ಕಲ್ಫವೃಕ್ಷಕ್ಕೂ ಬಂದ ಕೊಳೆರೋಗ


ಸುಳಿಕೊಳೆ ರೋಗಕ್ಕೆ ತೆಂಗುನಾಶ,
ಮರಕಡಿಯುವುದೆ ಪರಿಹಾರ
ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಈಗ ಅಡಿಕೆಗೆ ಕೊಳೆರೋಗ ಬರುವ ಸಮಯ, ಆದರೆ ಇದೇ ಸಮಯದಲ್ಲಿ ತೆಂಗಿನ ಕೊಳೆರೋಗ ತೆಂಗುಬೆಳೆಯನ್ನು ನಾಶ ಮಾಡಿರುವ ವಿದ್ಯಮಾನ ಬೆಳಕಿಗೆ ಬಂದಿದೆ.
ಸುಳಿಕೊಳೆರೋಗ ಎನ್ನಲಾಗುವ ತೆಂಗಿನ ಕೊಳೆರೋಗ ತೆಂಗಿಗೆ ಮಾರಕವಾಗಿ ಪರಿಣಮಿಸಿದೆ.
ತೆಂಗಿನ ಮರಕ್ಕೆ ದುಂಬಿಯ ಕಾಟ ಸಾಮಾನ್ಯ, ದುಂಬಿ ತೆಂಗಿನ ಸುಳಿಯೊಳಗೆ ಸೇರಿ ಮರಿಮಾಡಲು ಸುಳಿಯೊಳಗೆ ಹೊಂಡ ಮಾಡುತ್ತದೆ. ಹೀಗೆ ದುಂಬಿ ತನ್ನ ಪರಿವಾರಕ್ಕಾಗಿ ತಯಾರಾದ ರಂಧ್ರದಂಥ ಹೊಂಡದಲ್ಲಿ ನೀರು ಸೇರಿ ಮೊದಲು ತೆಂಗಿನ ಮರ,ಗಿಡದ ಸುಳಿ ಕಳಚಿ ಬೀಳುತ್ತದೆ.
ನಂತರ ಗಿಡ ಅಥವಾ ಮರ ನಿಧಾನವಾಗಿ ಸಾಯತೊಡಗುತ್ತದೆ.
ಹೀಗೆ ಸತ್ತ ತೆಂಗಿನ ಗಿಡ ಅಥವಾ ಮರವನ್ನು ಕಡಿದು ತೆಗೆಯದಿದ್ದರೆ ಅದು ಮುಂದೆ ಬೇರೆ ಮರಕ್ಕೆ ರೋಗವಾಹಕವಾಗಿ ಕೆಲಸಮಾಡುತ್ತದೆ.
ತೆಂಗಿಗೆ ಬರುವ ಈ ಕೊಳೆರೋಗ ಪಂಗಸ್ ರೋಗವಾಗಿದ್ದು ಅದರ ನಿಯಂತ್ರಣಕ್ಕೆ ಉಪ್ಪಿನ ಚಿಕಿತ್ಸೆ ಅಥವಾ ಬೋಡೋದ್ರಾವಣ ಅಥವಾ ಪೇಸ್ಟ್ ಸಿಂಪಡಣೆ ಪರಿಹಾರ ಎನ್ನಲಾಗುತ್ತಿದೆ. ಸಾಂಪ್ರದಾಯಿಕ ಪದ್ಧತಿಯಲ್ಲಿ ತೆಂಗಿನ ಮರ ಸೋಸುವ ವಿಧಾನದಲ್ಲಿ ತೆಂಗಿನ ಮರದ ತ್ಯಾಜ್ಯವನ್ನು ತೆಗೆದು, ದುಂಬಿ ಗೂಡಿದ್ದರೆ ಅದನ್ನು ತೆಗೆದು ಮರಕ್ಕೆ ಉಪ್ಪು ಕಟ್ಟುವ ಸಾಂಪ್ರದಾಯಿಕ ವಿಧಾನ ಒಂದಿದೆ. ಈಗ ಈ ಪದ್ಧತಿ ನಶಿಸುತ್ತಿರುವುದರಿಂದ ತೆಂಗಿನ ಸುಳಿಗೆ ಬೋಡೋ (ತುತ್ತ-ಸುಣ್ಣ)ಪೇಸ್ಟ್ ಅಥವಾ ದ್ರಾವಣ ಸಿಂಪಡಿಸುವ ನೂತನ ವಿಧಾನ ಅನುಸರಿಸಲಾಗುತ್ತಿದೆ.
ಸಿದ್ಧಾಪುರದಲ್ಲಿ 254 ಹೆಕ್ಟೇರ್ ಅಂದರೆ 635 ಎಕರೆ ತೆಂಗು ಬೆಳೆಯುವ ಪ್ರದೇಶವಿದ್ದು, ಕೆಲವೆಡೆ ನುಶಿರೋಗ,ಸುಳಿಕೊಳೆರೋಗಗಳಿಂದ ತೆಂಗು ನಾಶವಾಗಿದೆ. ನುಶಿರೋಗಬಾಧಿತ ಮರದ ಇಳುವರಿ ಕಡಿಮೆಯಾದರೆ, ಸುಳಿಕೊಳೆರೋಗ ಮರವನ್ನೇ ಸಾಯಿಸುತ್ತದೆ.ಸುಳಿಕೊಳೆಯುವ ಪಂಗಸ್ ರೋಗಪೀಡಿತ ಮರವನ್ನು ಕಡಿಯದಿದ್ದರೆ ಅದು ಬೇರೆ ಮರಗಳಿಗೂ ವ್ಯಾಪಿಸುತ್ತದೆ. ಹಾಗಾಗಿ ಸುಳಿಕೊಳೆರೋಗ ಪೀಡಿತ ಮರಗಳಿಗೆ ಬೋಡೊ ಮಿಶ್ರಣದ ಚಿಕಿತ್ಸೆ ಮಾಡಬೇಕು. ಸುಳಿಕೊಳೆರೋಗದಿಂದ ಸತ್ತ ಮರಗಳನ್ನು ಕಡಿಯಬೇಕು ಎನ್ನುತ್ತಾರೆ ತೋಟಗಾರಿಕಾ ಉಪನಿರ್ಧೇಶಕ ಮಹಾಬಲೆಶ್ವರ ಹೆಗಡೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *