ಅಧಿಕಾರಿಗಳೆಲ್ಲಾ ಬಿ.ಜೆ.ಪಿ. ಪರ, ಮುಸ್ಲಿಂರಿಗೆ ಕಿರುಕುಳ!

ಸಿದ್ಧಾಪುರ ಪ.ಪಂ., ಶಿರಸಿಕ್ಷೇತ್ರದ ಬಿ.ಜೆ.ಪಿ. ಜನಪ್ರತಿನಿಧಿಗಳ ಉಪಟಳ ನಿಯಂತ್ರಣಮಾಡಿ ನ್ಯಾಯ ಒದಗಿಸಲು ಮುಖ್ಯಮಂತ್ರಿಗಳಿಗೆ ಪತ್ರ
ಸಿದ್ಧಾಪುರ ಸೇರಿದಂತೆ ಶಿರಸಿ ಕ್ಷೇತ್ರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಬಿ.ಜೆ.ಪಿ.ಶಾಸಕರು ಮತ್ತು ಸಂಸದರ ಅಣತಿಯಂತೆ ಕೆಲಸಮಾಡುವುದರಿಂದ ಮುಸ್ಲಿಂ ಬಾಂಧವರಿಗೆ ತೊಂದರೆಯಾಗುತ್ತಿದೆ ಎಂದಿರುವ ಸಿದ್ಧಾಪುರದ ಹಿರಿಯ ಸಾಮಾಜಿಕ ಕಾರ್ಯಕರ್ತ ಮೀರಾಸಾಬ್ ಈ ಬಗ್ಗೆ ಮುಖ್ಯಮಂತ್ರಿಗಳೇ ಮಧ್ಯೆ ಪ್ರವೇಶಿಸಿ ನ್ಯಾಯ ದೊರಕಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪತ್ರ ಬರೆದಿರುವ ಮೀರಾಸಾಬ್ ಸಿದ್ಧಾಪುರದ ಉರ್ದುಶಾಲೆ ಇರುವ ಪ್ರದೇಶದಲ್ಲಿ ಸಂತೆ ಮಾರುಕಟ್ಟೆಗಾಗಿ ಜಾಗ ಬಿಡಲಾಗಿದೆ.
ಆದರೆ ಶಾಸಕ, ಸಂಸದರು ಮತ್ತವರ ಆಪ್ತರು ಸೇರಿ ಅಲ್ಲಿ ಸಂತೆ ಮಾರುಕಟ್ಟೆಯನ್ನು ನಿರ್ಮಿಸಿಲ್ಲ.
ಉರ್ದುಶಾಲೆಗೆ ಕಟ್ಟಡ ನಿರ್ಮಾಣಕ್ಕಾಗಿ 30 ಲಕ್ಷ ರೂಪಾಯಿ ಸರ್ಕಾರಿ ಅನುದಾನ ಮಂಜೂರಿಯಾಗಿ ಬಂದಿದ್ದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಪಕ್ಷಪಾತ ಮಾಡಿ ಆ ಹಣ ಮರಳಿಸಿದ್ದಾರೆ.
ಸಿದ್ಧಾಪುರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಸ ಸಂಗ್ರಹಣೆ ಮತ್ತು ಅದರ ವಿಂಗಡಣೆ ನಂತರ ಸಾವಯವ ಗೊಬ್ಬರ ತಯಾರಿಕೆಗೆ ದೊಡ್ಡಪ್ರಮಾಣದ ಹಣ ಬರುತ್ತಿದೆ ಆದರೆ ಅದು ಎಲ್ಲಿ, ಹೇಗೆ? ವಿನಿಯೋಗ ಆಗುತ್ತಿದೆ ಎನ್ನುವುದಕ್ಕೆ ದಾಖಲೆ, ವಾಸ್ತವಗಳ ನಡುವೆ ವ್ಯತ್ಯಾಸವಿದೆ. ಸಾರ್ವಜನಿಕ, ಸರ್ಕಾರಿ ಅವಶ್ಯಕತೆಯ ಬಳಕೆಯ ಪೌರಕಾರ್ಮಿಕರ ವಸತಿ ಸಂಕಿರಣ ಮತ್ತು ಉರ್ದುಶಾಲೆ ಪ್ರದೇಶದಲ್ಲಿ ನಿಶ್ಚಿತ ಉದ್ದೇಶ ಕಾನೂನು ರೀತಿ-ರಿವಾಜು ಮೀರಿ ಅನ್ಯ ಕೆಲಸಗಳು ನಡಯುತ್ತಿವೆ.
ಈ ಕೆಲಸಗಳ ಹಿಂದೆ ಬಿ.ಜೆ.ಪಿ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿ ಅವ್ಯವಹಾರ ಹೊರಗೆಳೆಯಬೇಕು ಎಂದು ಮುಖ್ಯಮಂತ್ರಿಗಳನ್ನು ಕೋರಿರುವ ಮೀರಾಸಾಬ್ ಪೌರ ಕಾರ್ಮಿಕರು, ಪರಿಶಿಷ್ಟರ ವಿಚಾರದಲ್ಲಿ ಪ.ಪಂ. ನಲ್ಲಿ ಪಕ್ಷಪಾತ ಮಾಡಲಾಗುತ್ತಿದೆ. ನೌಕರರಿಗೆ ಸರ್ಕಾರಿ ಅನುಕೂಲ ಒದಗಿಸಲು ಹಿಂದೇಟು, ಅವರ ಸೇವಾ ದಾಖಲಾತಿಗಳ ಕಣ್ಮರೆ ಸೇರಿದಂತೆ ಪಟ್ಟಣ ಪಂಚಾಯತ್ ವ್ಯವಸ್ಥೆಯಲ್ಲಿ ಕಾನೂನುಬಾಹೀರ, ಬಹುಜನ, ಪರಿಶಿಷ್ಟರು, ಅಲ್ಪಸಂಖ್ಯಾತರ ವಿರೋಧಿ ಆಡಳಿತ ನಡೆಯುತ್ತಿದೆ.
ಈ ಬಗ್ಗೆ ಸರ್ಕಾರದಿಂದ ಕೂಲಂಕುಶ ತನಿಖೆ ಮಾಡಿ ಬಾಧಿತರಿಗೆ ನ್ಯಾಯ ಒದಗಿಸುವುದು ಮತ್ತು ಬಿ.ಜೆ.ಪಿ. ಜನಪ್ರತಿನಿಧಿಗಳಿಂದಾಗಿರುವ ಪಕ್ಷಪಾತ, ಅನ್ಯಾಯ ಸರಿಪಡಿಸಿ ಈ ವ್ಯವಸ್ಥೆ ಸರಿಪಡಿಸುವ ಮೂಲಕ ಶಾಸಕರು, ಸಂಸದರು ಮತ್ತು ಅವರ ಹಿತೈಶಿಗಳು ಸಿದ್ಧಾಪುರ ಪ.ಪಂ. ಶಿರಸಿ ಕ್ಷೇತ್ರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಸುತ್ತಿರುವ ಅಂಧಾದರ್ಬಾರ್ ನಿಯಂತ್ರಿಸುವಂತೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ವಿನಂತಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *