ದಾಯಾದಿಯನ್ನೇ ಬರ್ಬರವಾಗಿ ಕೊಂದ ಅಪ್ಪ ಮಗ ನೇರಿದ್ದು ಮುಂಬೈ

ವಸಂತ ಶಾನಭಾಗ ಕೊಲೆ ಆರೋಪಿಗಳಾದ ಅಪ್ಪ-ಮಗ ಆರೆಸ್ಟ್
ಏಪ್ರಿಲ್ 2019 ರಲ್ಲಿ ನಾಪತ್ತೆಯಾಗಿದ್ದಾರೆಂದು, ನಂತರ ಅಪಹರಣ ಮಾಡಲಾಗಿದೆ ಎಂದು ಸಿದ್ಧಾಪುರ (ಉ.ಕ.) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ನಂತರ ಕೊಲೆ ಎಂದು ಕಳೆದ ಜೂನ್ ನಲ್ಲಿ ಸಾಬೀತಾಗಿದ್ದ ಇಲ್ಲಿಯ ಗೋಳಗೋಡಿನ ವಸಂತ ಕೊಲೆಯ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸ್ ವ್ಯವಸ್ಥೆ ಯಶಸ್ವಿಯಾಗಿದೆ.
ಏಫ್ರಿಲ್ 24 ರಂದು ಮನೆಯಿಂದ ಹೊರಹೋಗಿದ್ದ ಕೃಷಿಕ, ಸಾಹಿತಿ ವಸಂತ ಶಾನಭಾಗ ನಾಪತ್ತೆಯಾಗಿದ್ದಾರೆಂದು ಅವರ ಕುಟುಂಬಸ್ಥರು ಏಫ್ರಿಲ್ 28 ರಂದು ನಾಪತ್ತೆ ದೂರು ದಾಖಲಿಸಿದ್ದರು.
ಇದಾಗಿ ಒಂದು ವಾರ ಕಳೆಯುವುದರೊಳಗಾಗಿ ಇದು ನಾಪತ್ತೆ ಪ್ರಕರಣವಲ್ಲ ಅಪಹರಣ ಎಂದು ಹಿಂದಿನ ದೂರುದಾರರಿಂದಲೇ ಮತ್ತೊಂದು ಪ್ರಕರಣ ದಾಖಲಾಗುತ್ತದೆ.
ಈ ದೂರುಗಳನ್ನು ಅನುಸರಿಸಿ, ತನಿಖೆ ನಡೆಸಿದ ಉತ್ತರಕನ್ನಡ ಪೊಲೀಸರಿಗೆ ಒಂದೊಂದೇ ಹೊಸ ವಿಷಯ ಕಲೆಹಾಕಲು ಮೊಬೈಲ್ ಸಿಗ್ನಲ್ ಟ್ರಾಕಿಂಗ್ ನೆರವಾಗುತ್ತದೆ.
ಈ ತನಿಖೆಯನ್ನಾಧರಿಸಿ ಬೆಂಗಳೂರು ಕನಕಪುರದ ಲೋಕಿ ಬಂಧನಕ್ಕೊಳಗಾಗುತ್ತಾನೆ.
ಆತನನ್ನು ಬಾಯಿಬಿಡಿಸಿದ ಪೊಲೀಸರಿಗೆ ವಸಂತ ಶಾನಭಾಗ ಕೊಲೆಯಲ್ಲಿ ವಸಂತರ ಅಣ್ಣ ಮತ್ತು ಅಣ್ಣನ ಮಗನ ಪಾತ್ರ ಸಾಬೀತಾಗುತ್ತದೆ. ಆದರೆ ಕೊಲೆಗೆ ನೆರವಾದ ಲೋಕಿ ಬಂಧನಕ್ಕೊಳಗಾಗುವ ಮೊದಲೇ ವೆಂಕಟೇಶ್ ಮತ್ತು ವಿನಯ್ ತಲೆಮರೆಸಿಕೊಳ್ಳುತ್ತಾರೆ! ಒಂದೊಂದೇ ಸುಳಿವಿನ ಜಾಡು ಹಿಡಿದ ಪೊಲೀಸರಿಗೆ ಕೊಲೆ ಆರೋಪಿಗಳಾದ ಅಪ್ಪ, ಮಗ ಮೊದಲು ಶಿರಸಿಯಲ್ಲಿದ್ದು, ನಂತರ ಅಲ್ಲಿಂದ ಮುಂಬೈಗೆ ಓಡಿಹೋದ ಸುಳಿವಿ ದೊರೆಯುತ್ತದೆ.
ತಿಂಗಳುಗಟ್ಟಲೆ ಕೊಲೆಗಾರರನ್ನು ಚೇಸ್ ಮಾಡಿದ ಪೊಲೀಸರಿಗೆ ಕಳೆದ ಶನಿವಾರ ಅಪ್ಪ-ಮಗ ಸಿಕ್ಕಿಬೀಳುತ್ತಾರೆ.
ಹೀಗೆ ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುವಂತೆ ಕಳ್ಳ ಪೊಲೀಸ್ ಆಟ ಆಡಿಸಿದ ಕೊಲೆಗಾರರು ಮೊದಲು ಮುತ್ತಿಗೆ ಗೋಳಗೋಡಿನಿಂದ ವಸಂತರನ್ನು ಅಪಹರಿಸುತ್ತಾರೆ.ಹೀಗೆ ಲೋಕಿ ಅಲಿಯಾಸ್ ಲೋಕನಾಥನ ನೆರವಿನಿಂದ ಸ್ವಂತ: ದಾಯಾದಿ ವಸಂತರನ್ನು ಏಫ್ರಿಲ್ 24 ರ ಮಧ್ಯಾಹ್ನ 3.30 ರ ಸುಮಾರಿಗೆ ವಾಹನದಲ್ಲಿ ಹೊತ್ತೊಯ್ಯುವ ಮೂವರು ದೊಡ್ಮನೆ ಬಳಿಯ ದಟ್ಟಾರಣ್ಯದಲ್ಲಿ ಚಾಕುವಿನಿಂದ ವಸಂತರ ತಲೆಯನ್ನು ಮುಂಡದಿಂದ ಬೇರ್ಪಡಿಸುತ್ತಾರೆ. ಹೀಗೆ ನುರಿತ ಕೊಲೆಗಾರರಂತೆ ಅಪ್ಪಮಗ ವಸಂತರ ಕೊಲೆಮಾಡಿದ ನಂತರ ಮುಂಡವನ್ನು ಒಂದೆಡೆ ಎಸೆದರೆ, ರುಂಡವನ್ನು ಚಾಕುವಿನೊಂದಿಗೆ ಕೈಚೀಲದಲ್ಲಿ ಹಾಕಿ ಬೇರೆ ಜಾಗದಲ್ಲಿ ಎಸೆಯುತ್ತಾರೆ.
ಇಂಥ ಭೀಕರ ಕೊಲೆಮಾಡಿದ ನಂತರ ಲೋಕಿ ಬೆಂಗಳೂರಿಗೆ ತೆರಳಿ ಹಾಯಾಗಿದ್ದರೆ ವೆಂಕಟೇಶ್ ಮತ್ತು ವಿನಯ ಶಿರಸಿಯ ತಮ್ಮ ಬಾಡಿಗೆ ಮನೆಯಿಂದ ರಾತ್ರೊ ರಾತ್ರಿ ಕಾಲ್ಕೀಳುತ್ತಾರೆ. ಇದಾಗಿ ತಿಂಗಳೊಪ್ಪತ್ತು ಕಳೆದರೂ ಈ ಮೂವರೂ ಪರಸ್ಫರ ಸಂದಿಸುವುದಿಲ್ಲ! ನಂತರ ಉತ್ತರಕನ್ನಡ ಪೊಲೀಸ್ ತಂಡ ಕನಕಪುರದ ಲಕ್ಷ್ಮೀಪುರದ ಲೋಕಿಯನ್ನು ಪತ್ತೆ ಮಾಡಿ ರಿಪೇರಿ ಮಾಡಿದರೂ ಪ್ರಮುಖ ಕೊಲೆಗಾರರಾದ ಅಪ್ಪಮಗ ಪೊಲೀಸರಿಗೆ ಸಿಗುವುದಿಲ್ಲ. ಆನಂತರ ಅಂತೂ ಇಂತೂ ಕೊಲೆಗಾರರನ್ನು ಹುಡುಕಿ ದಸ್ತಗಿರಿ ಮಾಡುವ ಪೊಲೀಸರಿಗೆ ಮೂವರು ಸೆರೆ ಸಿಕ್ಕಂತಾಗಿದೆ.
ಈಗ ಈಮೂವರು ಜುಲೈ 14 ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮನೆಯ ಆಸ್ತಿ, ಅದರ ಮಾರಾಟದ ಹಣದ ತಕರಾರು ಕೊಲೆ ನಂತರ ಕೊಲೆಗಾರರ ಬಂಧನದೊಂದಿಗೆ ಬಹುತೇಕ ಮುಗಿದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *