ದಾಯಾದಿಯನ್ನೇ ಬರ್ಬರವಾಗಿ ಕೊಂದ ಅಪ್ಪ ಮಗ ನೇರಿದ್ದು ಮುಂಬೈ

ವಸಂತ ಶಾನಭಾಗ ಕೊಲೆ ಆರೋಪಿಗಳಾದ ಅಪ್ಪ-ಮಗ ಆರೆಸ್ಟ್
ಏಪ್ರಿಲ್ 2019 ರಲ್ಲಿ ನಾಪತ್ತೆಯಾಗಿದ್ದಾರೆಂದು, ನಂತರ ಅಪಹರಣ ಮಾಡಲಾಗಿದೆ ಎಂದು ಸಿದ್ಧಾಪುರ (ಉ.ಕ.) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ನಂತರ ಕೊಲೆ ಎಂದು ಕಳೆದ ಜೂನ್ ನಲ್ಲಿ ಸಾಬೀತಾಗಿದ್ದ ಇಲ್ಲಿಯ ಗೋಳಗೋಡಿನ ವಸಂತ ಕೊಲೆಯ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತರ ಕನ್ನಡ ಪೊಲೀಸ್ ವ್ಯವಸ್ಥೆ ಯಶಸ್ವಿಯಾಗಿದೆ.
ಏಫ್ರಿಲ್ 24 ರಂದು ಮನೆಯಿಂದ ಹೊರಹೋಗಿದ್ದ ಕೃಷಿಕ, ಸಾಹಿತಿ ವಸಂತ ಶಾನಭಾಗ ನಾಪತ್ತೆಯಾಗಿದ್ದಾರೆಂದು ಅವರ ಕುಟುಂಬಸ್ಥರು ಏಫ್ರಿಲ್ 28 ರಂದು ನಾಪತ್ತೆ ದೂರು ದಾಖಲಿಸಿದ್ದರು.
ಇದಾಗಿ ಒಂದು ವಾರ ಕಳೆಯುವುದರೊಳಗಾಗಿ ಇದು ನಾಪತ್ತೆ ಪ್ರಕರಣವಲ್ಲ ಅಪಹರಣ ಎಂದು ಹಿಂದಿನ ದೂರುದಾರರಿಂದಲೇ ಮತ್ತೊಂದು ಪ್ರಕರಣ ದಾಖಲಾಗುತ್ತದೆ.
ಈ ದೂರುಗಳನ್ನು ಅನುಸರಿಸಿ, ತನಿಖೆ ನಡೆಸಿದ ಉತ್ತರಕನ್ನಡ ಪೊಲೀಸರಿಗೆ ಒಂದೊಂದೇ ಹೊಸ ವಿಷಯ ಕಲೆಹಾಕಲು ಮೊಬೈಲ್ ಸಿಗ್ನಲ್ ಟ್ರಾಕಿಂಗ್ ನೆರವಾಗುತ್ತದೆ.
ಈ ತನಿಖೆಯನ್ನಾಧರಿಸಿ ಬೆಂಗಳೂರು ಕನಕಪುರದ ಲೋಕಿ ಬಂಧನಕ್ಕೊಳಗಾಗುತ್ತಾನೆ.
ಆತನನ್ನು ಬಾಯಿಬಿಡಿಸಿದ ಪೊಲೀಸರಿಗೆ ವಸಂತ ಶಾನಭಾಗ ಕೊಲೆಯಲ್ಲಿ ವಸಂತರ ಅಣ್ಣ ಮತ್ತು ಅಣ್ಣನ ಮಗನ ಪಾತ್ರ ಸಾಬೀತಾಗುತ್ತದೆ. ಆದರೆ ಕೊಲೆಗೆ ನೆರವಾದ ಲೋಕಿ ಬಂಧನಕ್ಕೊಳಗಾಗುವ ಮೊದಲೇ ವೆಂಕಟೇಶ್ ಮತ್ತು ವಿನಯ್ ತಲೆಮರೆಸಿಕೊಳ್ಳುತ್ತಾರೆ! ಒಂದೊಂದೇ ಸುಳಿವಿನ ಜಾಡು ಹಿಡಿದ ಪೊಲೀಸರಿಗೆ ಕೊಲೆ ಆರೋಪಿಗಳಾದ ಅಪ್ಪ, ಮಗ ಮೊದಲು ಶಿರಸಿಯಲ್ಲಿದ್ದು, ನಂತರ ಅಲ್ಲಿಂದ ಮುಂಬೈಗೆ ಓಡಿಹೋದ ಸುಳಿವಿ ದೊರೆಯುತ್ತದೆ.
ತಿಂಗಳುಗಟ್ಟಲೆ ಕೊಲೆಗಾರರನ್ನು ಚೇಸ್ ಮಾಡಿದ ಪೊಲೀಸರಿಗೆ ಕಳೆದ ಶನಿವಾರ ಅಪ್ಪ-ಮಗ ಸಿಕ್ಕಿಬೀಳುತ್ತಾರೆ.
ಹೀಗೆ ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುವಂತೆ ಕಳ್ಳ ಪೊಲೀಸ್ ಆಟ ಆಡಿಸಿದ ಕೊಲೆಗಾರರು ಮೊದಲು ಮುತ್ತಿಗೆ ಗೋಳಗೋಡಿನಿಂದ ವಸಂತರನ್ನು ಅಪಹರಿಸುತ್ತಾರೆ.ಹೀಗೆ ಲೋಕಿ ಅಲಿಯಾಸ್ ಲೋಕನಾಥನ ನೆರವಿನಿಂದ ಸ್ವಂತ: ದಾಯಾದಿ ವಸಂತರನ್ನು ಏಫ್ರಿಲ್ 24 ರ ಮಧ್ಯಾಹ್ನ 3.30 ರ ಸುಮಾರಿಗೆ ವಾಹನದಲ್ಲಿ ಹೊತ್ತೊಯ್ಯುವ ಮೂವರು ದೊಡ್ಮನೆ ಬಳಿಯ ದಟ್ಟಾರಣ್ಯದಲ್ಲಿ ಚಾಕುವಿನಿಂದ ವಸಂತರ ತಲೆಯನ್ನು ಮುಂಡದಿಂದ ಬೇರ್ಪಡಿಸುತ್ತಾರೆ. ಹೀಗೆ ನುರಿತ ಕೊಲೆಗಾರರಂತೆ ಅಪ್ಪಮಗ ವಸಂತರ ಕೊಲೆಮಾಡಿದ ನಂತರ ಮುಂಡವನ್ನು ಒಂದೆಡೆ ಎಸೆದರೆ, ರುಂಡವನ್ನು ಚಾಕುವಿನೊಂದಿಗೆ ಕೈಚೀಲದಲ್ಲಿ ಹಾಕಿ ಬೇರೆ ಜಾಗದಲ್ಲಿ ಎಸೆಯುತ್ತಾರೆ.
ಇಂಥ ಭೀಕರ ಕೊಲೆಮಾಡಿದ ನಂತರ ಲೋಕಿ ಬೆಂಗಳೂರಿಗೆ ತೆರಳಿ ಹಾಯಾಗಿದ್ದರೆ ವೆಂಕಟೇಶ್ ಮತ್ತು ವಿನಯ ಶಿರಸಿಯ ತಮ್ಮ ಬಾಡಿಗೆ ಮನೆಯಿಂದ ರಾತ್ರೊ ರಾತ್ರಿ ಕಾಲ್ಕೀಳುತ್ತಾರೆ. ಇದಾಗಿ ತಿಂಗಳೊಪ್ಪತ್ತು ಕಳೆದರೂ ಈ ಮೂವರೂ ಪರಸ್ಫರ ಸಂದಿಸುವುದಿಲ್ಲ! ನಂತರ ಉತ್ತರಕನ್ನಡ ಪೊಲೀಸ್ ತಂಡ ಕನಕಪುರದ ಲಕ್ಷ್ಮೀಪುರದ ಲೋಕಿಯನ್ನು ಪತ್ತೆ ಮಾಡಿ ರಿಪೇರಿ ಮಾಡಿದರೂ ಪ್ರಮುಖ ಕೊಲೆಗಾರರಾದ ಅಪ್ಪಮಗ ಪೊಲೀಸರಿಗೆ ಸಿಗುವುದಿಲ್ಲ. ಆನಂತರ ಅಂತೂ ಇಂತೂ ಕೊಲೆಗಾರರನ್ನು ಹುಡುಕಿ ದಸ್ತಗಿರಿ ಮಾಡುವ ಪೊಲೀಸರಿಗೆ ಮೂವರು ಸೆರೆ ಸಿಕ್ಕಂತಾಗಿದೆ.
ಈಗ ಈಮೂವರು ಜುಲೈ 14 ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮನೆಯ ಆಸ್ತಿ, ಅದರ ಮಾರಾಟದ ಹಣದ ತಕರಾರು ಕೊಲೆ ನಂತರ ಕೊಲೆಗಾರರ ಬಂಧನದೊಂದಿಗೆ ಬಹುತೇಕ ಮುಗಿದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *