ಸಮಾಜಮುಖಿ ವರದಿ ಫಲಶೃತಿ- ಹೆಗ್ಗೆಕೊಪ್ಪ ಕಿರುಸೇತುವೆಗೆ 10ಲಕ್ಷ ರೂ. ಅನುದಾನ ಮಂಜೂರು


ಉತ್ತರಕನ್ನಡಜಿಲ್ಲೆ ಸಿದ್ದಾಪುರ ತಾಲೂಕಿನ ಕಾವಂಚೂರುಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಮತ್ತು ಮನಮನೆ ಗ್ರಾಮ ಪಂಚಾಯತಿಗೆ ಹೊಂದಿಕೊಂಡಿರುವ ಬಸರಮನೆ ಹಳ್ಳಕ್ಕೆ ಕಾಲುಸಂಕದ ಅವಶ್ಯಕತೆಕುರಿತು ಸಾಮಾಜಿಕಜಾಲತಾಣದಲ್ಲಿ ಅಭಿಯಾನದಂತೆ ನಡೆದಿದ್ದಕಾರ್ಯಕ್ಕೆ ಕರಾವಳಿ ಪ್ರಾಧಿಕಾರದ ಮಾಜಿಅಧ್ಯಕ ನಿವೇದಿತ್‍ಆಳ್ವಾ ತಕ್ಷಣ ಸ್ಪಂದಿಸಿ ತಮ್ಮಆತ್ಮೀಯರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ ರ ಪ್ರಾದೇಶಿಕ ಅಭಿವೃದ್ಧಿ ನಿಧಿಯಲ್ಲಿರೂಪಾಯಿ10,00,000/-(ಹತ್ತುಲಕ್ಷ) ಗಳನ್ನು ಮಂಜೂರಿ ಮಾಡಿಸಿದ್ದಾರೆ.
ಸುತ್ತಮುತ್ತಲ ಹಳ್ಳಿಗಳಲ್ಲಿ ಕಲ್ಲೂರಿನಲ್ಲಿ ಮಾತ್ರ ಶಾಲೆಯಿದ್ದು, ಸಾಮಾಜಿಕಜಾಲತಾಣದಲ್ಲಿ ಹೆಗ್ಗೆಕೊಪ್ಪದ ಶಾಲಾ ಮಕ್ಕಳುತಮ್ಮ ಪ್ರಾಣವನ್ನುಕೈಯಲ್ಲಿಟ್ಟುಕೊಂಡುತುಂಬಿದ ಹೊಳೆಯನ್ನು ಮರದ ದಿಮ್ಮಿಯ ಕಾಲು ಸಂಕದಿಂದದಾಟುತ್ತಿರುವದೃಶ್ಯವು ಮೈ ಜುಮ್ಮೆನ್ನಿಸುವಂತಿತ್ತು.
ಇದನ್ನು ನೋಡಿದ ನಿವೇದಿತ ಆಳ್ವಾ ತಕ್ಷಣಸ್ಥಳೀಯರನ್ನು ಸಂಪರ್ಕಿಸಿ ವಿಷಯದ ಸತ್ಯಾಸತ್ಯತೆಯ ಬಗ್ಗೆ ಮಾಹಿತಿ ಪಡೆದು ಈ ಜಾಗದಲ್ಲಿಜರೂರಾಗಿ ಕಾಲುಸಂಕ ನಿರ್ಮಾಣದಅಗತ್ಯತೆಯನ್ನುಮನಗಂಡುಕಾಲುಸಂಕ ಮಂಜೂರಿಮಾಡಿಸಲುಕಾರ್ಯಪ್ರವೃತ್ತರಾಗಿಯಶಸ್ಸು ಗಳಿಸಿದ್ದಾರೆ.
ಈ ಬಗ್ಗೆ ಮೊದಲು ಜಿಲ್ಲಾಧಿಕಾರಿಗಳ ಗಮನ ಸೆಳೆದ ಮಾಜಿ ತಾ.ಪಂ. ಸದಸ್ಯ ವಸಂತ ನಾಯ್ಕರ ಸಾಮಾಜಿಕ ಜಾಲತಾಣದ ಮಾಹಿತಿ ಆಧರಿಸಿ, ಸಮಾಜಮುಖಿ ಪತ್ರಿಕೆ ಮತ್ತ ನ್ಯೂಸ್‍ವೆಬ್ ಸೈಟ್‍ನಲ್ಲಿ ಮೊಟ್ಟಮೊದಲು ವರದಿ ಪ್ರಸಾರವಾದದ್ದನ್ನು ಇಲ್ಲಿ ಸ್ಮರಿಸಬಹುದು.
ಸಮಾಜಮುಖಿ ವರದಿಗಳ ನಂತರ ಇತರ ಮಾಧ್ಯಮಗಳೂ ವರದಿ ಮಾಡಿದ ನಂತರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನದ ಮಾದರಿಯ ಹಕ್ಕೊತ್ತಾಯ ನಡೆದಿತ್ತು.
ಈ ಬಗ್ಗೆ ಹಾಲಿ ತಾ.ಪಂ. ಸದಸ್ಯ ನಾಶಿರ್ ಖಾನ್,ಮಾಜಿ ತಾ.ಪಂ. ಸದಸ್ಯ ವಸಂತ ನಾಯ್ಕ, ಜಿ.ಪಂ.ಸದಸ್ಯೆ ಸುಮಂಗಲಾ ನಾಯ್ಕ ಸೇರಿದಂತೆ ಅನೇಕ ಸ್ಥಳಿಯರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ಶಾಲಾ ಸಂಪರ್ಕ ಸೇತು ಯೋಜನೆಯಲ್ಲಿ ಈ ಸಂಕರ್ಪ ಸೇತುವೆ ವ್ಯವಸ್ಥೆ ಮಾಡಲು ಸಾಧ್ಯವೆ? ಎಂದು ಸಮಾಜಮುಖಿ ಗಮನ ಸೆಳೆದಿತ್ತು.
ನಂತರ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನವೇ ನಡೆದಿತ್ತು.
ಹೆಗ್ಗೆಕೊಪ್ಪದ ಈ ಅವಶ್ಯ ಸೇತುವೆ ಬಗ್ಗೆ ಆಡಳಿತ ವ್ಯವಸ್ಥೆಯ ಗಮನ ಸೆಳೆದ ಬಗ್ಗೆ ಸಮಾಜಮುಖಿ, ವಸಂತ ನಾಯ್ಕ,ಸೇರಿದಂತೆ ಆಭಾಗದ ಜನಪ್ರತಿನಿಧಿಗಳು ಮುಖಂಡರ ಪ್ರಯತ್ನದ ಬಗ್ಗೆ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಅಭಿನಂದಿಸಿದ್ದರು.
ಅವಶ್ಯ ತುರ್ತು ಕೆಲಸದ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಿದ ನಿವೇದಿತ್ ಆಳ್ವರೊಂದಿಗೆ ಸ್ಥಳಿಯರ ಪ್ರಯತ್ನದ ಬಗ್ಗೆ ಸಮಾಜಮುಖಿ ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.
(ಇದು ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ನಮಗೆ ಸಿಕ್ಕ ಪ್ರಶಸ್ತಿಗಿಂತಲೂ ಸಾವಿರ ಪಟ್ಟು ಹೆಚ್ಚು ಸಮಾಧಾನ ತಂದಿದೆ.)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *