ಪರಿಸರಕ್ಕಾಗಿ ರಾಜೀನಾಮೆ ಕೊಟ್ಟು ಹೋರಾಡಲು ಸ್ವರ್ಣವಲ್ಲೀ ಸಲಹೆ-

ಜಿಲ್ಲೆಯ ನೆಲ-ಜಲಕ್ಕಾಗಿ ಹೋರಾಡಲು ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಕರೆ
ಉತ್ತರಕನ್ನಡ ಜಿಲ್ಲೆಯ ಕೆನರಾ ವೃತ್ತದ ಅರಣ್ಯ ಪ್ರದೇಶವನ್ನು ಶರಾವತಿ ಅಭಯಾರಣ್ಯಕ್ಕೆ ಸೇರಿಸಿದ ಆದೇಶವನ್ನು ರದ್ದು ಮಾಡುವುದು ಸೇರಿದಂತೆ ಇತರ ಐದು ನಿರ್ಣಯಗಳನ್ನು ಅಘನಾಶಿನಿ ಕಣಿವೆ ಉಳಿಸಿ ಸಮಾವೇಶ ಅಂಗೀಕರಿಸಿದೆ.
ಬುಧವಾರ ಸಿದ್ಧಾಪುರ ತಾಲೂಕಿನ ನೆಲೆಮಾಂವಿನಲ್ಲಿ ಸ್ವರ್ಣವಲ್ಲಿ ಗಂಗಾಧರೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ಈ ನಿರ್ಣಯಗಳನ್ನು ಅಂಗೀಕರಿಸಿದ್ದು, ಜನಪ್ರತಿನಿಧಿಗಳು ಸಲ್ಲದ ಕಾರಣಗಳಿಗೆ ರಾಜೀನಾಮೆ ಕೊಡುವುದನ್ನು ಬಿಟ್ಟು ನೆಲ-ಜಲ ಸಂರಕ್ಷಣೆಯಂಥ ಉಪಯುಕ್ತ ವಿಚಾರಗಳಿಗೆ ಬದ್ಧರಾಗಿ ರಾಜೀನಾಮೆ ಕೊಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿರುವ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಲೆನಾಡಿನ ಪರಿಸರ ರಕ್ಷಣೆಯ ಅವರ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.
ನೆಲೆಮಾಂವಿನಲ್ಲಿ ವೃಕ್ಷಾರೋಪಣ ಮಾಡಿ ಸಭೆಯ ಸಾನ್ನಿಧ್ಯ ವಹಿಸಿದ್ದ ಸ್ವಾಮಿಗಳು ಶರಾವತಿ ಅಭಯಾರಣ್ಯಕ್ಕೆ ಕೆನರಾ ವೃತ್ತದ ಅರಣ್ಯ ಸೇರ್ಪಡೆಯಿಂದ ಉತ್ತರ ಕನ್ನಡದ ಜನಜೀವನಕ್ಕೆ ತೊಂದರೆಯಾಗುತ್ತದೆ. ಇಲ್ಲಿಯ ಜನಪ್ರತಿನಿಧಿಗಳು ಬೆಂಗಳೂರು,ದೆಹಲಿ ಮಟ್ಟದಲ್ಲಿ ಜಿಲ್ಲೆ, ಪಶ್ಚಿಮಘಟ್ಟದ ಪರಿಸರ ರಕ್ಷಣೆಗೆ ಕೆಲಸ ಮಾಡಬೇಕು ಎಂದು ತಾಕೀತು ಮಾಡಿರುವ ಅವರು ಕಾಳಿ, ಅಘನಾಶಿನಿ, ಬೇಡ್ತಿ ನದಿಗಳ ತಿರುವು ಯೋಜನೆ ಕೈಬಿಡಬೇಕು. ಸ್ಥಳಿಯ ಸಂಸ್ಥೆಗಳಲ್ಲಿ ಈ ಬಗ್ಗೆ ಠರಾವು ಮಾಡುವುದು ಸೇರಿದಂತೆ ಜಿಲ್ಲೆಯ ಪರಿಸರ ರಕ್ಷಣೆಗೆ ಕಠಿಬದ್ಧರಾಗಿರಲು ಸ್ಥಳಿಯರಿಗೆ ವಿನಂತಿಸಿದ್ದಾರೆ.

vruksharopana

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *