ಮೂಕಜ್ಜಿಯ ಕನಸುಗಳು


ಮುನ್ನುಡಿ-
ಮನೋಜೀವಿಯಾದ ಮಾನವ ಕುಲವು ಈ ಭೂಮಿಯ ಮೇಲೆ ನೆಲೆಸಿದ ಅಲ್ಫಾವಧಿಯಲ್ಲಿ ಅಮಿತ ವಿಶ್ವಗಳಿಂದ ಕೂಡಿರುವ, ಬಿಲಿಯಗಟ್ಟಲೆ ವರ್ಷಗಳಿಂದ ಕಾಣಿಸಿಕೊಂಡು ಬಂದ ಮಹಾ ಮಹ ಜಗತ್ತಿನ ಬರಿಯ ಸೆರೆಗೊಂದರ ಸೂಕ್ಷ್ಮ ಎಳೆಯನ್ನು ಕೂಡ ಚೆನ್ನಾಗಿ ಕಂಡಿರಲಾರದು.
ಆದರೆ ಆತ ತನ್ನ ಅಲ್ಪಮತಿಗೆ ಗೋಚರಿಸಿದ ಅದ್ಬುತ, ಆಶ್ಚರ್ಯಗಳಿಂದ ಚಕಿತಗೊಂಡು- ಈ ಜಗತ್ತೇನು ? ಯಾರು ಅದನ್ನು ಸೃಷ್ಟಿಸಿದರು, ಯಾಕೆ,ನಾನು ಎಂಥವ, ಯಾತಕ್ಕಿದ್ದೇನೆ- ಎಂಬ ಪ್ರಶ್ನೆ ಕೇಳತೊಡಗಿದ.
ಬರಿದೆ ಪ್ರಶ್ನೆ ಕೇಳಿದರೆ ಸಾಲದಲ್ಲ : ತನ್ನ ಎಟುಕಿಗೆ ಸಿಗದಂಥ ವಿಷಯವನ್ನು ಸಿಕ್ಕಿದಂತೆಯೇ ನೆನೆದು, ಮನಸ್ಸನ್ನು ಕಲ್ಪನಾಲೋಕಕ್ಕೆ ಹರಿಯಗೊಟ್ಟು, ಅಲ್ಲಿ ಕಂಡ ಕನಸನ್ನು ನಿಜ, ಸತ್ಯ ಎಂದು ಸಾರುತ್ತಲೂ ಬಂಧ !
ಅವರವರ ಕಲ್ಪನೆ ಎಷ್ಟೆಷ್ಟು ಬೆಡಗಿನದೋ, ಭವ್ಯವೋ, ಅದರ ಮೇಲಿಂದ ಅವರು ಹೇಳಿದ್ದೇ ಸತ್ಯವೆನಿಸಿತು.
ಅಷ್ಟೊಂದು ವಿಸ್ತಾರಕ್ಕೆ ಕಲ್ಪನೆಯನ್ನು ಬೆಳೆಯಿಸಲಾರದವರು, ಅಂಥದನ್ನು ಮೂಕ ಮೌನದಿಂದ ಹಿರಿಯರಾಡಿದ ಒಂದೊಂದು ಸೊಲ್ಲೂ ಅಕ್ಷರಶಃ ಸತ್ಯವೆಂದೂ ತಿಳಿದು, ನಂಬಿ ಬಂದರು, ಸಾವಿರ ಜನರು ಸಾವಿರ ಬಗೆಗಳಿಂದ ಹರಿಯಿಸಿದ ಈ ಕಲ್ಪನಾವಿಲಾಸಗಳು ಪರಸ್ಫರ ಘರ್ಷಣೆಗೆ ಕಾರಣವಾದುದೂ ಉಂಟು.
ಭಾರತ ದೇಶ, ಇಲ್ಲಿಯೇ ಇದ್ದ ಜನರು, ಆಮೇಲೆ ಬಂದ ಜನರು ಸಹ ಇದಕ್ಕೆ ಆಕ್ಷೇಪವಲ್ಲ. ಇಲ್ಲಿನ ಜನರು ಪರಂಪರೆಯಿಂದ ಪಡೆದು ಬಂದ ಕಲ್ಪನಾವಿಲಾಸಗಳನ್ನು ಈ ಕಾದಂಬರಿಯ ಮೂಕಜ್ಜಿ ತನ್ನ ಕಲ್ಪನಾವಿಲಾಸದಿಂದ ಕೆದಕಿ ನೋಡುತ್ತಿದ್ದಾಳೆ.
ಈ ಕಾದಂಬರಿಗೆ ಕಥಾನಾಯಕನಿಲ್ಲ: ನಾಯಕಿಯಿಲ್ಲ. ಮೂಕಜ್ಜಿಯೂ ಇಲ್ಲಿ ಕಥಾನಾಯಕಿಯಲ್ಲ. ಸಾಂಪ್ರದಾಯಿಕತೆಯಿಂದ ಹೆರೆಗಟ್ಟಿದ ಮನಸ್ಸುಗಳನ್ನು ತುಸು ತುಸುವಾಗಿ ಕಾಯಿಸಿ, ಕರಗಿಸುವ ಕೆಲಸ ಅವಳದ್ದು. ಅಂಥ ಅಜ್ಜಿಯೊಬ್ಬಳು ಇದ್ದಾಳೆಯೆ ಎಂಬ ಸಂಶಯ ಬಂದರೆ, ನಮ್ಮ ಸಂಸ್ಕøತಿಯ ನಂಬಿಕೆಗಳ ಕುರಿತಾದ ಸಂಶಯ ಪಿಶಾಚಿಯ ರೂಪವೇ ಅವಳೆಂದು ತಿಳಿದರಾಯಿತು, ಆದರೂ ಅವಳು ನಮ್ಮಲ್ಲನೇಕರಲ್ಲಿ ಪಿಶಾಚಿಯಂತಲ್ಲ, ಪ್ರಾಮಾಣಿಕ ಸಂದೇಹಗಳ ರೂಪದಲ್ಲಿ ಬದಿಕಿಕೊಂಡೇ ಇದ್ದಾಳೆ. ಅವಳ ಮೊಮ್ಮಗನಾದ ಸುಬ್ಬರಾಯನಂಥವರು ಹಲವರಿದ್ದಾರೆ.
ಆ ಅಜ್ಜಿ, ಮೊಮ್ಮಗ ಇಬ್ಬರೂ ಸೇರಿ ನಾಲ್ಕೈದು ಸಾವಿರ ವರ್ಷಗಳಿಂದ ಹರಿದು ಬಂದಿರುವ ‘ ಸೃಷ್ಟಿಸಮಸ್ಯೆ’ಯೊಂದನ್ನು ಮಥಿಸಲು ಇಲ್ಲಿ ಯತ್ನಿಸುತ್ತಾರೆ. ಅವಾಸ್ತವಿಕಳೆನಿಸುವ ಅಜ್ಜಿ, ಅನೇಕ ವಾಸ್ತವಿಕ ಇತಿಹಾಸಾಂಶಗಳನ್ನು ತನ್ನ ಒಳದಿಳಿವಿನಿಂದ ನಮ್ಮ ಮುಂದಕ್ಕೆ ಇರಿಸುತ್ತಾಳೆ.
ಕಾದಂಬರಿಯ-ನಾಗಿ, ರಾಮಣ್ಣ, ಜನ್ನ ಮೊದಲಾದವರು ಸೃಷ್ಟಿ ಶಕ್ತಿಯನ್ನು ಅವಹೇಳನ ಮಾಡುವ ಮನೋಧರ್ಮಕ್ಕೆ ವಾದಿಗಳೋ , ಪ್ರವಾದಿಗಳೋ, ಸಾಕ್ಷಿದಾರರೋ ಆಗಿ ಕಾಣಿಸುತ್ತಿದ್ದಾರೆ.
ತಂತಮ್ಮ ಅಪಕ್ವ ನಂಬುಗೆಗಳನ್ನು ಪರರ ಮೇಲೆ ಹೊರಿಸಿದ ಜನರ ಕಥೆಯೂ ಇಲ್ಲಿದೆ: ಅದರಿಂದಾಗಿ ಇಂದಿನ ನಮಗೆ ಕೇಳಿಸದೆ ಹೋದ ಕೆಲವು ಯಾತನೆಯ ಧ್ವನಿಗಳನ್ನೂ ಕೇಳುವಿರಂತೆ.
ಅಕ್ಟೋಬರ್ 10, 1968 ಇತಿ
ಪುತ್ತೂರು,ದ.ಕ ಡಾ.ಶಿವರಾಮ ಕಾರಂತ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *