ಬಿ.ನಾ.ರಾ. ಬಗ್ಗೆ ಅಮೀನ್ ಮಟ್ಟು ಬರೆದದ್ದು-

ಶಾಸಕ ಬಿ.ನಾರಾಯಣ ರಾವ್ ಶನಿವಾರ ವಿಶ್ವಾಸ ಮತ ಯಾಚನೆಯ ಮೇಲೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಈ ಮನುಷ್ಯನನ್ನು ನಾನು ಮೊದಲು ನೋಡಿದ್ದು 2003ರಲ್ಲಿ.
ಲೋಕಸಭಾ ಚುನಾವಣೆಗೆ ತಾಲೀಮು ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಯಲ್ಲಿ ಇಡೀ ದೇಶದ ಕಾಂಗ್ರೆಸ್ ಬ್ಲಾಕ್ ಮತ್ತು ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದರು.( ಸಾಮಾನ್ಯವಾಗಿ ಪಕ್ಷದಲ್ಲಿ ಈ ಮಟ್ಟದ ಪದಾಧಿಕಾರಿಗಳ ಸಭೆ ಕರೆಯುವುದೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೂ ಅದೇ ಕೊನೆಯ ಸಭೆ).
ಆ ಸಭೆಯಲ್ಲಿ ಭಾಗವಹಿಸಿದ್ದ ದಕ್ಷಿಣದ ರಾಜ್ಯಗಳ ಪದಾಧಿಕಾರಿಗಳಿಗೆ ದೊಡ್ಡ ತೊಡಕಾಗಿದ್ದು ಭಾಷೆ. 
ಹಿಂದಿಯಲ್ಲಿ ನಡೆಯುತ್ತಿದ್ದ ಕಲಾಪದಲ್ಲಿ ಇವರೆಲ್ಲ ಮೂಕರು ಮತ್ತು ಕಿವುಡರು.
ಈ ಅವಕಾಶವನ್ನೇ ಬಳಸಿಕೊಂಡು ಗಮನಸೆಳೆದವರು ಬಿ.ನಾರಾಯಣ ರಾವ್.
“ಕಾಂಗ್ರೆಸ್ ಪಕ್ಷದ ಮುಖ್ಯ ಬಲ‌ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಜಾತಿಗಳು. ಅವರ ಬೆಂಬಲ ಇಲ್ಲದೆ ಇದ್ದಾಗ ಕಾಂಗ್ರೆಸ್ ಸೋತಿದೆ. ಅವರ ಬಲ‌ ಕಳೆದುಕೊಳ್ಳಬೇಡಿ’ ಎಂದು ನಿಜಾಮರ ನಾಡಿನ ನಿರರ್ಗಳ ಹಿಂದಿಯಲ್ಲಿ ಸೋನಿಯಾಗಾಂಧಿ ಅವರನ್ನು ನಾರಾಯಣ ರಾವ್ ಎಚ್ಚರಿಸಿದ್ದರು.
ಸೋನಿಯಾಗಾಂಧಿ ಬೆರಗಿನಿಂದ ಬಿಟ್ಟ ಕಣ್ಣಲ್ಲೇ ನಾರಾಯಣ ರಾವ್ ಅವರನ್ನು ನೋಡುತ್ತಲೇ ಇದ್ದದ್ದು ನನಗೆ ಈಗಲೂ ಸ್ಪಷ್ಟವಾಗಿ ನೆನಪಿದೆ.
ಇಂತಹ ಸಭೆಗಳಲ್ಲಿ ಸಾಮಾನ್ಯವಾಗಿ ಮೆರೆಯುವ ಹಿಂದಿವಾಲಾಗಳ ನಡುವೆ ನಮ್ಮ ಕನ್ನಡಿಗನೊಬ್ಬ ಎಲ್ಲರ ಗಮನಸೆಳೆದರಲ್ಲಾ ಎಂಬ ಖುಷಿ‌ ನನಗೆ.
ಅದೇ ಖುಷಿಯಲ್ಲಿ ಆ ಘಟನೆಯನ್ನು ಆ‌ ವಾರದ ನನ್ನ ಅಂಕಣದ‌‌ ಕೊನೆಯಲ್ಲಿನ ವಾರೆನೋಟದಲ್ಲಿ ಬರೆದು ಮುಂದಿನ‌ ಚುನಾವಣೆಯಲ್ಲಿ ಟಿಕೆಟ್ ಗ್ಯಾರಂಟಿ? ಎಂದು ಕಿಚಾಯಿಸಿದ್ದೆ. 
(ನಮ್ಮ ಕಿಲಾಡಿ ನಾರಾಯಣ ರಾವ್ ಅಂಕಣದಲ್ಲಿನ ತಮಗೆ ಸಂಬಂಧಿಸಿದ ಭಾಗವನ್ನು ದೊಡ್ಡದಾಗಿ ಪೋಸ್ಟರ್ ಮಾಡಿಸಿ ತಮ್ಮ‌ಕಚೇರಿಯಲ್ಲಿ ಹಾಕಿದ್ದರಂತೆ. ಆದರೂ ಬಡಪಾಯಿ ನಾರಾಯಣ ರಾವ್ ಶಾಸಕರಾಗಲು ಅದರ ನಂತರ ಹದಿನೈದು ವರ್ಷ ಬೇಕಾಯಿತು)
ಮೊನ್ನೆ ಅವರ ಮಾತು ಕೇಳಿ ಇದೆಲ್ಲ ನೆನಪಾಯ್ತು. (ಶಾಸಕ ನಾ.ರಾ. ಬಗ್ಗೆ ಪತ್ರಕರ್ತ ಅಮ್ಮಿನಮಟ್ಟು ಬರೆದದ್ದು)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *