ಬೀಳುವ ಮರಗಳಿವೆ ಎಚ್ಚರಿಕೆ!

ಸಿದ್ಧಾಪುರದಲ್ಲಿ
ಭಯಹುಟ್ಟಿಸುತ್ತಿರುವ ಮರಗಳು
ಸಿದ್ದಾಪುರ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೇ ಹಳೆ ಮರ ಬಿದ್ದು ಮೃತರಾದ ನಂತರ ತಾಲೂಕಿನೆಲ್ಲೆಡೆ ಅಪಾಯದ ಮರಗಳ ಬಗ್ಗೆ ಮಾತು, ಚರ್ಚೆ ಪ್ರಾರಂಭವಾಗಿದೆ. ಕಾಡು,ಜಮೀನು, ಮನೆಗಳ ಸಮೀಪದ ಮರಗಳ ಅಪಾಯಕ್ಕೆ ಆಯಾ ಪ್ರದೇಶ, ಜವಾಬ್ದಾರಿಯ ಜನರೇ ಕಾರಣ. ಆದರೆ, ರಸ್ತೆ ಅಕ್ಕಪಕ್ಕದ ಮರಗಳು, ಶಾಲಾ-ಕಾಲೇಜುಗಳು, ಸಾರ್ವಜನಿಕ ಪ್ರದೇಶ,ಸರ್ಕಾರಿ ಕಛೇರಿಗಳ ವ್ಯಾಪ್ತಿಯ ಮರಗಳ ಬಗ್ಗೆ ಸಂಬಂಧಿಸಿದವರೇ ಜವಾಬ್ಧಾರರಾಗಬೇಕಾಗುತ್ತದೆ.
ನಗರದ ನಿರ್ಮಾಣ ಹಂತದ ಮಿನಿವಿಧಾನ ಸೌಧದ ಆವರಣದ ಒಂದು ಮರ, ಹಾಳದಕಟ್ಟಾದ ಅಂಧರಶಾಲೆ ಬಳಿಯ ಹೆಸ್ಕಾಂ ಟಿ.ಸಿ. ಮೇಲೇ ಚಾಚಿರುವ ಮರ. ಹೀಗೆ ನಗರದಲ್ಲಿ ಅನೇಕ ಕಡೆ ಅಪಾಯದ ಮರಗಳಿವೆ ಎಂದು ಸಾರ್ವಜನಿಕ ಚರ್ಚೆ ನಡೆಯುತ್ತಿದೆ. ಆದರೆ ಅವುಗಳನ್ನು ತೆಗೆಯುವವರ್ಯಾರು? ಈ ಮಳೆಗಾಲದ ಮೊದಲು ಕಂದಾಯ ಇಲಾಖೆ ನೀಡಿದ ಪಟ್ಟಿಯಂತೆ ನಗರದ ಅಪಾಯದ ಮರಗಳನ್ನು ಅರಣ್ಯ ಇಲಾಖೆ ಕಡಿದು ತೆಗೆದಿದೆ. ಆದರೆ ಸರ್ಕಾರಿ ಇಲಾಖೆಗಳ ಆವರಣ, ಪ.ಪಂ. ವ್ಯಾಪ್ತಿಯ ಒಳಗಿರುವ ಅಪಾಯದ ಮರಗಳನ್ನು ತೆಗೆಯಲು ಅರಣ್ಯ ಇಲಾಖೆಗೆ ಅನುಮತಿ ಕೇಳಿದರೆ ಕೊಡಬಹುದು ಆದರೆ ಅರಣ್ಯ ಇಲಾಖೆಯೇ ಅವುಗಳನ್ನು ತೆಗೆಯುವುದು ಕಷ್ಟ ಎನ್ನುವುದು ಇಲಾಖೆಯ ಅಭಿಪ್ರಾಯ.
ಸೊರಬ ರಸ್ತೆಯಲ್ಲಿ ಟಿ.ಸಿ. ಮೇಲೆರಗಬಹುದಾದ ಅಂಧರ ಶಾಲೆಯ ಆವರಣದ ಮರ, ಅದಕ್ಕೆ ತಾಕಿಕೊಂಡಿರುವ ವಿದ್ಯುತ್ ಮಾರ್ಗ ಅಲ್ಲಿಯ ವಿದ್ಯಾರ್ಥಿಗಳು, ನೆರೆಹೊರೆಯವರಿಗೆ ಅಪಾಯ ತರುವ ಸಾಧ್ಯತೆ ಹೆಚು.್ಚ ಅದೇ ರಸ್ತೆಯಲ್ಲಿ ಕೆಲವು ಮರಗಳು ರಸ್ತೆಗೆ ವಾಲಿಕೊಂಡಿರುವುದರಿಂದ ಸಾಯಂಕಾಲ ಬೀದಿ ದೀಪ ಕಾಣದ ಸಮಸ್ಯೆ ಇದೆ ಎನ್ನುವುದು ಈ ಭಾಗದ ಸಾಮಾಜಿಕ ಕಾರ್ಯಕರ್ತ ಇಲಿಯಾಸ್ ಶೇಖ್ ಅಭಿಪ್ರಾಯ.
ಹೀಗೆ ನಗರದಲ್ಲಿ ಮತ್ತು ತಾಲೂಕಿನಾದ್ಯಂತ ಅರಣ್ಯ ಇಲಾಖೆ ಮತ್ತು ಹೆಸ್ಕಾಂ ನ ವ್ಯಾಪ್ತಿಯಲ್ಲಿ ಅನೇಕ ಮರಗಳು ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತರುವಂತಿವೆ ಎನ್ನುವ ಸಾರ್ವಜನಿಕರು ಅವುಗಳನ್ನು ಕಡಿಯಲು ಅರಣ್ಯ ಇಲಾಖೆಗೆ ಹೇಳದೆ ಸಂಬಂಧಿಸಿದವರು ಪರವಾನಗಿ ಪಡೆದು ಮರಗಳನ್ನು ತೆರವು ಮಾಡುವ ಅಗತ್ಯವಂತೂ ಈಗ ಅನಿವಾರ್ಯತೆಯಾಗಿದೆ.
ಮಳೆಗಾಲಪೂರ್ವ ಕಂದಾಯ ಇಲಾಖೆಯ ಮನವಿಯಂತೆ ಅಪಾಯದ ಮರಗಳನ್ನು ಕತ್ತರಿಸಿ ತೆಗೆದಿದ್ದೇವೆ. ಈಗಲೂ ಇಲಾಖೆಯ ಹಿರಿಯ ಅಧಿಕಾರಿಗಳು ತಾಲೂಕಿನಲ್ಲಿರುವ ಅಪಾಯದ ಮರಗಳ ಬಗ್ಗೆ ವರದಿ ಕೇಳಿದ್ದಾರೆ. ನಾನಾ ಇಲಾಖೆಗಳು ತಮ್ಮ ವ್ಯಾಪ್ತಿಯ ಅಪಾಯದ ಮರಗಳ ತೆರವಿಗೆ ಅನುಮತಿ ಪಡೆದು ಅಪಾಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು.
– ಅಜೀಜ್ ಅಹಮದ್
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ಧಾಪುರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *