

ಅಘನಾಶಿನಿ ಕೊಳ್ಳದ ವ್ಯಾಪ್ತಿಯ ಸಿದ್ಧಾಪುರ ತಾಲೂಕಿನ ಒಟ್ಟೂ 26 ಗ್ರಾಮಗಳನ್ನು ಶಿವಮೊಗ್ಗ ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಸೇರ್ಪಡೆ ಮಾಡುವ ಪ್ರಸ್ತಾಪದ ಪ್ರಕ್ರೀಯೆ ನಡೆಯುತ್ತಿದೆ ಎಂದು ಕ್ಯಾದಗಿ ವಲಯ ಅರಣ್ಯಾಧಿಕಾರಿ ಹರೀಶ್ ತಿಳಿಸಿದ್ದಾರೆ.
ಇಂದು ಇಲ್ಲಿಯ ತಾ.ಪಂ. ಸಭಾಭವನದಲ್ಲಿ ನಡೆದ ಮಾಸಿಕ ಕೆ.ಡಿ.ಪಿ. ಸಭೆಗೆ ಮಾಹಿತಿ ನೀಡಿದ ಅವರು ಈ ವಿಷಯ ತಿಳಿಸಿದರು.

ಸಭೆಗೆ ಅರಣ್ಯ ಇಲಾಖೆಯ ಮಾಹಿತಿ ನೀಡಿದ ಅವರು ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ಗೆ 400 ಗಿಡಗಳಂತೆ ವಿತರಿಸಿದ್ದೇವೆ. ಈಗಲೂ ರೈತರಿಗೆ ಒಂದು ರೂಪಾಯಿ ಮತ್ತು 3 ರೂಪಾಯಿ ಬೆಲೆಯ ಗಿಡಗಳನ್ನು ಸಸ್ಯ ಉದ್ಯಾನಗಳಿಂದ ನೀಡುತಿದ್ದೇವೆ.
ಕಾಡುಪ್ರಾಣಿ ಹಾವಳಿಯ ಹಾನಿಗೆ ಪರಿಹಾರ ವಿತರಿಸಿದ್ದೇವೆ ಎಂದರು. ಇದಕ್ಕೆ ಪ್ರತಿಕ್ರೀಯಿಸಿದ ತಾ.ಪಂ. ಅಧ್ಯಕ್ಷ ಸುಧೀರ್ ಗೌಡರ್ ವನ್ಯಮೃಗ ಹಾವಳಿಗೆ ಇಲಾಖೆ ನೀಡುವ ಪರಿಹಾರ ಅಲ್ಪ, ಅಕೇಶಿಯಾ ಮರಗಳಿಂದಾಗಿ ಕಾಡು ನಾಶವಾಗಿ ವನ್ಯಪ್ರಾಣಿಗಳ ಹಾವಳಿ ವಿಪರೀತವಾಗಿದೆ ಎಂದರು.
ಮಂಗಗಳಿಂದ ಅಡಿಕೆ, ಬಾಳೆ ಬೆಳೆಗಳಿಗೆ ಆಗುತ್ತಿರುವ ಹಾನಿ, ತೊಂದರೆ ತಪ್ಪಿಸಲು ಇಲಾಖೆ ಕ್ರಮ ಜರುಗಿಸಬೇಕು ಎಂದು ವಿವೇಕ ಭಟ್ ಕೋರಿದರು.
ಮಂಗನ ಹಾವಳಿ ತಡೆ, ಪರಿಹಾರ ಕಷ್ಟ, ಆದರೆ ಕಾಡುಕೋಣಗಳ ಹಾವಳಿ ತಡೆಯಲು ಮನವಿ ನೀಡಿದರೆ ಐಬಿಎಕ್ಸ್ ಹಾಕುವ ಮೂಲಕ ಕಾಡುಕೋಣಗಳ ತೊಂದರೆ ತಪ್ಪಿಸಬಹುದು ಎಂದು ವಿವರಿಸಿದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
