ಕೊಟ್ಟ ಕುದುರೆ ಏರಲಾರದವರಿಂದ ಬೇರೆ ಏನನ್ನು ನಿರೀಕ್ಷಿಸಬಹುದು?

ಉತ್ತರಕನ್ನಡದ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಉತ್ತಮ ಕೆಲಸಗಾರರು, ಬನವಾಸಿ ಹೋಬಳಿಗೆ ಸ್ವತಂತ್ರ ಭಾರತದಲ್ಲಿ ಶಿವರಾಮ ಹೆಬ್ಬಾರ 5-6 ವರ್ಷಗಳಲ್ಲಿ ಮಾಡಿದ ಕೆಲಸಯಾರೂ ಮಾಡಿಲ್ಲ ಎನ್ನುತ್ತಾರೆ. ರಸ್ತೆ, ನೀರಾವರಿ ಯಂಥ ಅವಶ್ಯ ಕೆಲಸಗಳ ವಿಚಾರದಲ್ಲಿ ಶಿವರಾಮ ಹೆಬ್ಬಾರ್ ಸ್ಫಂದಿಸಿದ್ದಾರೆ ಎನ್ನುವ ಮೆಚ್ಚುಗೆ ಅವರ ಕ್ಷೇತ್ರದಲ್ಲಿ ಕೇಳಿ ಬರುತಿತ್ತು.
ಆದರೆ ಈಗ ಶಿವರಾಮ ಹೆಬ್ಬಾರ್ ರಾಜೀನಾಮೆ, ಪಕ್ಷಾಂತರದಿಂದ ಹಿಂದೆ ಶಿವರಾಮ ಹೆಬ್ಬಾರರನ್ನು ಹೊಗಳಿದವರೇ ಈಗ ತೆಗಳುವಂತಾಗಿದೆ.
ಶಿವರಾಮ ಹೆಬ್ಬಾರ ಬಹುಹಿಂದೆ ಲಾರಿ ಮೇಲೆ ಪ್ರಯಾಣಿಕರಾಗಿ ಓಡಾಡುತಿದ್ದ ಸಮಯದಲ್ಲಿ ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಆಗಿನಿಂದಲೂ ಸಂಘದ ಕಾರ್ಯಕರ್ತರೂ, ಜಾತಿವಾದಿಗಳಾದ ಕಾಗೇರಿ, ಅನಂತ ಜೊತೆಗೆ ಹೆಬ್ಬಾರರ ಆಂತರಿಕ ಸಂಘರ್ಷ ನಡೆದೆ ಇತ್ತು.
ಈ ಯುಗ ಕಳೆಯುತಿದ್ದಂತೆ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರಿ ಕಾಂಗ್ರೆಸ್ ನಿಂದ ಎರಡುಬಾರಿ ಶಾಸಕರಾಗಿದ್ದು ಈಗ ಚರಿತ್ರೆ.
ಈ ಬಾರಿ ಹೆಬ್ಬಾರ್ ಅಲ್ಪಂಅತರದಿಂದಲಾದರೂ ಗೆಲ್ಲಲು ಕಾರಣ ಅವರ ಜಾತಿ, ಮತ್ತು ಧರ್ಮಸ್ಥಳ ಸಂಘ!
ಹಿಂದೂ ಹೆಸರಲ್ಲಿ ಭಕ್ತರ ತಲೆಗೆ ಎಣ್ಣೆ ಸವರುತ್ತಿರುವ ಧರ್ಮಸ್ಥಳದ ಜೈನ ಹೆಗ್ಗಡೆಯ ಹಣಕಾಸಿನ ಧರ್ಮಸ್ಥಳ ಸಂಘ ಕಳೆದ ಚುನಾವಣೆಗಳಲ್ಲಿ ಬ್ರಾಹ್ಮಣರು ಮತ್ತು ಬಿ.ಜೆ.ಪಿ.ಗಳ ಆಯ್ಕೆಗೆ ತೆರೆಮರೆಯಲ್ಲಿ ನಡೆಸಿರುವ ಕಸರತ್ತು ಈಗ ಬಹಿರಂಗಗೊಂಡ ಸತ್ಯ.
ಈ ಲಾಭಪಡೆದ ಹೆಬ್ಬಾರ್ ಜಾತಿ, ಸಂಘ,ಹಣ ಬಳಸಿ ಗೆದ್ದದ್ದು ಬರೀ 4-5 ಸಾವಿರ ಮತಗಳ ಅಂತರದಿಂದ. ಇಂಥ ಹೆಬ್ಬಾರ್ ಈ ಬಾರಿ ಶಾಸಕರಾಗುತ್ತಲೇ ಸಚಿವನಾಗಬೇಕು ಎಂದು ಯತ್ನಿಸತೊಡಗಿದರು. ಆಗ ಅಡ್ಡ ಬಂದದ್ದು ಇದೇ ದೇಶಪಾಂಡೆ!
ಸಚಿವ ದೇಶಪಾಂಡೆ,ಎಸ್.ಎಂ. ಹೆಬ್ಬಾರ್ ವೈರತ್ವಕ್ಕೆ ಇತಿಹಾಸವಿದೆ. ದೇಶಪಾಂಡೆ ಮಾರ್ಗರೇಟ್ ಆಳ್ವ ಕುಟುಂಬದೊಂದಿಗೆ ಆಂತರಿಕ ಕಲಹ ಮಾಡುತಿದ್ದಾಗ ಆಳ್ವ ಹಿಂದೆ ನಿಂತ ಹೆಬ್ಬಾರ್ ಯಲ್ಲಾಪುರ ಟಿಕೇಟ್ ಗಿಟ್ಟಿಸಿದ್ದು ಈಗ ಹಳೆ ಕತೆ.
ಈಹೆಬ್ಬಾರ್ ಹಿಂದೆ ಬಿ.ಜೆ.ಪಿ. ಸಂಘದ ತೆಕ್ಕೆಯಲ್ಲಿದ್ದವರು. ಜೊತೆಗೆ ಜಾತಿ,ಸ್ವಾಮೀಜಿಗಳ ನೆರವು. ಇವುಗಳ ಸಹಾಯದಿಂದ ಅದಿರಿನಲ್ಲಿ ದುಡಿದ ಹೆಬ್ಬಾರ್ ರಿಗೆ ವಾಯವ್ಯ ಕರ್ನಾಟಕ ರಸ್ತೆ ನಿಗಮದ ಅಧ್ಯಕ್ಷತೆ ದೊರೆತಿದ್ದೂ ಲಾಭಿಯಿಂದಲೇ.
ಹೀಗೆ ನಾನಾ ಕಾರಣ ಪ್ರಯತ್ನಗಳಿಂದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿರುವ ಹೆಬ್ಬಾರ್ ಅವಧಿಯಲ್ಲಿ ಭಟ್ಕಳದ ಕುಸಿದು ಬೀಳುತ್ತಿರುವ ಬಸ್ ನಿಲ್ದಾಣದ ರಿಪೇರಿಯಾಗಲಿಲ್ಲ. ಒಂದೆಡೆ ನಿರ್ಮಾಣ ಹಂತದ ಕಾಮಗಾರಿಯ ಕಟ್ಟಡ ಹಿಂದೆ ಅವಿತಿರುವಂಥ ಸಿದ್ದಾಪುರದ ಬಸ್ ನಿಲ್ಧಾಣ ಕೊಚ್ಚೆಗುಂಡಿಯಂತಾಗಿದೆ. ಉತ್ತರಕನ್ನಡ ಜಿಲ್ಲೆಯ ಒಂದೆರಡು ಬಸ್ ನಿಲ್ದಾಣಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲ 8-10 ಬಸ್ ನಿಲ್ಧಾಣಗಳ ಸ್ಥಿತಿ ಕೇಳುವುದೇ ಬೇಡ.
ಈ ಸಂದರ್ಭದಲ್ಲಿ ವಾಯವ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿರುವ ಹೆಬ್ಬಾರ್ ಕನಿಷ್ಟಜಿಲ್ಲೆಯ ಬಸ್ ನಿಲ್ಧಾಣಗಳ ನಿರ್ಮಾಣ ಮಾಡಿ ಉತ್ತಮ ಹೆಸರು ಗಳಿಸಬಹುದಿತ್ತು. ಆದರೆ ಹೆಬ್ಬಾರ ಎಷ್ಟು ಅಧಿಕಾರ, ಅವಕಾಶ, ಹಣ ಅಂತಸ್ತಿನ ಹಿಂಎ ಬಿದ್ದಿದ್ದಾರೆಂದರೆ…… ಯಲ್ಲಾಪುರ ಶಾಸಕರಾಗಿರುವ ಅವರಿಗೆ ಅವರ ಕ್ಷೇತ್ರದ ಯಲ್ಲಾಪುರ,ಮುಂಡಗೋಡ ಬಸ್ ನಿಲ್ಧಾಣ, ಸಾರಿಗೆ ತೊಂದರೆ ಸರಿಪಡಿಸಲೇ ಸಮಯ, ಆಸಕ್ತಿ ಇಲ್ಲ.
ಇಂಥ ಹೆಬ್ಬಾರರ ತವರೂರು ಯಲ್ಲಾಪುರ ಬಸ್ ನಿಲ್ಧಾಣದಲ್ಲಿ ನಾಟಿ ಮಾಡಬೇಕೆಂದರೆ ಹೂಡಿ,ಹೊಡೆಯುವ ಅಗತ್ಯವೂ ಇಲ್ಲ. ಅಂಥ ಕೆಸರುಗುಂಡಿಯಾಗಿರುವ ಬಸ್ ನಿಲ್ಧಾಣದಲ್ಲಿ ಓಡಾಡುವುದು,ವಿಶ್ರಾಂತಿ ಪಡೆಯುವುದು ಕನಸಿನ ಮಾತು.
ಮಗ ವಿವೇಕ ಹೆಬ್ಬಾರ್ ರಕ್ಷಣೆಗಾಗಿ ಶಿವರಾಮ ಬಿ.ಜೆ.ಪಿ. ಸೇರುವ ಅನಿವಾರ್ಯತೆಯಲ್ಲಿದ್ದಾರೆ ಎಂದು ಕೆಲವರು ಅಭಿಪ್ರಾಯ ಪಟ್ಟರೆ, ಅವರಿಗೆ ದೇಶಪಾಂಡೆ, ಅನಂತ ಹೆಗಡೆ, ಕಾಗೇರಿಯಂಥವರಿಂದ ಕಿರುಕುಳ ಹಾಗಾಗಿ ಅವರು ಸ್ವಾತಂತ್ರ್ಯ ಬಯಸಿ ಬಿ.ಜೆ.ಪಿ.ಕಡೆ ಹೊರಟಿದ್ದಾರೆ ಎನ್ನುವವರಿದ್ದಾರೆ. ಕಾಂಗ್ರೆಸ್ ಮತ್ತು ಹೆಬ್ಬಾರ್ ಹಿಂಬಾಲಕರಲ್ಲಿ ಬೆರಳೆಣಿಕೆಯ ಮುಖಂಡರನ್ನು ಹೊರತುಪಡಿಸಿದರೆ ಬಹುತೇಕ ಎಲ್ಲರೂ ಹೆಬ್ಬಾರ್ ಬಿ.ಜೆ.ಪಿ. ಹೆದರಿಕೆ,ಆಮಿಷಕ್ಕೆ ಬಲಿಯಾಗಿರುವುದನ್ನು ವಿರೋಧಿಸುವವರೇ ಹೆಚ್ಚು.
ಕೆಲವರಂತೂ ಕೊಟ್ಟ ಕುದುರೆ ಏರಲು ಬಾರದ ಹೆಬ್ಬಾರ್ ರಾಜಕಾರಣ ತ್ಯಜಿಸುವುದೇ ಒಳ್ಳೆಯದು ಎನ್ನುತಿದ್ದಾರೆ. ನಿವೃತ್ತಿ ಅಥವಾ ತ್ಯಾಗ ಅವರ ಆಯ್ಕೆ. ಆದರೆ ಮಧ್ಯಂತರದಲ್ಲಿ ಕೈ ಕೊಟ್ಟ ಹೆಬ್ಬಾರ್ ರನ್ನು ಜನತೆ ನಿವೃತ್ತಿ ಗೊಳಿಸಲು ಕಾಯುತ್ತಿರುವುದಂತೂ ಸತ್ಯ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *