ಬೆಲೆಯಿಲ್ಲದೆ ಅತ್ತಿತ್ತ|
ಮಧ್ಯವರ್ತಿಯ ಹಾವಳಿ ವಿಪರೀತ
ರಾಜಕೀಯ ಇಚ್ಛಾಶಕ್ತಿಗಿದೆ ಕೊರೆತ||
ಬರಗಾಲದ ಬರೆ
ತಾಳದ ಭಾದೆ ಸಾಲದ ಮೊರೆ|
ದೀರ್ಘಕಾಲ ಕಿರುಕುಳದ ಹೊರೆ
ಕೃಷಿ ಪ್ರಗತಿಗೆ ಓಗೊಡಲಿ ಈ ಕರೆ….*ಬಸವರಾಜ ಕಾಸೆ*
ಮು| ಪೋ| ದೇವಾಪೂರ
ತಾ| ಜಿ| ವಿಜಯಪುರ
ಪಿನ್ ಕೋಡ್ 586125
ಮೊಬೈಲ್ ಸಂಖ್ಯೆ 7829141150
ಮಿಂಚಂಚೆ pr***********@***il.comReplyForward

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *