ಮತ್ತೆ ಬೆಳಕಿಗೆ ಬಂದ ನಿತ್ಯಾನಂದ ಗೌಡ

ಸಿದ್ಧಾಪುರದಲ್ಲಿ ಹೆಸರುಮಾಡಿ, ಆರೋಪ,ಆಪಾದನೆಗಳಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಪಿ.ಎಸ್.ಐ. ನಿತ್ಯಾನಂದ ಗೌಡ ಮತ್ತೆ ಸುದ್ದಿಯಾಗಿದ್ದಾರೆ.
ಕಳೆದ ವಾರ ಕೋಟ ಪೊಲೀಸ್ ಠಾಣೆಯಿಂದ ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ಭೇದಿಸಿ, ಇಲಾಖೆಯ ಅಧೀನ ಸಿಬ್ಬಂದಿಗಳ ಅಮಾನತ್ತಿಗೆ ಕಾರಣವಾದವರು ಬೇರೆ ಯಾರೂ ಅಲ್ಲ. ಅದೇ ಸಿದ್ಧಾಪುರದ ಹಳೆ ಪಿ.ಎಸ್.ಐ. ನಿತ್ಯಾನಂದ ಗೌಡ.
ನಿತ್ಯಾನಂದ ಗೌಡ ಜನರು, ಜನಪ್ರತಿನಿಧಿಗಳೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಾರೆ ಎನ್ನುವ ಗುರುತರವಾದ ಆಪಾದನೆ ಮೇಲೆ ಇಲ್ಲಿಂದ ವರ್ಗಾವಣೆಯಾದವರು.
ಮರಳಿ ದಕ್ಷಿಣ ಕನ್ನಡಕ್ಕೆ ಅಕಾಲದಲ್ಲಿ ತೆರಳಿದ್ದ ನಿತ್ಯಾನಂದ ಗೌಡ ನಿಜಕ್ಕೂ ಇಲ್ಲಿಯ ಆರೋಪಕ್ಕೆ ಗುರಿಯಾದಂತೆ ಅಪ್ರಾಮಾಣಿಕರೋ, ಗರ್ವಿಯೋ ಬೇರೆ ವಿಚಾರ. ಆದರೆ ಈಗಿನ ಜಾನುವಾರು ಸಾಗಾಟ ಪ್ರಕರಣದಲ್ಲಿ ಪೊಲೀಸರ ಶಾಮೀಲಾತಿ ಭೇದಿಸಿರುವ ಪ್ರಕರಣದಲ್ಲಿ ನಾಲ್ಕೈದು ಪೇದೆಗಳು ಅಮಾನತ್ತಾಗುವಲ್ಲಿ ಶ್ರಮಿಸಿದವರು ನಿತ್ಯಾನಂದ ಗೌಡ.
ನಿತ್ಯಾನಂದ ಗೌಡರ ತನಿಖೆಯಿಂದ ಮಲೆನಾಡು,ಕರಾವಳಿಯಲ್ಲಿ ಸಾಗಿಸಲಾಗುತಿದ್ದ ಜಾನುವಾರು ಅಕ್ರಮ ದಂಧೆಗೆ ಪೊಲೀಸರೇ ನೆರವಾಗಿರುವುದನ್ನು ಭೇದಿಸಿದ ಪಿ.ಎಸ್.ಐ. ನಿತ್ಯಾನಂದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಪ್ರಶಂಸೆ ಕೇಳಿ ಬಂದಿದೆ. ಇದೇ ವೇಳೆ ಪೊಲೀಸರು ಜಾನುವಾರು ಸಾಗಾಟ, ಕೋಮುಗಲಭೆಗಳಿಗೆ ಪರೋಕ್ಷವಾಗಿ ಬೆಂಬಲಿಸುವ ಸತ್ಯ ಹೊರಹಾಕಿರುವ ಬಗ್ಗೆ ಅವರಿಗೆ ಶ್ಲಾಘನೆ ದೊರೆತಿದೆ.
ನಿತ್ಯಾನಂದ ಗೌಡ ಕೋಮುವಾದಿಯೋ? ಬ್ರಷ್ಟರೋ ಸತ್ಯ ಯಾರಿಗೂ ಸ್ಫಷ್ಟವಿಲ್ಲ. ಆದರೆ ಅವರ ದಕ್ಷತೆಗೆ ಮಾತ್ರ ಆಗಾಗ ಪ್ರಶಂಸೆ ವ್ಯಕ್ತವಾಗುತ್ತಿರುವುದು ವಾಸ್ತವ. ಸಿದ್ಧಾಪುರದಲ್ಲಿ ಹೆಸರು ಮಾಡಿದ್ದ ನಿತ್ಯಾನಂದ ಗೌಡ ಮತ್ತು ಸಿ.ಪಿ.ಐ. ಜೊಯ್ ಅಂಥೋನಿ ಇಲ್ಲಿಂದ ಆಪಾದನೆ ಹೊತ್ತು ವರ್ಗಾವಣೆಯಾಗಿರುವುದು ಮಾತ್ರ ಮರೆಯದ ದುರಂತ.
ಜಿಲ್ಲಾಧಿಕಾರಿಗಳಿಂದ ಪ್ರಗತಿ ಪರಿಶೀಲನೆ
ನೀರಿಂಗಿಸುವ ಸ್ಥಳೀಯ ಜ್ಞಾನಕ್ಕೆ ಆದ್ಯತೆಗೆ ಸಲಹೆ

ಕೇವಲ ಕೆರೆಗಳ ಅಭಿವೃದ್ಧಿ ಮಾಡುವುದು ಮಾತ್ರವಲ್ಲ. ನೀರಿನ ಮೂಲದ ಸಂರಕ್ಷಣೆ, ಪುನರುಜ್ಜೀವನ, ಜಲ ರಕ್ಷಣೆ ಜನಜಾಗೃತಿ, ಹಸಿರೀಕರಣ ಮುಂತಾದವು ಇದರ ಹಿಂದಿನ ಉದ್ದೇಶ. ಇದರ ಜೊತೆಗೆ ನದಿಮೂಲದ ಸಂರಕ್ಷಣೆಗೂ ಗಮನ ನೀಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ|ಹರೀಶಕುಮಾರ ಹೇಳಿದರು.
ಅವರು ಸೋಮವಾರ ಸಂಜೆ ತಾಪಂ ಸಭಾಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ಬಳಿ ಕೆರೆಗಳ ಅಭಿವೃದ್ಧಿ ಕುರಿತಂತೆ ಪ್ರಶ್ನಿಸಿದಾಗ ಅವರ ಉತ್ತರಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ರೇಲ್ವೆ, ವಿದ್ಯುತ್ ತಂತಿ ಮಾರ್ಗ, ರಸ್ತೆ ಮುಂತಾಗಿ ಹಲವು ಕಾರಣಗಳಿಂದ ಅರಣ್ಯ ಕಡಿಮೆಯಾಗುತ್ತಿದೆ. ಮರಗಿಡಗಳನ್ನು ಹೆಚ್ಚಿಸುವ ಕೆಲಸವಾಗಬೇಕು. ರೆವಿನ್ಯೂ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಿದೆ. ಪದೇ ಪದೇ ಬೋರ್‍ವೆಲ್ ತೆಗೆಸುವ ಬದಲು ಇರುವ ಬೋರ್ ಗಳಿಗೆ ನೀರಿಂಗಿಸುವಂತಾಗಬೇಕು. ಸ್ಥಳೀಯವಾಗಿ ವಯಸ್ಸಾದವರಿಂದ ಅವರ ತಿಳುವಳಿಕೆ ಬಳಸಿಕೊಂಡು ಜಲಮೂಲ ಉಳಿಸುವ ಕೆಲಸಮಾಡಿ. ಬೆಂಗಳೂರಿನಲ್ಲಿ ಕೂತವರು ಇವನ್ನ ರೂಪಿಸಬೇಕೆಂದಿಲ್ಲ. ಯಾವುದು ಇಲ್ಲಿ ಉಪಯೋಗವಾಗುತ್ತದೋ ಅದನ್ನು ಮಾಡಿ. ಸರಕಾರಿ ಕಚೇರಿಗಳ ಬಾವಿಗಳಲ್ಲೂ ನೀರಿಂಗಿಸುವ ವ್ಯವಸ್ಥೆ ಮಾಡಿ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *