breaking news-ಮೃತಪಟ್ಟ 8 ಗಂಟೆಯೊಳಗೆ ಪರಿಹಾರ ನೀಡಿದ ಉ.ಕ. ಜಿಲ್ಲಾಡಳಿತ!

ಇಂದು ಮುಂಜಾನೆ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ ಸಿದ್ಧಾಪುರ ಹುಸೂರಿನ ಶಶಿಧರ ನಾಯ್ಕ ಸಾವಿನ 8 ಗಂಟೆಯೊಳಗೆ ಅವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ದೊರೆತಿದೆ.
ಇಂದಿನ ದುರ್ಘಟನೆ ನಂತರ ತಡಮಾಡದೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಮರ ಬಿದ್ದು ಮೃತರಾದ ಶಶಿಧರ ನಾಯ್ಕ ಕುಟುಂಬಕ್ಕೆ ಸಂಜೆಯೊಳಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯ ನೆರವು ದೊರಕಿಸಿದರು. ಈ ದಿಢೀರ್ ಕ್ರಮಕ್ಕೆ ಕಾರಣರಾದ ತಹಸಿಲ್ದಾರ ಮತ್ತು ಶಿರಸಿ ಸಹಾಯಕ ಆಯುಕ್ತ ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಪ್ರಶಂಸೆ ದೊರೆತಿದೆ.
ಕಂದಾಯ ಇಲಾಖೆ ಸಿಬ್ಬಂದಿಗಳು ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರಲ್ಲದೆ ಸರ್ಕಾರದ ಪರಿಹಾರ ಹಣದ ನಾಲ್ಕು ಲಕ್ಷ ಚೆಕ್ಕನ್ನು ಕುಟುಂಬಸ್ಥರಿಗೆ ಹಸ್ಥಾಂತರಿಸಿದರು.
ಕ್ರೈಂ ನ್ಯೂಸ್-
ಹೆಲ್ಮೆಟ್‍ನಿಂದ ತಪ್ಪಿದ ಅನಾಹುತ
ಸಿದ್ಧಾಪುರ,ಜು,23- ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ಶಿಕ್ಷಕರೊಬ್ಬರು ಅಪಾಯದ ಅಪಘಾತದಿಂದ ಬಚಾವಾದ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಸೋಮುವಾರ ಸಿದ್ದಾಪುರ ಕಾನಗೋಡಿನ ಬಳಿ ನಡೆದ ಖಾಸಗಿ ಬಸ್ ಮತ್ತು ದ್ವಿಚಕ್ರವಾಹನ ಅಪಘಾತದಲ್ಲಿ ಅದೃಷ್ಟವಶಾತ್ ಬಚಾವಾದವರು ಕಾನಗೋಡಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಜಕುಮಾರ ನಾಯ್ಕ.
ಈ ಆರ್.ಆರ್.ನಾಯ್ಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಈಗ ಚೇತರಿಸಿಕೊಂಡಿದ್ದಾರೆ. ಹೆಲ್ಮೆಟ್ ಧರಿಸಿರದಿದ್ದರೆ ತಲೆಗೆ ಬಿದ್ದ ಏಟು ಪ್ರಾಣಾಂತಿಕವಾಗುವ ಅಪಾಯದ ಸಾಧ್ಯತೆಗಳಿದ್ದವು. ಸಮಯಪ್ರಜ್ಞೆ ಮತ್ತು ಹೆಲ್ಮೆಟ್ ನಿಂದಾಗಿ ಅಪಾಯದಿಂದ ಪಾರಾದ ರಾಜಕುಮಾರ ನಾಯ್ಕ ಆರೋಗ್ಯವಾಗಿದ್ದಾರೆ.
ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು
ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮರದ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 10 ರ ಸುಮಾರಿಗೆ ಸಿದ್ದಾಪುರದ ಮಾವಿನಗುಂಡಿ ಬಳಿ ನಡೆದಿದೆ.
ಮೃತ ನೌಕರರನ್ನು ಸಿದ್ದಾಪುರ ಹುಸೂರಿನ ಶಶಿಧರ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.
ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮರ ಮುರಿದು ಬಿದ್ದ ವಿಷಯ ತಿಳಿಯುತ್ತಲೇ ಅರಣ್ಯ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಧಾವಿಸಿದರಾದರೂ ಶಶಿಧರ ಸ್ಥಳದಲ್ಲೇ ಅಸುನೀಗಿದ್ದರು.
ಅರಣ್ಯ ಇಲಾಖೆಯ ಸಿಬ್ಬಂದಿಗಳು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತರ ಸಂಬಂಧಿಗಳೆಲ್ಲಾ ತಾಲೂಕಾ ಆಸ್ಫತ್ರೆ ಬಳಿ ಜಮಾಯಿಸಿದ್ದರು.
ಶಶಿಧರ ಇಲಾಖೆಯ ಕ್ಷೇಮಾಭಿವೃದ್ಧಿ ನೌಕರ ಎಂದು ಕೆಲಸಮಾಡುತಿದ್ದರು.ಇಂದು ಬೆಳಿಗ್ಗೆ ಎಂದಿನಂತೆ ಇಲಾಖೆಯ ಮಾವಿನಗುಂಡಿ ತಪಾಸಣಾ ನಾಕಾದಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ಈ ದುರ್ಘಟನೆ ನಡೆದಿದೆ ಎಂದು ಸ್ಥಳಿಯರು ತಿಳಿಸಿದ್ದಾರೆ.
ಶಶಿಧರ ಮರಣದ ವಾರ್ತೆ ತಿಳಿಯುತ್ತಲೇ ಧಾವಿಸಿ ಬಂದ ಅರಣ್ಯ ಇಲಾಖೆ ಸಿಬ್ಬಂದಿಗಳು, ಮೃತರ ಸಂಬಂಧಿಗಳಿಂದ ಸಿದ್ಧಾಪುರದ ಆಸ್ಫತ್ರೆ ಆವರಣ ತುಂಬಿ ಹೋಗಿತ್ತು. ವೈಧ್ಯಕೀಯ ವಿಧಿ-ವಿಧಾನಗಳ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಶಶಿಧರರನ್ನು ಅವರ ಹುಟ್ಟೂರಲ್ಲಿ ಅಗ್ನಿಗೆ ಆಹುತಿ ಮಾಡಲಾಯಿತು. ಮೃತ ಶಶಿಧರರಿಗೆ ಪತ್ನಿ ಮತ್ತು ಪುತ್ರ ಹಾಗೂ ಅಪಾರ ಬಂಧು-ಬಳಗವಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *