ವೃಕ್ಷ ಮಂತ್ರಾಕ್ಷತೆ ಬಗ್ಗೆ ತಿಳಿಯಬೇಕೆ? ಈ ಬರಹ ಓದಿ-

ಸ್ವರ್ಣವಲ್ಲೀ ಶ್ರೀಗಳ ಪರಿಸರ ಕಾಳಜಿ ಮಾದರಿ

ಶಿಷ್ಯರಲ್ಲಿ ವೃಕ್ಷ ಪ್ರೀತಿ ಬೆಳೆಸಲು ವಿಶಿಷ್ಟ ನಡೆ
ಚಾತುರ್ಮಾಸ್ಯದಲ್ಲಿ ಹಸಿರು ಶ್ರೀಗಳಿಂದ ವೃಕ್ಷ ಮಂತ್ರಾಕ್ಷತೆ

ಚಾತುರ್ಮಾಸ್ಯ ಅವಧಿಯಲ್ಲಿ ಪವಿತ್ರ ವೃಕ್ಷಗಳನ್ನು ಸ್ವತಃ ಸ್ವಾಮೀಜಿಗಳೇ ಶಿಷ್ಯರಿಗೆ ನೆನಪಿನ ಮಂತ್ರಾಕ್ಷತೆ ನೀಡುವ ಕಾರ್ಯಕ್ಕೆ ಈ ಬಾರಿಯೂ ಹಸಿರು ಸ್ವಾಮೀಜಿ ಎಂದೇ ಹೆಸರಾದ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಮುನ್ನುಡಿ ಬರೆದಿದ್ದಾರೆ.
ಪರಿಸರ ಸಂರಕ್ಷಣೆ ಪ್ರತಿಯೊಬ್ಬರಲ್ಲೂ ಜಾಗೃತಿ ಆಗಬೇಕು. ಮಠ ನೀಡಿದ ಉಡುಗೋರೆಯನ್ನು ಪ್ರೀತಿಯಿಂದ ಬೆಳೆಸಬೇಕು ಎಂಬ ಆಶಯದಲ್ಲಿ ವೃಕ್ಷ ಮಂತ್ರಾಕ್ಷತೆಯನ್ನು ಸ್ವಾಮೀಜಿಗಳು ನೀಡುತ್ತಿದ್ದಾರೆ.
ಬೇರೆ ಬೇರೆ ಅರಣ್ಯ ಪ್ರದೇಶಗಳಲ್ಲಿ ಲಭ್ಯವಿರುವ ಅನೇಕ ಅತ್ಯಮೂಲ್ಯವಾದ ವೃಕ್ಷ ಪ್ರಭೇದಗಳು ಅನೇಕ ಕಾರಣಗಳಿಂದ ವಿನಾಶದ ಅಂಚಿಗೆ ಹೋಗುತ್ತಿರುವ ಸಸ್ಯಗಳನ್ನು ಬೆಳಸಿ, ತರಿಸಿ ಮಠದಿಂದ ಶಿಷ್ಯರಿಗೆ ನೀಡಲಾಗುತ್ತಿದೆ.
ಸಂಪಿಗೆ, ಬಿಲ್ವ, ನೆಲ್ಲಿ, ಸಾಂಬಾರು ಗಿಡ, ಹಲಸು, ರಕ್ತ ಚಂದನ, ಮಾವು, ಸೀತಾ ಅಶೋಕ, ಪುತ್ರ ಸಂಜೀವಿನಿ, ನೇರಳೆ, ಪಾರಿಜಾತ, ಕದಂಬ, ಶಮಿ, ಮೊದಲಾದ ಹಣ್ಣು, ಹೂವು, ಔಷಧ ಸೇರಿದಂತೆ 22ಕ್ಕೂ ಹೆಚ್ಚು ಬಗೆಯ ಸಸ್ಯಗಳನ್ನು ಶ್ರೀಗಳು ವಿತರಿಸುತ್ತಿದ್ದಾರೆ. ಹೀಗೆ ವಿತರಿಸುವ ಸಸ್ಯಗಳನ್ನು ಮಠದ ಪವಿತ್ರ ಸಸ್ಯಲೋಕದಲ್ಲಿ ಬೆಳೆಸಲಾಗುತ್ತಿರುವುದೂ ಇನ್ನೊಂದು ವಿಶೇಷವಾಗಿದೆ.
ಸಸ್ಯ ಲೋಕದಲ್ಲಿ ಸಾವಿರಾರು ಸಸ್ಯಗಳನ್ನು ಇಲ್ಲಿ ಬೆಳೆಸಿದ್ದು, ಕೆಲವು ಅಗತ್ಯ ಸಸಿಗಳನ್ನು ನೀಡಿ ಅರಣ್ಯ ಇಲಾಖೆ ಕೂಡ ಕೈ ಜೋಡಿಸಿ ಶ್ರೀಗಳ ಕನಸಿಗೆ ಸ್ಪಂದಿಸುತ್ತಿದೆ.
2006ರ ಚಾತುರ್ಮಾಸ್ಯದಿಂದ ವೃಕ್ಷ ಮಂತ್ರಾಕ್ಷತೆಯನ್ನು ಶ್ರೀಗಳು ಆರಂಭಿಸಿದ್ದಾರೆ. ಈ ವರೆಗೂ ಶಿಷ್ಯರಿಗೆ ಮಂತ್ರಾಕ್ಷತೆ ಜೊತೆ ಸಸಿ ನೀಡುತ್ತಿರುವ ಸಂಖ್ಯೆ ಲಕ್ಷ ದಾಟಿರಬಹುದು ಎನ್ನುತ್ತಾರೆ ಪರಿಸರ ಕಾರ್ಯಕರ್ತ ಅನಂತ ಹೆಗಡೆ ಅಶೀಸರ.
ಸೀಮಾ ಭಿಕ್ಷೆಗೆ ಬರುವ ಭಕ್ತರೆಲ್ಲರಿಗೂ ಮಂತ್ರಾಕ್ಷತೆಯ ಜೊತೆ ಸಸಿಯನ್ನು ನೀಡುವುದು ವಾಡಿಕೆ. ಪ್ರತಿ ಸೀಮಾ ಭಿಕ್ಷದಂದು 250ಕ್ಕೂ ಅಧಿಕ ಸಸಿಗಳನ್ನು ವಿತರಿಸಲಾಗುತ್ತದೆ. ವೃಕ್ಷ ಮಂತ್ರಾಕ್ಷತೆಯ ರೂಪದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಪ್ರತಿಯೊಬ್ಬರಿಗೂ ಸಸಿಯನ್ನು ನೀಡುವುದು ಇಲ್ಲಿನ ಕ್ರಮವಾಗಿ ಬೆಳೆದಿದೆ. ವನವಾಸಿಗಳಿಗೂ ಹಸಿರು ಪ್ರೀತಿಯಿಂದ ಶ್ರೀಗಳು ವೃಕ್ಷ ನೀಡುತ್ತಿದ್ದಾರೆ. ಶಿಷ್ಯರ ಮೊಗದಲ್ಲೂ ಹಸಿರು ಪ್ರೀತಿ ಮೂಡಿಸುತ್ತಿದ್ದಾರೆ.
ಸಸ್ಯಲೋಕದಲ್ಲಿ ಪ್ರತಿ ವರ್ಷವೂ 25 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನರ್ಸರಿ ಮಾಡಿ ಬೆಳೆಸಲಾಗುತ್ತಿದೆ. ಅರಣ್ಯ ಇಲಾಖೆ, ಅರಣ್ಯ ಕಾಲೇಜುನವರು ಬೀಜವನ್ನು ನೀಡಿ ಸಹಕರಿಸುತ್ತಾರೆ ಎನ್ನುತ್ತಾರೆ ಸಸ್ಯ ಲೋಕದ ಸಹ ಸಂಚಾಲಕ ಮಹಾಬಲೇಶ್ವರ ಗುಮ್ಮಾನಿ.
ಗುರುಗಳ ಸಸ್ಯ ಪ್ರೀತಿ ಪ್ರತೀ ಚಾತುರ್ಮಾಸ್ಯವೂ ಪರಿಸರ ಸಂದೇಶವಾಗಿ ಭಕ್ತರ ಭಾವವನ್ನು ಇನ್ನಷ್ಟು ಆಪ್ತಗೊಳಿಸುತ್ತಿರುವುದು ಸತ್ಯ.
ಸ್ವರ್ಣವಲ್ಲೀ ಶ್ರೀಗಳು ಮಂತ್ರಾಕ್ಷತೆಯಾಗಿ ನೀಡಿದ ಸಸ್ಯಗಳು ನಾಡಿನ ಹಲವಡೆ ಮಾತ್ರವಲ್ಲ, ಹೊರನಾಡಾದ ಮುಂಬಯಿ, ಕಲ್ಕತ್ತ, ಪೂನಾ, ದೆಹಲಿ ಸೇರಿದಂತೆ ಹಲವು ಕಡೆ ಇಂದು ಮರವಾಗಿ ಬೆಳೆದು ಪರಿಸರ ಸಮೃದ್ಧಿ ಕೊಡುಗೆ ನೆಟ್ಟಿದೆ.

ಅನಂತ ಹೆಗಡೆ ಅಶೀಸರ, ಸಸ್ಯ ಲೋಕ ಸಂಚಾಲಕ
ಪೀಠ ನೀಡಿದ ವೃಕ್ಷ ಮಂತ್ರಾಕ್ಷತೆಯ ಗಿಡವನ್ನು ಪ್ರೀತಿಯಿಂದ ತಂದು ನೆಡುತ್ತಿದ್ದೇವೆ. ಗಿಡ ನೋಡಿದಾಗ ಗುರುಗಳು ನೆನಪಾಗುತ್ತಾರೆ.ನರೇಂದ್ರ ಎಸ್.ಹೆಗಡೆ, ಶಿಷ್ಯ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *