ಬಿ.ನಾ.ರಾ. ಬಗ್ಗೆ ಅಮೀನ್ ಮಟ್ಟು ಬರೆದದ್ದು-

ಶಾಸಕ ಬಿ.ನಾರಾಯಣ ರಾವ್ ಶನಿವಾರ ವಿಶ್ವಾಸ ಮತ ಯಾಚನೆಯ ಮೇಲೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಈ ಮನುಷ್ಯನನ್ನು ನಾನು ಮೊದಲು ನೋಡಿದ್ದು 2003ರಲ್ಲಿ.
ಲೋಕಸಭಾ ಚುನಾವಣೆಗೆ ತಾಲೀಮು ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಯಲ್ಲಿ ಇಡೀ ದೇಶದ ಕಾಂಗ್ರೆಸ್ ಬ್ಲಾಕ್ ಮತ್ತು ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದರು.( ಸಾಮಾನ್ಯವಾಗಿ ಪಕ್ಷದಲ್ಲಿ ಈ ಮಟ್ಟದ ಪದಾಧಿಕಾರಿಗಳ ಸಭೆ ಕರೆಯುವುದೇ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೂ ಅದೇ ಕೊನೆಯ ಸಭೆ).
ಆ ಸಭೆಯಲ್ಲಿ ಭಾಗವಹಿಸಿದ್ದ ದಕ್ಷಿಣದ ರಾಜ್ಯಗಳ ಪದಾಧಿಕಾರಿಗಳಿಗೆ ದೊಡ್ಡ ತೊಡಕಾಗಿದ್ದು ಭಾಷೆ. 
ಹಿಂದಿಯಲ್ಲಿ ನಡೆಯುತ್ತಿದ್ದ ಕಲಾಪದಲ್ಲಿ ಇವರೆಲ್ಲ ಮೂಕರು ಮತ್ತು ಕಿವುಡರು.
ಈ ಅವಕಾಶವನ್ನೇ ಬಳಸಿಕೊಂಡು ಗಮನಸೆಳೆದವರು ಬಿ.ನಾರಾಯಣ ರಾವ್.
“ಕಾಂಗ್ರೆಸ್ ಪಕ್ಷದ ಮುಖ್ಯ ಬಲ‌ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಜಾತಿಗಳು. ಅವರ ಬೆಂಬಲ ಇಲ್ಲದೆ ಇದ್ದಾಗ ಕಾಂಗ್ರೆಸ್ ಸೋತಿದೆ. ಅವರ ಬಲ‌ ಕಳೆದುಕೊಳ್ಳಬೇಡಿ’ ಎಂದು ನಿಜಾಮರ ನಾಡಿನ ನಿರರ್ಗಳ ಹಿಂದಿಯಲ್ಲಿ ಸೋನಿಯಾಗಾಂಧಿ ಅವರನ್ನು ನಾರಾಯಣ ರಾವ್ ಎಚ್ಚರಿಸಿದ್ದರು.
ಸೋನಿಯಾಗಾಂಧಿ ಬೆರಗಿನಿಂದ ಬಿಟ್ಟ ಕಣ್ಣಲ್ಲೇ ನಾರಾಯಣ ರಾವ್ ಅವರನ್ನು ನೋಡುತ್ತಲೇ ಇದ್ದದ್ದು ನನಗೆ ಈಗಲೂ ಸ್ಪಷ್ಟವಾಗಿ ನೆನಪಿದೆ.
ಇಂತಹ ಸಭೆಗಳಲ್ಲಿ ಸಾಮಾನ್ಯವಾಗಿ ಮೆರೆಯುವ ಹಿಂದಿವಾಲಾಗಳ ನಡುವೆ ನಮ್ಮ ಕನ್ನಡಿಗನೊಬ್ಬ ಎಲ್ಲರ ಗಮನಸೆಳೆದರಲ್ಲಾ ಎಂಬ ಖುಷಿ‌ ನನಗೆ.
ಅದೇ ಖುಷಿಯಲ್ಲಿ ಆ ಘಟನೆಯನ್ನು ಆ‌ ವಾರದ ನನ್ನ ಅಂಕಣದ‌‌ ಕೊನೆಯಲ್ಲಿನ ವಾರೆನೋಟದಲ್ಲಿ ಬರೆದು ಮುಂದಿನ‌ ಚುನಾವಣೆಯಲ್ಲಿ ಟಿಕೆಟ್ ಗ್ಯಾರಂಟಿ? ಎಂದು ಕಿಚಾಯಿಸಿದ್ದೆ. 
(ನಮ್ಮ ಕಿಲಾಡಿ ನಾರಾಯಣ ರಾವ್ ಅಂಕಣದಲ್ಲಿನ ತಮಗೆ ಸಂಬಂಧಿಸಿದ ಭಾಗವನ್ನು ದೊಡ್ಡದಾಗಿ ಪೋಸ್ಟರ್ ಮಾಡಿಸಿ ತಮ್ಮ‌ಕಚೇರಿಯಲ್ಲಿ ಹಾಕಿದ್ದರಂತೆ. ಆದರೂ ಬಡಪಾಯಿ ನಾರಾಯಣ ರಾವ್ ಶಾಸಕರಾಗಲು ಅದರ ನಂತರ ಹದಿನೈದು ವರ್ಷ ಬೇಕಾಯಿತು)
ಮೊನ್ನೆ ಅವರ ಮಾತು ಕೇಳಿ ಇದೆಲ್ಲ ನೆನಪಾಯ್ತು. (ಶಾಸಕ ನಾ.ರಾ. ಬಗ್ಗೆ ಪತ್ರಕರ್ತ ಅಮ್ಮಿನಮಟ್ಟು ಬರೆದದ್ದು)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *