ವೃಕ್ಷ ಮಂತ್ರಾಕ್ಷತೆ ಬಗ್ಗೆ ತಿಳಿಯಬೇಕೆ? ಈ ಬರಹ ಓದಿ-

ಸ್ವರ್ಣವಲ್ಲೀ ಶ್ರೀಗಳ ಪರಿಸರ ಕಾಳಜಿ ಮಾದರಿ

ಶಿಷ್ಯರಲ್ಲಿ ವೃಕ್ಷ ಪ್ರೀತಿ ಬೆಳೆಸಲು ವಿಶಿಷ್ಟ ನಡೆ
ಚಾತುರ್ಮಾಸ್ಯದಲ್ಲಿ ಹಸಿರು ಶ್ರೀಗಳಿಂದ ವೃಕ್ಷ ಮಂತ್ರಾಕ್ಷತೆ

ಚಾತುರ್ಮಾಸ್ಯ ಅವಧಿಯಲ್ಲಿ ಪವಿತ್ರ ವೃಕ್ಷಗಳನ್ನು ಸ್ವತಃ ಸ್ವಾಮೀಜಿಗಳೇ ಶಿಷ್ಯರಿಗೆ ನೆನಪಿನ ಮಂತ್ರಾಕ್ಷತೆ ನೀಡುವ ಕಾರ್ಯಕ್ಕೆ ಈ ಬಾರಿಯೂ ಹಸಿರು ಸ್ವಾಮೀಜಿ ಎಂದೇ ಹೆಸರಾದ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಮುನ್ನುಡಿ ಬರೆದಿದ್ದಾರೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರಲ್ಲೂ ಜಾಗೃತಿ ಆಗಬೇಕು. ಮಠ ನೀಡಿದ ಉಡುಗೋರೆಯನ್ನು ಪ್ರೀತಿಯಿಂದ ಬೆಳೆಸಬೇಕು ಎಂಬ ಆಶಯದಲ್ಲಿ ವೃಕ್ಷ ಮಂತ್ರಾಕ್ಷತೆಯನ್ನು ಸ್ವಾಮೀಜಿಗಳು ನೀಡುತ್ತಿದ್ದಾರೆ.
ಬೇರೆ ಬೇರೆ ಅರಣ್ಯ ಪ್ರದೇಶಗಳಲ್ಲಿ ಲಭ್ಯವಿರುವ ಅನೇಕ ಅತ್ಯಮೂಲ್ಯವಾದ ವೃಕ್ಷ ಪ್ರಭೇದಗಳು ಅನೇಕ ಕಾರಣಗಳಿಂದ ವಿನಾಶದ ಅಂಚಿಗೆ ಹೋಗುತ್ತಿರುವ ಸಸ್ಯಗಳನ್ನು ಬೆಳಸಿ, ತರಿಸಿ ಮಠದಿಂದ ಶಿಷ್ಯರಿಗೆ ನೀಡಲಾಗುತ್ತಿದೆ.
ಸಂಪಿಗೆ, ಬಿಲ್ವ, ನೆಲ್ಲಿ, ಸಾಂಬಾರು ಗಿಡ, ಹಲಸು, ರಕ್ತ ಚಂದನ, ಮಾವು, ಸೀತಾ ಅಶೋಕ, ಪುತ್ರ ಸಂಜೀವಿನಿ, ನೇರಳೆ, ಪಾರಿಜಾತ, ಕದಂಬ, ಶಮಿ, ಮೊದಲಾದ ಹಣ್ಣು, ಹೂವು, ಔಷಧ ಸೇರಿದಂತೆ 22ಕ್ಕೂ ಹೆಚ್ಚು ಬಗೆಯ ಸಸ್ಯಗಳನ್ನು ಶ್ರೀಗಳು ವಿತರಿಸುತ್ತಿದ್ದಾರೆ. ಹೀಗೆ ವಿತರಿಸುವ ಸಸ್ಯಗಳನ್ನು ಮಠದ ಪವಿತ್ರ ಸಸ್ಯಲೋಕದಲ್ಲಿ ಬೆಳೆಸಲಾಗುತ್ತಿರುವುದೂ ಇನ್ನೊಂದು ವಿಶೇಷವಾಗಿದೆ.
ಸಸ್ಯ ಲೋಕದಲ್ಲಿ ಸಾವಿರಾರು ಸಸ್ಯಗಳನ್ನು ಇಲ್ಲಿ ಬೆಳೆಸಿದ್ದು, ಕೆಲವು ಅಗತ್ಯ ಸಸಿಗಳನ್ನು ನೀಡಿ ಅರಣ್ಯ ಇಲಾಖೆ ಕೂಡ ಕೈ ಜೋಡಿಸಿ ಶ್ರೀಗಳ ಕನಸಿಗೆ ಸ್ಪಂದಿಸುತ್ತಿದೆ.
2006ರ ಚಾತುರ್ಮಾಸ್ಯದಿಂದ ವೃಕ್ಷ ಮಂತ್ರಾಕ್ಷತೆಯನ್ನು ಶ್ರೀಗಳು ಆರಂಭಿಸಿದ್ದಾರೆ. ಈ ವರೆಗೂ ಶಿಷ್ಯರಿಗೆ ಮಂತ್ರಾಕ್ಷತೆ ಜೊತೆ ಸಸಿ ನೀಡುತ್ತಿರುವ ಸಂಖ್ಯೆ ಲಕ್ಷ ದಾಟಿರಬಹುದು ಎನ್ನುತ್ತಾರೆ ಪರಿಸರ ಕಾರ್ಯಕರ್ತ ಅನಂತ ಹೆಗಡೆ ಅಶೀಸರ.
ಸೀಮಾ ಭಿಕ್ಷೆಗೆ ಬರುವ ಭಕ್ತರೆಲ್ಲರಿಗೂ ಮಂತ್ರಾಕ್ಷತೆಯ ಜೊತೆ ಸಸಿಯನ್ನು ನೀಡುವುದು ವಾಡಿಕೆ. ಪ್ರತಿ ಸೀಮಾ ಭಿಕ್ಷದಂದು 250ಕ್ಕೂ ಅಧಿಕ ಸಸಿಗಳನ್ನು ವಿತರಿಸಲಾಗುತ್ತದೆ. ವೃಕ್ಷ ಮಂತ್ರಾಕ್ಷತೆಯ ರೂಪದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಪ್ರತಿಯೊಬ್ಬರಿಗೂ ಸಸಿಯನ್ನು ನೀಡುವುದು ಇಲ್ಲಿನ ಕ್ರಮವಾಗಿ ಬೆಳೆದಿದೆ. ವನವಾಸಿಗಳಿಗೂ ಹಸಿರು ಪ್ರೀತಿಯಿಂದ ಶ್ರೀಗಳು ವೃಕ್ಷ ನೀಡುತ್ತಿದ್ದಾರೆ. ಶಿಷ್ಯರ ಮೊಗದಲ್ಲೂ ಹಸಿರು ಪ್ರೀತಿ ಮೂಡಿಸುತ್ತಿದ್ದಾರೆ.
ಸಸ್ಯಲೋಕದಲ್ಲಿ ಪ್ರತಿ ವರ್ಷವೂ 25 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನರ್ಸರಿ ಮಾಡಿ ಬೆಳೆಸಲಾಗುತ್ತಿದೆ. ಅರಣ್ಯ ಇಲಾಖೆ, ಅರಣ್ಯ ಕಾಲೇಜುನವರು ಬೀಜವನ್ನು ನೀಡಿ ಸಹಕರಿಸುತ್ತಾರೆ ಎನ್ನುತ್ತಾರೆ ಸಸ್ಯ ಲೋಕದ ಸಹ ಸಂಚಾಲಕ ಮಹಾಬಲೇಶ್ವರ ಗುಮ್ಮಾನಿ.
ಗುರುಗಳ ಸಸ್ಯ ಪ್ರೀತಿ ಪ್ರತೀ ಚಾತುರ್ಮಾಸ್ಯವೂ ಪರಿಸರ ಸಂದೇಶವಾಗಿ ಭಕ್ತರ ಭಾವವನ್ನು ಇನ್ನಷ್ಟು ಆಪ್ತಗೊಳಿಸುತ್ತಿರುವುದು ಸತ್ಯ.
ಸ್ವರ್ಣವಲ್ಲೀ ಶ್ರೀಗಳು ಮಂತ್ರಾಕ್ಷತೆಯಾಗಿ ನೀಡಿದ ಸಸ್ಯಗಳು ನಾಡಿನ ಹಲವಡೆ ಮಾತ್ರವಲ್ಲ, ಹೊರನಾಡಾದ ಮುಂಬಯಿ, ಕಲ್ಕತ್ತ, ಪೂನಾ, ದೆಹಲಿ ಸೇರಿದಂತೆ ಹಲವು ಕಡೆ ಇಂದು ಮರವಾಗಿ ಬೆಳೆದು ಪರಿಸರ ಸಮೃದ್ಧಿ ಕೊಡುಗೆ ನೆಟ್ಟಿದೆ.

ಅನಂತ ಹೆಗಡೆ ಅಶೀಸರ, ಸಸ್ಯ ಲೋಕ ಸಂಚಾಲಕ
ಪೀಠ ನೀಡಿದ ವೃಕ್ಷ ಮಂತ್ರಾಕ್ಷತೆಯ ಗಿಡವನ್ನು ಪ್ರೀತಿಯಿಂದ ತಂದು ನೆಡುತ್ತಿದ್ದೇವೆ. ಗಿಡ ನೋಡಿದಾಗ ಗುರುಗಳು ನೆನಪಾಗುತ್ತಾರೆ.ನರೇಂದ್ರ ಎಸ್.ಹೆಗಡೆ, ಶಿಷ್ಯ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *