ಬೀಜ ಬಿತ್ತುವ ಶಿಕ್ಷಣದ ಬಗ್ಗೆ ಗೊತ್ತಾ ನಿಮಗೆ?

ಶಾಲೆಯಿಂದ ತಯಾರಾದ ಲಕ್ಷಾಂತರ ಬೀಜದುಂಡೆಗಳನ್ನು ನೆಲಕ್ಕೆ ಬೀರಿ ಮಾದರಿಯಾದ ಶಿಕ್ಷಕರು
ಬೀಜದುಂಡೆಗಳ ಮೂಲಕ ಸಸ್ಯೋತ್ಫಾದನೆ ಹಳೆಯ ವಿಧಾನ.
ಈ ವಿಧಾನದಿಂದ ಅರಣ್ಯ ಬೆಳೆಸಲು ಅರಣ್ಯ ಇಲಾಖೆ ಪ್ರತಿವರ್ಷ ಬೀಜದುಂಡೆ ತಯಾರಿಸುವ, ಅದನ್ನು ಕಾಡಿನಲ್ಲಿ ಬಿತ್ತುವ ಕೆಲಸ ಮಾಡುತ್ತಿದೆ.
ಇಂಥದ್ದೇ ಕೆಲಸವನ್ನು ಸಿದ್ಧಾಪುರ(ಉ.ಕ.) ದ ಗಣಪತಿ ವಡ್ಡಿನಗದ್ದೆ ಮಾಡುತ್ತಾರೆ.
ಇವರು ಬೀಜದುಂಡೆ ತಯಾರಿಸುವುದಿಲ್ಲ, ಬದಲಾಗಿ ಕಾಡಿನ ಬೀಜಗಳನ್ನು ಸಂಗ್ರಹಿಸಿ, ಮೊಳಕೆಬರಿಸಿ, ಕಾಡು, ಸ್ಮಶಾನ,ಖಾಲಿ ಜಾಗದಲ್ಲಿ ನೆಡುತ್ತಾರೆ.
ಈ ಸೇವೆಗಾಗಿ ಗಣಪತಿಯವರಿಗೆ ಈಗಾಗಲೇ ಪ್ರಶಂಸೆ,ಸನ್ಮಾನಗಳು ನಡೆದಿವೆ.
ಇನ್ನೊಂದು ಉದಾಹರಣೆ ಶಿರಸಿಯಲ್ಲಿದೆ.
ಶಿರಸಿಯ ಬನವಾಸಿ ತಿಗಣಿಯ ಪ್ರಾಥಮಿಕ ಶಾಲೆಯಲ್ಲಿ ಈ ವರ್ಷ ಮಕ್ಕಳೇ ಲಕ್ಷಾಂತರ ಬೀಜದುಂಡೆಗಳನ್ನು ಮಾಡಿ ಕಾಡು, ನಾಡಿನಲ್ಲಿ ಬೀರಿದ್ದಾರೆ!.
ಬೇಸಿಗೆ ರಜೆ ಮತ್ತು ಇತರ ಅವಧಿಗಳಲ್ಲಿ ಮಕ್ಕಳು, ತಮ್ಮ ಮನೆಯವರು ತಿಂದ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿ, ಶಾಲೆಗೆ ತಂದು ಶಾಲೆಯಲ್ಲಿ ಬೀಜದುಂಡೆಗಳನ್ನು ಮಾಡಿ ಮಣ್ಣಿಗೆ ಸೇರಿಸಿದ್ದಾರೆ. ಇಲ್ಲಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಾರುತಿ ಬನವಾಸಿ ಜಿಲ್ಲೆಯ ಸ್ಕೌಟ್ಸ್ & ಗೈಡ್ಸ್ ನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡುತ್ತಾರೆ.
ನಿರಂತರ ಕ್ರೀಯಾಶೀಲತೆಯ ಈ ಶಿಕ್ಷಕ ಟೆಂಟ್ ಶಾಲೆ, ಕಲಿನಲಿ ಯೋಜನೆ ಸೇರಿದಂತೆ ಇಲಾಖೆಯ ಕಾರ್ಯಕ್ರಮ, ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಚುರುಕಾಗಿರುವ ಶಿಕ್ಷಕ.
ಸ್ಕೌಟ್ಸ್ & ಗೈಡ್ಸ್ ನಲ್ಲಿ ಹಿರಿಯ ಅಧಿಕಾರಿಗಳು ಹೇಳಿದ ಸಲಹೆ, ಸೂಚನೆಗಳನ್ನೇ ಚಾಲೇಂಜ್ ಆಗಿ ಸ್ವೀಕರಿಸಿದ ಮಾರುತಿ ಮಕ್ಕಳನ್ನು ಬೀಜದುಂಡೆ ತಯಾರಿಕೆ, ಬಿತ್ತನೆಗೆ ಪ್ರೋತ್ಸಾಹಿಸಿದ್ದಾರೆ.
ಸಹಶಿಕ್ಷಕರ ನೆರವು, ಶಾಲಾಭಿವೃದ್ಧಿ ಸಮಿತಿ, ಗ್ರಾಮಸ್ಥರ ಸಹಕಾರ ಪಡೆದಿರುವ ಈ ಶಿಕ್ಷಕ ಈ ವರೆಗೆ ಲಕ್ಷ ಲೆಕ್ಕದಲ್ಲಿ ಬೀಜದುಂಡೆ ತಯಾರಿಸಿ, ಬಿತ್ತಿದ್ದಾರೆ.
ಶಾಲೆಯ ಪಠ್ಯ, ಪಠ್ಯೇತರ ಚಟುವಟಿಕೆಗಳೊಂದಿಗೆ ಅರಣ್ಯ ಬೆಳೆಸುವ ತಿಗಣಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳ ಪ್ರಯತ್ನಕ್ಕೆ ಇಲಾಖೆ,ಸಾರ್ವಜನಿಕರ ಸಹಕಾರ ದೊರೆತಿದೆ. ಕೆಲವೆಡೆ ಗಿಡನೆಟ್ಟರೆ ಮಾತ್ರ ಪದವಿ, ಶಿಕ್ಷಣ ಎನ್ನುವ ನಿಯಮ ಜಾರಿಯಾಗುತ್ತಿರುವ ಈ ಸಂದರ್ಭದಲ್ಲಿ ನಿಯಮ, ನೀತಿ, ಕಾನೂನು, ಆದೇಶಗಳಿಗೆ ಕಾಯದೆ ಶಿಕ್ಷಕರ ಮಾರ್ಗದರ್ಶನದಲ್ಲಿ ಪ್ರಾಥಮಿಕ ಶಾಲೆಯ ಮಕ್ಕಳು ಬೀಜದುಂಡೆ ತಯಾರಿಸಿ ಬಿತ್ತುವ ಕೆಲಸದ ಮೂಲಕ ರಾಷ್ಟ್ರೀಯ ಮನ್ನಣೆಗೆ ಪಾತ್ರರಾಗಿದ್ದಾರೆ.
‘ಶಿಕ್ಷಕ ಮಾರುತಿ ಮತ್ತವರ ಶಿಕ್ಷಕವೃಂದ ಮೊದಲಿನಿಂದಲೂ ಸಮಾಜಮುಖಿ ಕೆಲಸಗಳ ಮೂಲಕ ಉತ್ತಮ ಶೈಕ್ಷಣಿಕ ಸೇವೆ ಮಾಡುತಿದ್ದಾರೆ. ಮಾರುತಿ ಶಿಕ್ಷಕರು ತಮ್ಮ ಬಹುಮುಖಿ ವ್ಯಕ್ತಿತ್ವದಿಂದ ವಿದ್ಯಾರ್ಥಿಗಳಿಗೆ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಬನವಾಸಿಯ ಉದ್ಯಮಿ ವಿಜಯ ಕಲಕರಡಿ ಮಾರುತಿ ಶಿಕ್ಷಕರ ಕೆಲಸ, ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *