ಬೀಳುವ ಮರಗಳಿವೆ ಎಚ್ಚರಿಕೆ!

ಸಿದ್ಧಾಪುರದಲ್ಲಿ
ಭಯಹುಟ್ಟಿಸುತ್ತಿರುವ ಮರಗಳು
ಸಿದ್ದಾಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೇ ಹಳೆ ಮರ ಬಿದ್ದು ಮೃತರಾದ ನಂತರ ತಾಲೂಕಿನೆಲ್ಲೆಡೆ ಅಪಾಯದ ಮರಗಳ ಬಗ್ಗೆ ಮಾತು, ಚರ್ಚೆ ಪ್ರಾರಂಭವಾಗಿದೆ. ಕಾಡು,ಜಮೀನು, ಮನೆಗಳ ಸಮೀಪದ ಮರಗಳ ಅಪಾಯಕ್ಕೆ ಆಯಾ ಪ್ರದೇಶ, ಜವಾಬ್ದಾರಿಯ ಜನರೇ ಕಾರಣ. ಆದರೆ, ರಸ್ತೆ ಅಕ್ಕಪಕ್ಕದ ಮರಗಳು, ಶಾಲಾ-ಕಾಲೇಜುಗಳು, ಸಾರ್ವಜನಿಕ ಪ್ರದೇಶ,ಸರ್ಕಾರಿ ಕಛೇರಿಗಳ ವ್ಯಾಪ್ತಿಯ ಮರಗಳ ಬಗ್ಗೆ ಸಂಬಂಧಿಸಿದವರೇ ಜವಾಬ್ಧಾರರಾಗಬೇಕಾಗುತ್ತದೆ.
ನಗರದ ನಿರ್ಮಾಣ ಹಂತದ ಮಿನಿವಿಧಾನ ಸೌಧದ ಆವರಣದ ಒಂದು ಮರ, ಹಾಳದಕಟ್ಟಾದ ಅಂಧರಶಾಲೆ ಬಳಿಯ ಹೆಸ್ಕಾಂ ಟಿ.ಸಿ. ಮೇಲೇ ಚಾಚಿರುವ ಮರ. ಹೀಗೆ ನಗರದಲ್ಲಿ ಅನೇಕ ಕಡೆ ಅಪಾಯದ ಮರಗಳಿವೆ ಎಂದು ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಆದರೆ ಅವುಗಳನ್ನು ತೆಗೆಯುವವರ್ಯಾರು? ಈ ಮಳೆಗಾಲದ ಮೊದಲು ಕಂದಾಯ ಇಲಾಖೆ ನೀಡಿದ ಪಟ್ಟಿಯಂತೆ ನಗರದ ಅಪಾಯದ ಮರಗಳನ್ನು ಅರಣ್ಯ ಇಲಾಖೆ ಕಡಿದು ತೆಗೆದಿದೆ. ಆದರೆ ಸರ್ಕಾರಿ ಇಲಾಖೆಗಳ ಆವರಣ, ಪ.ಪಂ. ವ್ಯಾಪ್ತಿಯ ಒಳಗಿರುವ ಅಪಾಯದ ಮರಗಳನ್ನು ತೆಗೆಯಲು ಅರಣ್ಯ ಇಲಾಖೆಗೆ ಅನುಮತಿ ಕೇಳಿದರೆ ಕೊಡಬಹುದು ಆದರೆ ಅರಣ್ಯ ಇಲಾಖೆಯೇ ಅವುಗಳನ್ನು ತೆಗೆಯುವುದು ಕಷ್ಟ ಎನ್ನುವುದು ಇಲಾಖೆಯ ಅಭಿಪ್ರಾಯ.
ಸೊರಬ ರಸ್ತೆಯಲ್ಲಿ ಟಿ.ಸಿ. ಮೇಲೆರಗಬಹುದಾದ ಅಂಧರ ಶಾಲೆಯ ಆವರಣದ ಮರ, ಅದಕ್ಕೆ ತಾಕಿಕೊಂಡಿರುವ ವಿದ್ಯುತ್ ಮಾರ್ಗ ಅಲ್ಲಿಯ ವಿದ್ಯಾರ್ಥಿಗಳು, ನೆರೆಹೊರೆಯವರಿಗೆ ಅಪಾಯ ತರುವ ಸಾಧ್ಯತೆ ಹೆಚು.್ಚ ಅದೇ ರಸ್ತೆಯಲ್ಲಿ ಕೆಲವು ಮರಗಳು ರಸ್ತೆಗೆ ವಾಲಿಕೊಂಡಿರುವುದರಿಂದ ಸಾಯಂಕಾಲ ಬೀದಿ ದೀಪ ಕಾಣದ ಸಮಸ್ಯೆ ಇದೆ ಎನ್ನುವುದು ಈ ಭಾಗದ ಸಾಮಾಜಿಕ ಕಾರ್ಯಕರ್ತ ಇಲಿಯಾಸ್ ಶೇಖ್ ಅಭಿಪ್ರಾಯ.
ಹೀಗೆ ನಗರದಲ್ಲಿ ಮತ್ತು ತಾಲೂಕಿನಾದ್ಯಂತ ಅರಣ್ಯ ಇಲಾಖೆ ಮತ್ತು ಹೆಸ್ಕಾಂ ನ ವ್ಯಾಪ್ತಿಯಲ್ಲಿ ಅನೇಕ ಮರಗಳು ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತರುವಂತಿವೆ ಎನ್ನುವ ಸಾರ್ವಜನಿಕರು ಅವುಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಹೇಳದೆ ಸಂಬಂಧಿಸಿದವರು ಪರವಾನಗಿ ಪಡೆದು ಮರಗಳನ್ನು ತೆರವು ಮಾಡುವ ಅಗತ್ಯವಂತೂ ಈಗ ಅನಿವಾರ್ಯತೆಯಾಗಿದೆ.
ಮಳೆಗಾಲಪೂರ್ವ ಕಂದಾಯ ಇಲಾಖೆಯ ಮನವಿಯಂತೆ ಅಪಾಯದ ಮರಗಳನ್ನು ಕತ್ತರಿಸಿ ತೆಗೆದಿದ್ದೇವೆ. ಈಗಲೂ ಇಲಾಖೆಯ ಹಿರಿಯ ಅಧಿಕಾರಿಗಳು ತಾಲೂಕಿನಲ್ಲಿರುವ ಅಪಾಯದ ಮರಗಳ ಬಗ್ಗೆ ವರದಿ ಕೇಳಿದ್ದಾರೆ. ನಾನಾ ಇಲಾಖೆಗಳು ತಮ್ಮ ವ್ಯಾಪ್ತಿಯ ಅಪಾಯದ ಮರಗಳ ತೆರವಿಗೆ ಅನುಮತಿ ಪಡೆದು ಅಪಾಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ಅಜೀಜ್ ಅಹಮದ್
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ಧಾಪುರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *