ಮತ್ತೆ ಬೆಳಕಿಗೆ ಬಂದ ನಿತ್ಯಾನಂದ ಗೌಡ

ಸಿದ್ಧಾಪುರದಲ್ಲಿ ಹೆಸರುಮಾಡಿ, ಆರೋಪ,ಆಪಾದನೆಗಳಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಪಿ.ಎಸ್.ಐ. ನಿತ್ಯಾನಂದ ಗೌಡ ಮತ್ತೆ ಸುದ್ದಿಯಾಗಿದ್ದಾರೆ.
ಕಳೆದ ವಾರ ಕೋಟ ಪೊಲೀಸ್ ಠಾಣೆಯಿಂದ ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ಭೇದಿಸಿ, ಇಲಾಖೆಯ ಅಧೀನ ಸಿಬ್ಬಂದಿಗಳ ಅಮಾನತ್ತಿಗೆ ಕಾರಣವಾದವರು ಬೇರೆ ಯಾರೂ ಅಲ್ಲ. ಅದೇ ಸಿದ್ಧಾಪುರದ ಹಳೆ ಪಿ.ಎಸ್.ಐ. ನಿತ್ಯಾನಂದ ಗೌಡ.
ನಿತ್ಯಾನಂದ ಗೌಡ ಜನರು, ಜನಪ್ರತಿನಿಧಿಗಳೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಾರೆ ಎನ್ನುವ ಗುರುತರವಾದ ಆಪಾದನೆ ಮೇಲೆ ಇಲ್ಲಿಂದ ವರ್ಗಾವಣೆಯಾದವರು.
ಮರಳಿ ದಕ್ಷಿಣ ಕನ್ನಡಕ್ಕೆ ಅಕಾಲದಲ್ಲಿ ತೆರಳಿದ್ದ ನಿತ್ಯಾನಂದ ಗೌಡ ನಿಜಕ್ಕೂ ಇಲ್ಲಿಯ ಆರೋಪಕ್ಕೆ ಗುರಿಯಾದಂತೆ ಅಪ್ರಾಮಾಣಿಕರೋ, ಗರ್ವಿಯೋ ಬೇರೆ ವಿಚಾರ. ಆದರೆ ಈಗಿನ ಜಾನುವಾರು ಸಾಗಾಟ ಪ್ರಕರಣದಲ್ಲಿ ಪೊಲೀಸರ ಶಾಮೀಲಾತಿ ಭೇದಿಸಿರುವ ಪ್ರಕರಣದಲ್ಲಿ ನಾಲ್ಕೈದು ಪೇದೆಗಳು ಅಮಾನತ್ತಾಗುವಲ್ಲಿ ಶ್ರಮಿಸಿದವರು ನಿತ್ಯಾನಂದ ಗೌಡ.
ನಿತ್ಯಾನಂದ ಗೌಡರ ತನಿಖೆಯಿಂದ ಮಲೆನಾಡು,ಕರಾವಳಿಯಲ್ಲಿ ಸಾಗಿಸಲಾಗುತಿದ್ದ ಜಾನುವಾರು ಅಕ್ರಮ ದಂಧೆಗೆ ಪೊಲೀಸರೇ ನೆರವಾಗಿರುವುದನ್ನು ಭೇದಿಸಿದ ಪಿ.ಎಸ್.ಐ. ನಿತ್ಯಾನಂದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಪ್ರಶಂಸೆ ಕೇಳಿ ಬಂದಿದೆ. ಇದೇ ವೇಳೆ ಪೊಲೀಸರು ಜಾನುವಾರು ಸಾಗಾಟ, ಕೋಮುಗಲಭೆಗಳಿಗೆ ಪರೋಕ್ಷವಾಗಿ ಬೆಂಬಲಿಸುವ ಸತ್ಯ ಹೊರಹಾಕಿರುವ ಬಗ್ಗೆ ಅವರಿಗೆ ಶ್ಲಾಘನೆ ದೊರೆತಿದೆ.
ನಿತ್ಯಾನಂದ ಗೌಡ ಕೋಮುವಾದಿಯೋ? ಬ್ರಷ್ಟರೋ ಸತ್ಯ ಯಾರಿಗೂ ಸ್ಫಷ್ಟವಿಲ್ಲ. ಆದರೆ ಅವರ ದಕ್ಷತೆಗೆ ಮಾತ್ರ ಆಗಾಗ ಪ್ರಶಂಸೆ ವ್ಯಕ್ತವಾಗುತ್ತಿರುವುದು ವಾಸ್ತವ. ಸಿದ್ಧಾಪುರದಲ್ಲಿ ಹೆಸರು ಮಾಡಿದ್ದ ನಿತ್ಯಾನಂದ ಗೌಡ ಮತ್ತು ಸಿ.ಪಿ.ಐ. ಜೊಯ್ ಅಂಥೋನಿ ಇಲ್ಲಿಂದ ಆಪಾದನೆ ಹೊತ್ತು ವರ್ಗಾವಣೆಯಾಗಿರುವುದು ಮಾತ್ರ ಮರೆಯದ ದುರಂತ.
ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ
ನೀರಿಂಗಿಸುವ ಸ್ಥಳೀಯ ಜ್ಞಾನಕ್ಕೆ ಆದ್ಯತೆಗೆ ಸಲಹೆ

ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ ಹೇಳಿದರು.
ಅವರು ಸೋಮವಾರ ಸಂಜೆ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ಬಳಿ ಕೆರೆಗಳ ಅಭಿವೃದ್ಧಿ ಕುರಿತಂತೆ ಪ್ರಶ್ನಿಸಿದಾಗ ಅವರ ಉತ್ತರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ರೇಲ್ವೆ, ವಿದ್ಯುತ್ ತಂತಿ ಮಾರ್ಗ, ರಸ್ತೆ ಮುಂತಾಗಿ ಹಲವು ಕಾರಣಗಳಿಂದ ಅರಣ್ಯ ಕಡಿಮೆಯಾಗುತ್ತಿದೆ. ಮರಗಿಡಗಳನ್ನು ಹೆಚ್ಚಿಸುವ ಕೆಲಸವಾಗಬೇಕು. ರೆವಿನ್ಯೂ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಪದೇ ಪದೇ ಬೋರ್‍ವೆಲ್ ತೆಗೆಸುವ ಬದಲು ಇರುವ ಬೋರ್ ಗಳಿಗೆ ನೀರಿಂಗಿಸುವಂತಾಗಬೇಕು. ಸ್ಥಳೀಯವಾಗಿ ವಯಸ್ಸಾದವರಿಂದ ಅವರ ತಿಳುವಳಿಕೆ ಬಳಸಿಕೊಂಡು ಜಲಮೂಲ ಉಳಿಸುವ ಕೆಲಸಮಾಡಿ. ಬೆಂಗಳೂರಿನಲ್ಲಿ ಕೂತವರು ಇವನ್ನ ರೂಪಿಸಬೇಕೆಂದಿಲ್ಲ. ಯಾವುದು ಇಲ್ಲಿ ಉಪಯೋಗವಾಗುತ್ತದೋ ಅದನ್ನು ಮಾಡಿ. ಸರಕಾರಿ ಕಚೇರಿಗಳ ಬಾವಿಗಳಲ್ಲೂ ನೀರಿಂಗಿಸುವ ವ್ಯವಸ್ಥೆ ಮಾಡಿ ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *