ಅಂಡಮಾನ್ ಲಡಾಯಿ ಕತೆ!


ಅನುಪಮಾರ ಅಂಡಮಾನ್‍ವಾಸ್ತವ ಪಯಣ ಅಮಾನುಷ್ಯತ್ವದ ಅತಿಗೆ ಉತ್ಕøಷ್ಟ ನಿದರ್ಶನ
ಆಧುನಿಕ ಆಕರ್óಣೆಗಳ ಅನ್ವೇಷಣೆಗಳಿಂದ ಲಯತಪ್ಪಿ ಮಿತಿಮೀರಿ ಬಹುದೂರ ಸಾಗಿರುವ ಆಧುನಿಕ ಮಾನವ ಈಗೀಗ ಮಾನವನಮೂಲ ಪುರುಷ ಕೋತಿಗಳ ಕಾಟಕ್ಕೆ ಬಲಿಯಾಗುತಿದ್ದಾನೆ. ವಿಶೇಶವೆಂದರೆ..
ಕೋತಿಗಳಂತೆ ಕಾಡುಬಿಟ್ಟು ನಾಡಿಗೆಬರುವ ಸ್ವಾತಂತ್ರ್ಯವೇ ಇಲ್ಲದ ಆದಿಮಾನವ ಜನಾಂಗದ ಪ್ರಸ್ತುತತೆ ವಾಸ್ತವದ ಧಾರುಣತೆಯನ್ನು ಈಗಿನ ಜನತೆ ಕಲ್ಫಿಸಿಕೊಳ್ಳಲು ಸಾಧ್ಯವೇ? ನೋ.ಚಾನ್ಸ್.
ಏಕೆಂದರೆ ನಮ್ಮ ಪ್ರಗತಿ ವಿಸ್ಮøತಿಗೆ ಕಾರಣವಾಗಿದೆ. ಕಾಂಕ್ರೀಟ್‍ಕಾಡಿನ ನಿರ್ಬಂಧಿತ ಹವಾನಿಯಂತ್ರಿತ ಕೋಣೆಯೊಳಗೆ ನಮ್ಮದೇ ಸಂಸಾರ,ಕುಟುಂಬಗಳೆಂಬ ‘ಲೋಕಸೃಷ್ಟಿಸಿಕೊಂಡಿರುವ ನಮಗೆ ಸಹಜ ಸಂವೇದನೆಗಳೇ ಸತ್ತುಹೋಗಿವೆ. ನಮ್ಮ ಸಂಬಮಧಿಗಳು ಅಂಡಮಾನ್ ಪ್ರವಾಸಕ್ಕೆ ತೆರಳಿದಾಗ ಅಲ್ಲಿರುವ ಸಂಬಂಧಿಗಳ ಬಗ್ಗೆ ಮಾತು ಪ್ರಾರಂಭವಾದಾಗ ನನ್ನ ತಲೆಯಲ್ಲಿ 20 ವರ್ಷಗಳ ಹಿಂದಿನ ಮಲಿಯಾಳಿ ಸಿನೆಮಾ ಕಾಲಾಪಾನಿ (ಸಜಾ ಇ-ಕಾಲಾಪಾನಿ) ನೆನಪಾಗುತಿತ್ತು. ನಮಗೆಬಾರದ ಭಾಷೆಯ ವಿಶಿಷ್ಟಚಿತ್ರ ನಮಗೆ ರವಾನಿಸಿದ ಕುತೂಹಲ ನೆನಪಿಸಿದ ಇತಿಹಾಸ ಆ ನಂತರ ಅಂಡಮಾನ್ ಬಗ್ಗೆ ನನಗೆ ಸಿಕ್ಕ ಸಾಹಿತ್ಯ ಮಾಹಿತಿಗಳು ಅಂಡಮಾನ್ ಬಗ್ಗೆ ಒಂಥರಾ ವಿಚಿತ್ರ,ವಿಶೇಶ ಕಲ್ಫನೆಗೆ ಕಾರಣವಾಗಿದ್ದವು.
ಮೊನ್ನೆ ಡಿ.ಬಿ.ಯವರು ಕೊಟ್ಟ ಡಾ. ಎಚ್.ಎಸ್. ಅನುಪಮಾರ ‘ಅಂಡಮಾನ್ ಕಂಡಹಾಗೆ’ ಪುಸ್ತಕ ನನ್ನನ್ನು ನಿಜಕ್ಕೂ ಅಲ್ಲಾಡಿಸಿಬಿಟ್ಟಿತ್ತು.
ಅಂಡಮಾನ್ ದ್ವೀಪ ಆದಿಮಾನವನ ಮುಗ್ಧತೆ ಅನಿವಾರ್ಯತೆ,ಆಧುನಿಕ ಯುದ್ಧ ಸ್ವಾತಂತ್ರ್ಯ, ಅಧಿಕಾರ-ಪ್ರಭುತ್ವ ಎಲ್ಲದಕ್ಕೂ ಸಾಕ್ಷಿಯಾಗಿ ಹ್ಯಾಗೆ ಪ್ರತ್ಯೇಕತೆಯ ಅಪಾಯವನ್ನು ಸಹಿಸಿಕೊಂಡಿದೆ ಎಂದು ಯೋಚಿಸಿದಾಗ ನೋವು,ವೇದನೆಗಳ ಜೊತೆಜೊತೆಗೇ ಆಶ್ಚರ್ಯ-ವಿಸ್ಮಯ ಆಗದೆ ಇರುವುದಿಲ್ಲ.
ಮನುಷ್ಯನನ್ನು ಮನುಷ್ಯನನ್ನಾಗಿ ಕಾಣದ ಜಾಗತಿಕ ವಾಸ್ತವ, ಭಾರತದ ಹೀನ ಚಾರಿತ್ರ್ಯಕ್ಕೆ ಹಿಡಿದ ಕನ್ನಡಿ ಅಂಡಮಾನ ವಾಸ್ತವ ಮತ್ತು ಪ್ರಸ್ತುತ ವಾತಾವರಣ ಹಾಗೂ ಇತಿಹಾಸ. ಮಾನವವಿಶಿಷ್ಟ ಪ್ರಬೇಧವೊಂದು ಅಳಿವಿನ ಅಂಚಿಗೆ ಸರಿದು ಕ್ರಮೇಣ ಚೇತರಿಸಿಕೊಳ್ಳುತ್ತಾ ಪ್ರಾಣಿಸದ್ರಶ ಬದುಕು ಸಾಗಿಸುತ್ತಿರುವುದನ್ನು ವಿಶೇಷತೆ ಎನ್ನಬೇಕೋ,
ಅವನತಿ ಎನ್ನಬೇಕೋ? ಮತ್ತೇನೆನ್ನಬೇಕು?
ಆಧುನಿಕ ಸುಧಾರಿತ ನಾಗರಿಕತೆ ತನ್ನ ಮಿತಿಅರಿಯದೆ ಅನೇಕರ ವ್ಯಾಪ್ತಿ-ಮಿತಿಗಳನ್ನು ಸಹಕರಿಸಿದ ಈಗಿನ (ಪ್ರಸ್ತುತ) ಪೈಶಾಚಿಕತೆ ಅಂಡಮಾನ್ ದ್ವೀಪವನ್ನು ಹೇಗೆಲ್ಲಾ ಹಿಂಸಿಸಿದೆ ಇದಕ್ಕೆ ಪರಿಹಾರ ಮಾರ್ಗ ಯಾವುದು? ಇವುಗಳನ್ನೆಲ್ಲಾ ಯೋಚಿಸುವಂತೆ ಮಾಡುವ ಲಡಾಯಿಪ್ರಕಾಶನದ ಅಂಡಮಾನ್ ಕಂಡಹಾಗೆ ಇತ್ತೀಚಿನ ಅಮೋಘಪ್ರಕಟಣೆ.
ಈ ಪುಸ್ತಕ ಓದಿಸಲು ಕಾರಣರಾದ ಲಡಾಯಿಬಸು, ಡಾ.ಅನುಪಮಾಕೃಷ್ಣ, ವೀರಲಿಂಗನಗೌಡ್ರು, ಡಿ.ಬಿ ಮಾವ, ಎಲ್ಲರಿಗೂ ನಾನಂತೂ ಋಣಿ. ಈ ಪುಸ್ತಕದ ಒಂದು ಪುಟ್ಟ ಬರಹದ ಮೂಲಕ ಸಮಾಜಮುಖಿ ಹುತಾತ್ಮರಾದ, ಹುತಾತ್ಮರಂತೆ ಬದುಕುತ್ತಿರುವ ಹುತಾತ್ಮರಾಗಲಿರುವವರಿಗೂ ಸ್ಮರಿಸಿ ಓದುಗರಿಗೆ ಅಂಡಮಾನ್ ಪರಿಚಯಿಸುತ್ತದೆ.
-ಕನ್ನೇಶ್.

(ಅಂಡಮಾನ್ ಕಂಡಹಾಗೆ-ಡಾ. ಎಸ್.ಎಚ್. ಅನುಪಮಾ)
ಮಹುವಾಮರ ಹೂಬಿಟ್ಟಾಗ ಅಥವಾ ಜೇನು ದೊರೆತಾಗಲಷ್ಟೇ ಮದ್ಯತಯಾರಿಸಿ ಕುಡಿಯತೊಡಗಿದ್ದವರಿಗೆ ಕ್ರೇಟುಗಟ್ಟಲೇ ಮದ್ಯ ಕಣ್ಣೆದುರು ಕುಣಿಯತೊಡಗಿದರೆ? ಬೇಟೆಗಾರ ಕುಲಗಳಿಗೆ ಅಕ್ಕಿ,ಗೋಧಿ-ಸಕ್ಕರೆಗಳನ್ನು ರೇಷನ್ನಿನಲ್ಲಿ ಪೂರೈಸಿ ಆಹಾರಭದ್ರತೆ ದೊರಕಿದರೆ?
ಮೈಕೈಗೆ ಬಳಿದ ಜೇಡಿಮಣ್ಣೇ ಉಡುಪಾದ ನಗ್ನ ಅರಣ್ಯವಾಸಿಗಳಿಗೆ ಅಂದಚೆಂದದ ಉಡುಪು ಅದರಿಂದ ಉತ್ಪ್ರೇಕ್ಷೆಗೊಳ್ಳುವ ದೇಹ ಸೌಂದರ್ಯ ನೋಡಿಕೊಳ್ಳಲೊಂದು ಕನ್ನಡಿ ಸಿಕ್ಕರೆ?
ಹಗಲು ಹೊತ್ತಿನ ವಿರಾಮ ಕಳೆಯಲು ಹಾಡು,ನರ್ತನ, ವಾದನದಲ್ಲಿ ತೊಡಗುತಿದ್ದ ಸಂಗೀತಪ್ರಿಯ ಬುಡಕಟ್ಟುಗಳಿಗೆ ರಾತ್ರಿಹಗಲೆನ್ನದೆ ಕೂಗುವ ಟಿವಿ. ಒಂದು ಬಟನ್ನಿನಷ್ಟೇ ದೂರವೆಂದಾದರೆ?
ಕೈಗಾರಿಕೀಕರಣಗೊಂಡ ಜಗತ್ತಿನ ಆಮಿಷಗಳು ಬುಡಕಟ್ಟುಗಳನ್ನು ಅಯಸ್ಕಾಂತದಂತೆ ಸೆಳೆಯುತ್ತವೆ, ಇದರಿಂದ ಏನಾಗುತ್ತದೆ ಎನ್ನುವುದಕ್ಕೆ ಅಂಡಮಾನ್ ಬುಡಕಟ್ಟುಗಳು ಉದಾಹರಣೆಯಾಗಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *