ವ್ಯಸನಗಳಿಗೆ ಬಲಿಯಾಗಲು ಮಾನಸಿಕ ದೌರ್ಬಲ್ಯಗಳು ಕಾರಣ

  • ಮಾನಸಿಕ ಸ್ಥಿರತೆ ಇಟ್ಟುಕೊಳ್ಳಿ * ಸಹಜ ಕುತೂಹಲ ದಾರಿ ತಪ್ಪಲು ಪ್ರೇರೇಪಿಸುತ್ತವೆ
  • ಚಟಕ್ಕೆ ಒಮ್ಮೆ ಸಿಲುಕಿದರೆ ಹೊರಗೆ ಬರುವುದು ಕಷ್ಟ
  • ವ್ಯಸನ ಅನೇಕ ರೋಗಗಳಿಗೂ ಕಾರಣ.
    ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ ಬಲಿಯಾಗಲು ಕಾರಣ: ಸ್ವರ್ಣವಲ್ಲೀ ಶ್ರೀ ಮಾನಸಿಕ ದೌರ್ಬಲ್ಯಗಳು ವ್ಯಸನಗಳಿಗೆ ಬಲಿಯಾಗಲು ಮುಖ್ಯ ಕಾರಣ. ವಿದ್ಯಾರ್ಥಿಗಳಲ್ಲಿನ ಸಹಜ ಕುತೂಹಲವು ಅವರು ವ್ಯಸನಗಳಿಗೆ ಬಲಿಯಾಗುವಂತೆ ಮಾಡುತ್ತದೆ ಎಂದು ಸೋಂದಾ ಶ್ರೀಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಎಚ್ಚರಿಸಿದರು.
    ಬುಧವಾರ ಅವರು 29ನೇ ಚಾತುರ್ಮಾಸ್ಯ ಅಂಗವಾಗಿ ಸ್ವರ್ಣವಲ್ಲೀಯ ಸುಧರ್ಮಾ ಸಭಾಭವನದಲ್ಲಿ ಶ್ರೀದೇವಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳಿಗೆ ವ್ಯಸನದಿಂದ ಮುಕ್ತ ಸಮಾಜ ನಿರ್ಮಾಣದ ಕುರಿತು ವಿಶೇಷ ಉಪನ್ಯಾಸ ನೀಡಿ ಮಾರ್ಗದರ್ಶನ ಮಾಡಿದರು.
    ಜಾಹೀರಾತು, ಹಿರಿಯರ ಅನುಕರಣೆ, ವ್ಯಸನಿಗಳ ಸಹವಾಸ, ಫ್ಯಾಶನ್ ಇತ್ಯಾದಿಗಳು ವ್ಯಸನಗಳಿಗೆ ಒಳಗಾಗಲು ಕಾರಣಗಳಾಗಿವೆ.
    ತಂಬಾಕು, ಮದ್ಯಪಾನ, ಗಾಂಜಾ, ಹೆರೋಯಿನ್‍ಗಳಂಥಹ ಮಾದಕ ದ್ರವ್ಯಗಳ ಸೇವನೆ, ಜೂಜು ಮುಂತಾದವುಗಳು ಜನರನ್ನು ಕಾಡುತ್ತಿರುವ ವ್ಯಸನಗಳಾಗಿವೆ. ಇತ್ತೀಚಿನ ಕಾಲದಲ್ಲಿ ಮೊಬೈಲ್ ಕೂಡ ದುವ್ರ್ಯಸನವಾಗಿ ಪರಿಣಿಮಿಸಿದೆ ಎಂದು ಆತಂಕಿಸಿದ ಸ್ವಾಮೀಜಿಗಳು, ಮೊಬೈಲನ್ನು ಸದುಪಯೋಗ ಮಾಡಿಕೊಳ್ಳುವ ಬದಲು ಗೇಮ್, ಅತಿಯಾದ ಅಂತರ್ಜಾಲಗಳ ಬಳಕೆಯಿಂದ ಸಮಾಜ ವ್ಯಸನಗಳಿಗೆ ಒಳಗಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿಯೂ ತೊಂದರೆಗಳುಂಟಾಗುತ್ತಿವೆ ಅನೇಕ ರೋಗಗಳಿಗೆ ಕೂಡ ಕಾರಣವಾಗಿದೆ. ವ್ಯಸನಗಳನ್ನು ರೂಢಿಸಿಕೊಂಡ ನಂತರ ಅದು ನಮ್ಮ ಪ್ರಾಣ ಇರುವವರೆಗೂ ಅದರಿಂದ ದೂರವಾಗಲು ಬಿಡುವುದಿಲ್ಲ. ದುವ್ರ್ಯಸನಗಳಿಂದ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಮಾನಸಿಕ ದೌರ್ಬಲ್ಯ, ನರಮಂಡಲಗಳಿಗೆ ಸಂಬಂಧಿಸಿದ ತೊಂದರೆಗಳು, ಮೂರ್ಛೆರೋಗಗಳು ಬರುತ್ತವೆ ಎಂದೂ ಕಳವಳ ವ್ಯಕ್ತಪಡಿಸಿದರು.
    ದುವ್ರ್ಯಸನಗಳಿಂದ ಅಪಘಾತಗಳು ಸಂಭವಿಸುತ್ತವೆ. ಮಾದಕ ದ್ರವ್ಯಗಳ ಸೇವನೆಯಿಂದ ಮನಸ್ಸು ಸ್ಥಿಮಿತ ಕಳೆದುಕೊಂಡು ಅಪರಾಧ ಪ್ರಕರಣಗಳು ಹೆಚ್ಚುತ್ತವೆ. ಶಾಸ್ತ್ರಕಾರರು ವ್ಯಸನಗಳನ್ನು ಮಾಡಬಾರದೆಂದು ತಿಳಿಸಿದ್ದಾರೆ. ಹಿರಿಯರ ಮಹಾತ್ಮರ ಮಾತನ್ನು ಮೀರಿ ವ್ಯಸನಗಳಿಗೆ ಒಳಗಾಗಿ ಕೊನೆಯಲ್ಲಿ ನಾಶ ಹೊಂದಿದ ಅನೇಕ ಉದಾಹರಣೆಗಳನ್ನು ಪುರಾಣ ಇತಿಹಾಸಗಳಲ್ಲಿ ಕಾಣಬಹುದು ಎಂದ ಸ್ವಾಮೀಜಿಗಳು, ಧ್ಯಾನ, ಜಪ, ಸ್ತೋತ್ರ, ಪೂಜೆ ಇವುಗಳನ್ನು ಮಾಡುವುದರಿಂದ ವ್ಯಸನಗಳಿಂದ ದೂರವಿರಬಹುದು. ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳುವುದು ಹಾಗೂ ಶೌಚಾದಿಗಳನ್ನು ಮುಗಿಸಿ ಪ್ರತಿನಿತ್ಯ ಧ್ಯಾನ, ಜಪ, ಸ್ತೋತ್ರ, ಪೂಜೆ ಇವುಗಳಲ್ಲಿ ಒಂದನ್ನಾದರು ಆಚರಿಸಬೇಕು.
    ಸಂಗೀತ, ಸಾಹಿತ್ಯ, ಕಲೆ, ಕ್ರೀಡೆಗಳಲ್ಲಿ ಭಾಗವಹಿಸಬೇಕು. ಸದ್ಗ್ರಂಥಗಳ ಅಧ್ಯಯನ ಮಾಡಬೇಕು. ಮಹಾತ್ಮರ ಜೀವನ ಚರಿತ್ರೆಯನ್ನು ಓದಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಿತವಾದ ಮಿತವಾದ ಆಹಾರವನ್ನು ಸೇವಿಸಬೇಕು. ಯೋಗಾಭ್ಯಾಸವನ್ನು ಪ್ರತಿನಿತ್ಯವೂ ಮಾಡಬೇಕು. ಸ್ತ್ರೀಯರನ್ನು ಮಾತೃಭಾವನೆಯಿಂದ ಕಾಣಬೇಕು ಎಂದರು.
    ಶ್ರೀದೇವಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಶಾಂತಾರಾಮ ಹೆಗಡೆ ಹೊಸ್ತೋಟಾ, ಸಂಘಟಕ ಅಶೋಕ ಭಟ್ಟ ಗೋಳಿಕೊಪ್ಪ ಪಾಲ್ಗೊಂಡರು. ಈ ಮೊದಲು ಶಾಲೆಗಳಲ್ಲಿ ಡಾ| ಕೃಷ್ಣಮೂರ್ತಿ ರಾಯ್ಸದ ಹಾಗೂ ಡಾ|ರವಿಕಿರಣ ಪಟವರ್ಧನ ಉಪನ್ಯಾಸ ನೀಡಿದ್ದರು. ಶ್ರೀದೇವಿ ಶಿಕ್ಷಣ ಸಂಸ್ಥೆ ಹಾಗೂ ಶ್ರೀನಿಕೇತನ ಶಾಲೆಯ 9 ಮತ್ತು 10 ನೇ ತರಗತಿಯ 250ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಮಂಜುಗುಣಿ ಜಾತ್ರೆ ಸಂಪನ್ನ, ಕದಂಬೋತ್ಸವ ೨೫ಕ್ಕೆ ಚಾಲನೆ,ಶಿವದರ್ಶನ! samajamukhi.net news round 12-04-25

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಿದ್ಧಾಪುರ ಆಯೋಜಿಸಿರುವ ಶಿವದರ್ಶನ ಪ್ರವಚನ ಮಾಲಿಕೆಹಾಗೂ ಭಗವದ್ಗೀತೆಯ ಸಂದೇಶ ʼದ್ವಾದಶ ಜ್ಯೋತಿರ್ಲಿಂಗಗಳ ದಿವ್ಯ ದರ್ಶನ ಕಾರ್ಯಕ್ರಮ ಏ.೧೪ ರ...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *