ಶರಾವತಿಗೆ ಬೆಂಬಲ,ಅಭಯಾರಣ್ಯಕ್ಕೆ ವಿರೋಧ

ಶರಾವತಿ ನೀರು ಯೋಜನೆ, ಶಿವಮೊಗ್ಗ ಬಂದ್ ಯಶಸ್ವಿ, ಮಳೆಯಲ್ಲೇ ಪ್ರತಿಭಟನೆ,ಸಭೆ
ಶರಾವತಿ ನದಿ ನೀರನ್ನು ತುಮುಕೂರು, ಬೆಂಗಳೂರುಗಳಿಗೆ ಪೂರೈಸುವ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತಿದ್ದು ಇಂದಿನ ಶಿವಮೊಗ್ಗ ಬಂದ್ ಯಶಸ್ವಿಯಾಗಿದೆ.
ಸಾಗರ ಸೇರಿದಂತೆ ಶಿವಮೊಗ್ಗ ಜಿಲ್ಲೆಯಾದ್ಯಂತ ಪ್ರತಿಭಟನಾಕಾರರು ಮಳೆ ಲೆಕ್ಕಿಸದೆ ಪ್ರತಿಭಟನೆ, ಬಂದ್, ಸಭೆ ನಡೆಸಿದ್ದಾರೆ.
ಇದೇ ವಿಚಾರದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ಪ್ರತಿಭಟನೆ ಮನವಿ ಅರ್ಪಣೆಗಳು ನಡೆದಿವೆ.
ಸಿದ್ಧಾಪುರದಲ್ಲಿ ಪ್ರಗತಿಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ತಹಸಿಲ್ಧಾರರ ಮೂಲಕ ರಾಜಪಾಲರಿಗೆ ಮನವಿ ನೀಡಿ ಶರಾವತಿ ನೀರಿನ ಯೋಜನೆ, ಉತ್ತರ ಕನ್ನಡ ಜಿಲ್ಲೆಯ ನದಿಗಳ ತಿರುವಿನ ಯೋಜನೆಗಳು ಹಾಗೂ ಶರಾವತಿ ಅಭಯಾರಣ್ಯಕ್ಕೆ ಕೆನರಾ ವೃತ್ತದ ಅರಣ್ಯ ಸೇರ್ಪಡೆ ನಿರ್ಧಾರ ಕೈಬಿಡಲು ರಾಜ್ಯ ಸರ್ಕಾರಕ್ಕೆ ಮಾರ್ಗದರ್ಶನ ಮಾಡಲು ರಾಜ್ಯಪಾಲರನ್ನು ಕೋರಲಾಗಿದೆ.
ಸಿದ್ಧಾಪುರದಲ್ಲಿ ಮನವಿ ನೀಡಿದ ಪತ್ರಕರ್ತ ಕನ್ನೇಶ್ ಕೋಲಶಿರ್ಸಿ, ದಲಿತ ಮುಖಂಡ
ಶಿವಾನಂದ ಕೆ.ಎಚ್., ಕನ್ನಡ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ದಿವಾಕರ ನಾಯ್ಕ ಸೇರಿದ ಕೆಲವರ ಒಕ್ಕೂಟ ತಹಸಿಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿದೆ.
ಹೊನ್ನಾವರ-
ಹೊನ್ನಾವರದಲ್ಲೂ ಸ್ಥಳಿಯರು ಶರಾವತಿ ಉಳಿಸಿ ಅಭಿಯಾನದ ಅಂಗವಾಗಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಪಾಲರಿಗೆ ಮನವಿ_
ಸಿದ್ದಾಪುರ:ಜು.10- ಇಂದಿನ ಶಿವಮೊಗ್ಗ ಬಂದ್‍ಗೆ ಜಿಲ್ಲೆಯ ಬರಹಗಾರರು, ಕನ್ನಡ ಸಂಘಟನೆಗಳ ಪ್ರತಿನಿಧಿಗಳು ಬೆಂಬಲ ವ್ಯಕ್ತಪಡಿಸಿದ್ದು, ಕರಾವಳಿ ಮತ್ತು ಮಲೆನಾಡಿನ ನೀರನ್ನು ಹೊರಜಿಲ್ಲೆಗಳಿಗೆ ಕೊಂಡೊಯ್ಯುವ ಯೋಜನೆಗಳಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಹಸೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದ್ದು, ಶಿವಮೊಗ್ಗದಲ್ಲಿ ಶರಾವತಿ ನೀರಿನ ಯೋಜನೆ ವಿರೋಧಿಸಿ ನಡೆಸುತ್ತಿರುವ ಬಂದ್ ಗೆ ಬೆಂಬಲವಿದೆ. ಕರಾವಳಿ ಮತ್ತು ಮಲೆನಾಡಿನ ನದಿಗಳಾದ ಕಾಳಿ, ಅಘನಾಷಿನಿ,ಶರಾವತಿ,ನೇತ್ರಾವತಿ, ನದಿಗಳನ್ನು ಬಳಸಿಕೊಂಡು ಆಯಾ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ, ಕೃಷಿ ಅನುಕೂಲಕ್ಕೆ ಬೇಕಾಗುವ ನೀರಿನ ಅಗತ್ಯಕ್ಕಾಗಿ ಈ ನದಿಗಳ ನೀರನ್ನು ಬಳಸುವ ಯೋಜನೆಗಳನ್ನು ಜಾರಿ ಮಾಡಬೇಕು,
ಮಲೆನಾಡು ಕರಾವಳಿ ಜಿಲ್ಲೆಯ ಜನತೆ ಇಲ್ಲಿನ ನೀರಿನ ಬಳಕೆಯ ಯೋಜನೆಗಳಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ನೀರಿನ ಕೊರತೆಯಿಂದ ವರ್ಷದಿಂದ ವರ್ಷಕ್ಕೆ ಕೃಷಿ ಕ್ಷೇತ್ರ ಬಡವಾಗುತ್ತಿದೆ. ಈ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲು ಸ್ಥಳೀಯ ಯೋಜನೆಗಳನ್ನು ಜಾರಿ ಮಾಡಬೇಕು, ಮಲೆನಾಡು ಕರಾವಳಿ ಜಿಲ್ಲೆಗಳಿಂದ ಹೊರ ಜಿಲ್ಲೆಗಳಿಗೆ ವೆಚ್ಚದಾಯಕ ಯೋಜನೆಗಳ ಮೂಲಕ ನೀರೊಯ್ಯುವ ಯೋಜನೆಗಳನ್ನು ನಿಲ್ಲಿಸಬೇಕು.
ಉತ್ತರ ಕನ್ನಡ ಜಿಲ್ಲೆಯ ನದಿ ನೀರಿನ ತಿರುವು, ನೀರುಕೊಂಡೊಯ್ಯುವ ಯೋಜನೆಗಳು ಮತ್ತು ಶರಾವತಿ ಅಭಯಾರಣ್ಯಕ್ಕೆ ಕೆನರಾ ವೃತ್ತದ ಅರಣ್ಯ ಸೇರ್ಪಡೆಯಂತಹ ಯೋಜನೆಗಳನ್ನು ಸರ್ಕಾರ ಕೈಬಿಡಲು ನಿರ್ದೇಶಿಸುವಂತೆ ರಾಜ್ಯಪಾಲರನ್ನು ಕೋರಿ ಹಾಗೂ ಶಿವಮೊಗ್ಗ ಬಂದ್ ಗೆ ಬೆಂಬಲ ನೀಡಿ ಈ ಮನವಿ ಅರ್ಪಿಸುತಿದ್ದೇವೆ ಎಂದು ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಗಳ ಕನ್ನಡ ಸಂಘಟನೆಗಳು ಪ್ರಗತಿಪರ ಸಂಘಟನೆಗಳ ಪರವಾಗಿ ಕನ್ನೇಶ ಕೋಲಶಿರ್ಸಿ, ದಿವಾಕರ ಸಂಪಖಂಡ, ಹೆಚ್. ಕೆ. ಶಿವಾನಂದ, ಕೇಶವ ನಾಯ್ಕ, ಕೃಷ್ಣಮೂರ್ತಿ ಎನ್. ವಿಠ್ಠಲ ಭಂಡಾರಿ, ಗುರುಮೂರ್ತಿ ನಾಯ್ಕ ಸುಂಕತ್ತಿ, ವಿನಾಯಕ ದೊಡ್ಡಗದ್ದೆ, ರಂಗನಾಥ ಮಂಕೋಡ, ಕ್ಯಾದಗಿ ಗ್ರಾ.ಪಂ ಸದಸ್ಯೆ ಕುಸುಮಾ ಗೌಡ, ಸತೀಶ ಹೆಗಡೆ, ವೀರಭದ್ರ ನಾಯ್ಕ ಸಹಿ ಮಾಡಿದ ಮನವಿಯನ್ನು ಉಪ ತಹಶಿಲ್ದಾರ ಡಿ.ಆರ್. ಬೆಳ್ಳುಮನೆಯವರಿಗೆ ಅರ್ಪಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *