ಮೂಕಜ್ಜಿಯ ಕನಸುಗಳು


ಮುನ್ನುಡಿ-
ಮನೋಜೀವಿಯಾದ ಮಾನವ ಕುಲವು ಈ ಭೂಮಿಯ ಮೇಲೆ ನೆಲೆಸಿದ ಅಲ್ಫಾವಧಿಯಲ್ಲಿ ಅಮಿತ ವಿಶ್ವಗಳಿಂದ ಕೂಡಿರುವ, ಬಿಲಿಯಗಟ್ಟಲೆ ವರ್ಷಗಳಿಂದ ಕಾಣಿಸಿಕೊಂಡು ಬಂದ ಮಹಾ ಮಹ ಜಗತ್ತಿನ ಬರಿಯ ಸೆರೆಗೊಂದರ ಸೂಕ್ಷ್ಮ ಎಳೆಯನ್ನು ಕೂಡ ಚೆನ್ನಾಗಿ ಕಂಡಿರಲಾರದು.
ಆದರೆ ಆತ ತನ್ನ ಅಲ್ಪಮತಿಗೆ ಗೋಚರಿಸಿದ ಅದ್ಬುತ, ಆಶ್ಚರ್ಯಗಳಿಂದ ಚಕಿತಗೊಂಡು- ಈ ಜಗತ್ತೇನು ? ಯಾರು ಅದನ್ನು ಸೃಷ್ಟಿಸಿದರು, ಯಾಕೆ,ನಾನು ಎಂಥವ, ಯಾತಕ್ಕಿದ್ದೇನೆ- ಎಂಬ ಪ್ರಶ್ನೆ ಕೇಳತೊಡಗಿದ.
ಬರಿದೆ ಪ್ರಶ್ನೆ ಕೇಳಿದರೆ ಸಾಲದಲ್ಲ : ತನ್ನ ಎಟುಕಿಗೆ ಸಿಗದಂಥ ವಿಷಯವನ್ನು ಸಿಕ್ಕಿದಂತೆಯೇ ನೆನೆದು, ಮನಸ್ಸನ್ನು ಕಲ್ಪನಾಲೋಕಕ್ಕೆ ಹರಿಯಗೊಟ್ಟು, ಅಲ್ಲಿ ಕಂಡ ಕನಸನ್ನು ನಿಜ, ಸತ್ಯ ಎಂದು ಸಾರುತ್ತಲೂ ಬಂಧ !
ಅವರವರ ಕಲ್ಪನೆ ಎಷ್ಟೆಷ್ಟು ಬೆಡಗಿನದೋ, ಭವ್ಯವೋ, ಅದರ ಮೇಲಿಂದ ಅವರು ಹೇಳಿದ್ದೇ ಸತ್ಯವೆನಿಸಿತು.
ಅಷ್ಟೊಂದು ವಿಸ್ತಾರಕ್ಕೆ ಕಲ್ಪನೆಯನ್ನು ಬೆಳೆಯಿಸಲಾರದವರು, ಅಂಥದನ್ನು ಮೂಕ ಮೌನದಿಂದ ಹಿರಿಯರಾಡಿದ ಒಂದೊಂದು ಸೊಲ್ಲೂ ಅಕ್ಷರಶಃ ಸತ್ಯವೆಂದೂ ತಿಳಿದು, ನಂಬಿ ಬಂದರು, ಸಾವಿರ ಜನರು ಸಾವಿರ ಬಗೆಗಳಿಂದ ಹರಿಯಿಸಿದ ಈ ಕಲ್ಪನಾವಿಲಾಸಗಳು ಪರಸ್ಫರ ಘರ್ಷಣೆಗೆ ಕಾರಣವಾದುದೂ ಉಂಟು.
ಭಾರತ ದೇಶ, ಇಲ್ಲಿಯೇ ಇದ್ದ ಜನರು, ಆಮೇಲೆ ಬಂದ ಜನರು ಸಹ ಇದಕ್ಕೆ ಆಕ್ಷೇಪವಲ್ಲ. ಇಲ್ಲಿನ ಜನರು ಪರಂಪರೆಯಿಂದ ಪಡೆದು ಬಂದ ಕಲ್ಪನಾವಿಲಾಸಗಳನ್ನು ಈ ಕಾದಂಬರಿಯ ಮೂಕಜ್ಜಿ ತನ್ನ ಕಲ್ಪನಾವಿಲಾಸದಿಂದ ಕೆದಕಿ ನೋಡುತ್ತಿದ್ದಾಳೆ.
ಈ ಕಾದಂಬರಿಗೆ ಕಥಾನಾಯಕನಿಲ್ಲ: ನಾಯಕಿಯಿಲ್ಲ. ಮೂಕಜ್ಜಿಯೂ ಇಲ್ಲಿ ಕಥಾನಾಯಕಿಯಲ್ಲ. ಸಾಂಪ್ರದಾಯಿಕತೆಯಿಂದ ಹೆರೆಗಟ್ಟಿದ ಮನಸ್ಸುಗಳನ್ನು ತುಸು ತುಸುವಾಗಿ ಕಾಯಿಸಿ, ಕರಗಿಸುವ ಕೆಲಸ ಅವಳದ್ದು. ಅಂಥ ಅಜ್ಜಿಯೊಬ್ಬಳು ಇದ್ದಾಳೆಯೆ ಎಂಬ ಸಂಶಯ ಬಂದರೆ, ನಮ್ಮ ಸಂಸ್ಕøತಿಯ ನಂಬಿಕೆಗಳ ಕುರಿತಾದ ಸಂಶಯ ಪಿಶಾಚಿಯ ರೂಪವೇ ಅವಳೆಂದು ತಿಳಿದರಾಯಿತು, ಆದರೂ ಅವಳು ನಮ್ಮಲ್ಲನೇಕರಲ್ಲಿ ಪಿಶಾಚಿಯಂತಲ್ಲ, ಪ್ರಾಮಾಣಿಕ ಸಂದೇಹಗಳ ರೂಪದಲ್ಲಿ ಬದಿಕಿಕೊಂಡೇ ಇದ್ದಾಳೆ. ಅವಳ ಮೊಮ್ಮಗನಾದ ಸುಬ್ಬರಾಯನಂಥವರು ಹಲವರಿದ್ದಾರೆ.
ಆ ಅಜ್ಜಿ, ಮೊಮ್ಮಗ ಇಬ್ಬರೂ ಸೇರಿ ನಾಲ್ಕೈದು ಸಾವಿರ ವರ್ಷಗಳಿಂದ ಹರಿದು ಬಂದಿರುವ ‘ ಸೃಷ್ಟಿಸಮಸ್ಯೆ’ಯೊಂದನ್ನು ಮಥಿಸಲು ಇಲ್ಲಿ ಯತ್ನಿಸುತ್ತಾರೆ. ಅವಾಸ್ತವಿಕಳೆನಿಸುವ ಅಜ್ಜಿ, ಅನೇಕ ವಾಸ್ತವಿಕ ಇತಿಹಾಸಾಂಶಗಳನ್ನು ತನ್ನ ಒಳದಿಳಿವಿನಿಂದ ನಮ್ಮ ಮುಂದಕ್ಕೆ ಇರಿಸುತ್ತಾಳೆ.
ಕಾದಂಬರಿಯ-ನಾಗಿ, ರಾಮಣ್ಣ, ಜನ್ನ ಮೊದಲಾದವರು ಸೃಷ್ಟಿ ಶಕ್ತಿಯನ್ನು ಅವಹೇಳನ ಮಾಡುವ ಮನೋಧರ್ಮಕ್ಕೆ ವಾದಿಗಳೋ , ಪ್ರವಾದಿಗಳೋ, ಸಾಕ್ಷಿದಾರರೋ ಆಗಿ ಕಾಣಿಸುತ್ತಿದ್ದಾರೆ.
ತಂತಮ್ಮ ಅಪಕ್ವ ನಂಬುಗೆಗಳನ್ನು ಪರರ ಮೇಲೆ ಹೊರಿಸಿದ ಜನರ ಕಥೆಯೂ ಇಲ್ಲಿದೆ: ಅದರಿಂದಾಗಿ ಇಂದಿನ ನಮಗೆ ಕೇಳಿಸದೆ ಹೋದ ಕೆಲವು ಯಾತನೆಯ ಧ್ವನಿಗಳನ್ನೂ ಕೇಳುವಿರಂತೆ.
ಅಕ್ಟೋಬರ್ 10, 1968 ಇತಿ
ಪುತ್ತೂರು,ದ.ಕ ಡಾ.ಶಿವರಾಮ ಕಾರಂತ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *