ಬಿ.ನಾ.ರಾ. ಬಗ್ಗೆ ಅಮೀನ್ ಮಟ್ಟು ಬರೆದದ್ದು-

ಶಾಸಕ ಬಿ.ನಾರಾಯಣ ರಾವ್ ಶನಿವಾರ ವಿಶ್ವಾಸ ಮತ ಯಾಚನೆಯ ಮೇಲೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಈ ಮನುಷ್ಯನನ್ನು ನಾನು ಮೊದಲು ನೋಡಿದ್ದು 2003ರಲ್ಲಿ.
ಲೋಕಸಭಾ ಚುನಾವಣೆಗೆ ತಾಲೀಮು ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಯಲ್ಲಿ ಇಡೀ ದೇಶದ ಕಾಂಗ್ರೆಸ್ ಬ್ಲಾಕ್ ಮತ್ತು ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದರು.( ಸಾಮಾನ್ಯವಾಗಿ ಪಕ್ಷದಲ್ಲಿ ಈ ಮಟ್ಟದ ಪದಾಧಿಕಾರಿಗಳ ಸಭೆ ಕರೆಯುವುದೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೂ ಅದೇ ಕೊನೆಯ ಸಭೆ).
ಆ ಸಭೆಯಲ್ಲಿ ಭಾಗವಹಿಸಿದ್ದ ದಕ್ಷಿಣದ ರಾಜ್ಯಗಳ ಪದಾಧಿಕಾರಿಗಳಿಗೆ ದೊಡ್ಡ ತೊಡಕಾಗಿದ್ದು ಭಾಷೆ. 
ಹಿಂದಿಯಲ್ಲಿ ನಡೆಯುತ್ತಿದ್ದ ಕಲಾಪದಲ್ಲಿ ಇವರೆಲ್ಲ ಮೂಕರು ಮತ್ತು ಕಿವುಡರು.
ಈ ಅವಕಾಶವನ್ನೇ ಬಳಸಿಕೊಂಡು ಗಮನಸೆಳೆದವರು ಬಿ.ನಾರಾಯಣ ರಾವ್.
“ಕಾಂಗ್ರೆಸ್ ಪಕ್ಷದ ಮುಖ್ಯ ಬಲ‌ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಜಾತಿಗಳು. ಅವರ ಬೆಂಬಲ ಇಲ್ಲದೆ ಇದ್ದಾಗ ಕಾಂಗ್ರೆಸ್ ಸೋತಿದೆ. ಅವರ ಬಲ‌ ಕಳೆದುಕೊಳ್ಳಬೇಡಿ’ ಎಂದು ನಿಜಾಮರ ನಾಡಿನ ನಿರರ್ಗಳ ಹಿಂದಿಯಲ್ಲಿ ಸೋನಿಯಾಗಾಂಧಿ ಅವರನ್ನು ನಾರಾಯಣ ರಾವ್ ಎಚ್ಚರಿಸಿದ್ದರು.
ಸೋನಿಯಾಗಾಂಧಿ ಬೆರಗಿನಿಂದ ಬಿಟ್ಟ ಕಣ್ಣಲ್ಲೇ ನಾರಾಯಣ ರಾವ್ ಅವರನ್ನು ನೋಡುತ್ತಲೇ ಇದ್ದದ್ದು ನನಗೆ ಈಗಲೂ ಸ್ಪಷ್ಟವಾಗಿ ನೆನಪಿದೆ.
ಇಂತಹ ಸಭೆಗಳಲ್ಲಿ ಸಾಮಾನ್ಯವಾಗಿ ಮೆರೆಯುವ ಹಿಂದಿವಾಲಾಗಳ ನಡುವೆ ನಮ್ಮ ಕನ್ನಡಿಗನೊಬ್ಬ ಎಲ್ಲರ ಗಮನಸೆಳೆದರಲ್ಲಾ ಎಂಬ ಖುಷಿ‌ ನನಗೆ.
ಅದೇ ಖುಷಿಯಲ್ಲಿ ಆ ಘಟನೆಯನ್ನು ಆ‌ ವಾರದ ನನ್ನ ಅಂಕಣದ‌‌ ಕೊನೆಯಲ್ಲಿನ ವಾರೆನೋಟದಲ್ಲಿ ಬರೆದು ಮುಂದಿನ‌ ಚುನಾವಣೆಯಲ್ಲಿ ಟಿಕೆಟ್ ಗ್ಯಾರಂಟಿ? ಎಂದು ಕಿಚಾಯಿಸಿದ್ದೆ. 
(ನಮ್ಮ ಕಿಲಾಡಿ ನಾರಾಯಣ ರಾವ್ ಅಂಕಣದಲ್ಲಿನ ತಮಗೆ ಸಂಬಂಧಿಸಿದ ಭಾಗವನ್ನು ದೊಡ್ಡದಾಗಿ ಪೋಸ್ಟರ್ ಮಾಡಿಸಿ ತಮ್ಮ‌ಕಚೇರಿಯಲ್ಲಿ ಹಾಕಿದ್ದರಂತೆ. ಆದರೂ ಬಡಪಾಯಿ ನಾರಾಯಣ ರಾವ್ ಶಾಸಕರಾಗಲು ಅದರ ನಂತರ ಹದಿನೈದು ವರ್ಷ ಬೇಕಾಯಿತು)
ಮೊನ್ನೆ ಅವರ ಮಾತು ಕೇಳಿ ಇದೆಲ್ಲ ನೆನಪಾಯ್ತು. (ಶಾಸಕ ನಾ.ರಾ. ಬಗ್ಗೆ ಪತ್ರಕರ್ತ ಅಮ್ಮಿನಮಟ್ಟು ಬರೆದದ್ದು)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ...

ನ್ಯೂಸ್‌ ರೌಂಡ್… ಶಿಕ್ಷಣ ಇಲಾಖೆಗೆ ಶ್ಲಾಘನೆ, ಲೋಕೋಪಯೋಗಿ ಇಲಾಖೆಗೆ ಎಚ್ಚರಿಕೆ!

ಎತ್ತಿನ ಗಾಡಿ ಏರಿದ ಶಾಸಕ- ರೈತ, ಶಾಸಕ ಭೀಮಣ್ಣ ನಾಯ್ಕ ಸಿದ್ಧಾಪುರ ಪ್ರಥಮ ದರ್ಜೆ ಕಾಲೇಜ್‌ ಜಾನಪದ ಉತ್ಸವಕ್ಕೆ ಎತ್ತಿನ ಗಾಡಿ ಮೂಲಕ ಬಂದು...

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

Latest Posts

mirjan port- ಹಳೆ ವೈಭವ ಸಾರುವ ಹೊಸ ಪ್ರವಾಸಿ ತಾಣ ಕುಮಟಾದ ಮಿರ್ಜಾನ ಕೋಟೆ

ಒಂದು ದೇಶದ ವೈಭವವನ್ನು ಆದೇಶದ ಇತಿಹಾಸ ಚರಿತ್ರೆಗಳ ಮೂಲಕ ಅಳೆಯಲಾಗುತ್ತದೆ. ಅವಿಭಜಿತ ಭಾರತ ಬಹುವಿಶಾಲ ರಾಷ್ಟ್ರವಾಗಿತ್ತು. ಇಮ್ಮಡಿ ಪುಲಕೇಶಿಯ ಕಾಲದಲ್ಲಿ ಕೇರಳದಿಂದ ಗೋದಾವರಿ ನದಿ ತೀರದ ವರೆಗೆ ಕನ್ನಡ ನಾಡೇ ಪಸರಿಸಿತ್ತು ಎಂದು ಹೇಳಲಾಗುತ್ತದೆ. ಆಯಾ ಕಾಲದ ಅರಸರು ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸುತ್ತಾ ನೆರೆ ಹೊರೆಯವರನ್ನು ಮತ್ತಷ್ಟು ಸರಿಸುತ್ತಾ ತಮ್ಮ ವ್ಯಾ ಪ್ತಿಯನ್ನು ವಿಸ್ತರಿಸುತಿದ್ದರು....

Recommended For You

About the Author: Kanneshwar Naik

Leave a Reply

Your email address will not be published. Required fields are marked *