ಸ್ವರ್ಣವಲ್ಲೀ ಶ್ರೀ ಚಾತುರ್ಮಾಸ ಪ್ರಾರಂಭ

ಹಸಿರು ಸ್ವಾಮೀಜಿ ಎಂದೇ ಪ್ರಸಿದ್ಧರಾದ ಉತ್ತರ ಕನ್ನಡದ ಶಿರಸಿ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಶ್ರೀಸ್ವರ್ಣವಲ್ಲೀಯಲ್ಲಿ ಮಂಗಳವಾರ ಶ್ರೀವೇದ ವ್ಯಾಸ ಪೂಜೆ ನಡೆಸಿ 29ನೇ ಚಾತುರ್ಮಾಸ್ಯ ವ್ರತಾಚರಣೆ ಸಂಕಲ್ಪ ಕೈಗೊಂಡರು.
ವಿಕಾರಿ ಸಂವತ್ಸರದ ಆಷಾಢ ಪೌರ್ಣಿಮೆಯಿಂದ ಸೆ.13ರ ಭಾದ್ರಪದ ಪೌರ್ಣಿಮೆ ತನಕ ಶ್ರೀಮಠದಲ್ಲಿ ಪವಿತ್ರ ಚಾತುರ್ಮಾಸ್ಯ ವ್ರತಕ್ಕೆ ಶಿಷ್ಯರ ಸಮ್ಮುಖದಲ್ಲಿ ಸಂಕಲ್ಪ ಕೈಗೊಂಡರು. ಶ್ರೀಗಳು ವೇದವ್ಯಾಸರ ಪೂಜೆ ಬಳಿಕ ಸಮಸ್ತ ಶಿಷ್ಯರ ಪರವಾಗಿ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ದಂಪತಿಗಳಿಂದ ಪಾದುಕಾ ಪೂಜೆ ಸ್ವೀಕರಿಸಿದರು. ನಾಡಿನ ಹಲವಡೆಯಿಂದ ಆಗಮಿಸಿದ್ದ ಭಕ್ತರು ಮಹಾ ಮಂಗಳಾರತಿ, ತೀರ್ಥಪ್ರಸಾದ ಪ್ರಸಾದ ಭೋಜನ ಸ್ವೀಕರಿಸಿ ಪುನೀತರಾದರು.
ಶ್ರೀಮಠದಲ್ಲಿ ಸಮಸ್ತ ಶಿಷ್ಯರಿಂದ ಚಾತುರ್ಮಾಸ್ಯದ ಅವಧಿಯಲ್ಲಿ ಪ್ರತಿ ದಿನ ವಿವಿಧ ಸೀಮೆಗಳಿಂದ ಪಾದುಕಾ ಪೂಜೆ, ಭಿಕ್ಷಾ ಸೇವೆಗಳು, ಕುಂಕುಮಾರ್ಚನೆಗಳು ನಡೆಯಲಿದೆ. ಯಕ್ಷಗಾನ, ತಾಳಮದ್ದಲೆ ಸ್ವಸಹಾಯ ಸಮಾವೇಶ, ಮಹಾಭಾರತ ಪ್ರವಚನಗಳಂಥ ಅನೇಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.

20ರಿಂದ ಸಂಕಷ್ಟಿ ದ್ವಾದಶ ಸಂಕಲ್ಪ
ಸಿದ್ದಾಪುರ:ಜು.16- ತಾಲೂಕಿನ ಇಟಗಿ ಕಲಗದ್ದೆಯಲ್ಲಿರುವ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಸ್ಥಾನದಲ್ಲಿ ಜು.20ರಿಂದ ಸಂಕಷ್ಟಿ ದ್ವಾದಶ ಎಂಬ ಪೂಜಾ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಒಂದು ವರ್ಷ ಪರ್ಯಂತ ಹನ್ನೆರಡು ಸಂಕಷ್ಟಿಗಳಿಗೆ ಅಭಿಷೇಕ, ಅರ್ಚನೆ, ಅಲಂಕಾರ, ಗಣ ಹವನ, ಭಕ್ತಾದಿಗಳಿಗೆ ಪ್ರಸಾದ ಭೋಜನ, ಗೃಹಸ್ಥರಿಂದ ಉಪನಿಷತ್ ಪಾರಾಯಣ, ಅಷ್ಟಾಂಗ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಭಕ್ತಾದಿಗಳು ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬಹುದು. ವಿವರಗಳಿಗೆ 9448756263ಗೆ ಎಂದು ದೇವಸ್ಥಾನದ ಮೊಕ್ತೇಸರ ವಿನಾಯಕ ಹೆಗಡೆ ಕಲಗದ್ದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾದರಿ ಚುನಾವಣೆ-
ನಾಣಿಕಟ್ಟಾ ಕಾಲೇಜಿನಲ್ಲಿ ವಿದ್ಯಾರ್ಥಿಸಂಸತ್ತಿಗೆ ಚುನಾವಣೆ
ರಮಾನಂದ ಟಿ ಗೌಡ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ
ಸಿದ್ದಾಪುರ ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತಿನ ಚುನಾವಣೆ ನಡೆಯಿತು. ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳನ್ನು ನಡೆಸಲಾಯಿತು.
ಅಧಿಸೂಚನೆ ಹೊರಡಿಸುವುದರಿಂದ ಪ್ರಾರಂಭಗೊಂಡು ನಾಮಪತ್ರ ಸಲ್ಲಿಕೆ, ಪರಿಶೀಲನೆ, ಅಭ್ಯರ್ಥಿಗಳಿಗೆ ಚಿಹ್ನೆ ನೀಡುವುದು, ಮತ ಪತ್ರ ಮುದ್ರಣ, ಮತಗಟ್ಟೆ ಅಧಿಕಾರಿಗಳ ನೇಮಕ, ಚುನಾವಣೆ, ಮತ ಎಣಿಕೆ ಎಲ್ಲವನ್ನೂ ಕ್ರಮಬದ್ಧವಾಗಿ ನಡೆಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *