ಕಾಡು ಹಂದಿ ಊರಿಗೆ ಬಂದಿತ್ತ….

.ಮಲೆನಾಡಿನಲ್ಲಿ ಹೆಚ್ಚಿದ ಹಂದಿ ಕಾಟ
ಮಲೆನಾಡಿಗೂ ಕಾಡು ಹಂದಿಗೂ ನಂಟು.
ಮಲೆನಾಡಿನ ಪರಿಸರದಲ್ಲಿ ಕಾಡು ಹಂದಿ ವಾಸ್ತವ ಆಗಿರುವುದರಿಂದ ಮಲೆನಾಡಿನ ಸಾಹಿತ್ಯ ಸಂಗೀತ, ಸಿನೆಮಾಗಳಲ್ಲೂ ಕಾಡು ಹಂದಿ ಒಂದು ಪಾತ್ರ. ಯೋಗರಾಜ್ ಭಟ್ ರ ಗಾಳಿಪಟದಲ್ಲಿ ಕಾಡು ಹಂದಿ ಒಂದು ಪಾತ್ರವಾಗಿರುವುದನ್ನು ಮರೆಯುವಂತಿಲ್ಲ.
ತೇಜಸ್ವಿಯವರ ಸಾಹಿತ್ಯದಲ್ಲಂತೂ ಕಾಡು ಹಂದಿ ಪಾತ್ರ, ಮಾಂಸ, ರುಚಿ, ವಾಸನೆಯಾಗಿ ಅಲ್ಲಲ್ಲಿ ಕಂಡು ಬರುತ್ತದೆ. ಮಲೆನಾಡಿನ ಹಂದಿಗಳು ನಿರುಪದ್ರವಿಗಳು ಎನ್ನುತ್ತಾರೆ ಆದರೆ, ಹಂದಿಯ ಗಟ್ಟಿತನ, ಸಿಟ್ಟು, ಹುಂಬತನ ಅದನ್ನು ನೋಡಿದವರಿಗೇ ಗೊತ್ತು. ಮಲೆನಾಡಿನ ಹಂದಿ ಸೋಯಿಬೇಟೆ, ಬಲೆಬೇಟೆ ಹಿಂದೆ ಮರೆಯದ ಮನರಂಜನೆ ಈಗ ಇತಿಹಾಸ.
ಈಗ ಕಾಡು ಹಂದಿ ಸೇರಿದಂತೆ ವನ್ಯ ಮೃಗಗಳ ಬೇಟೆ ನಿಷಿದ್ಧ ಹಾಗಾಗಿ ಕಾಡು ಹಂದಿ ಈಗ ಉಪದ್ರವಿಯಾಗಿ ಬದಲಾಗಿದೆ.
ಚಿತ್ರನಟ ನೀರ್ನಳ್ಳಿ ಗಣಪತಿಯವರ ತೋಟದಲ್ಲಿ ತೆಂಗು-ಬಾಳೆ ಅಡಿಕೆ ನಾಶ ಮಾಡಿದ ಹಂದಿಯ ಉಪಟಳದ ಬಗ್ಗೆ ರಾಘವೇಂದ್ರ ಬೆಟ್ಟಕೊಪ್ಪ ತಮ್ಮ ಬರಹದಲ್ಲಿ ಪ್ರಸ್ಥಾಪಿಸಿದ್ದಾರೆ.
ಇಲ್ಲಿ ಸಿದ್ದಾಪುರದಲ್ಲಿ ರೈತರಿಗೆ ಹಂದಿಗಳು ನೀಡುತ್ತಿರುವ ಉಪಟಳದ ವರದಿಯಿದೆ. ಕಾಡುಹಂದಿ ವರ್ಷಪೂರ್ತಿ ರೈತರಿಗೆ ಕೊಡುವ ಉಪಟಳಕ್ಕೆ ರೈತರು ಕಂಗಾಲಾಗಿದ್ದಾರೆ. ಕಾಡುಹಂದಿ ಮತ್ತು ಕಾಡುಕೋಣಗಳು, ಕೋಡಗಗಳ ಉಪಟಳದಿಂದ ಬೇಸತ್ತು ಕೃಷಿ ಮಾಡುವುದೇ ಬೇಡ ಎನ್ನುವ ತೀರ್ಮಾನಕ್ಕೆ ಬಂದ ರೈತರೂ ಇದ್ದಾರೆ.
ಮಲೆನಾಡಿನ ಕೋತಿ, ಕಾಡುಹಂದಿ, ಕಾಡುಕೋಣಗಳಿಂದ ಮಲೆನಾಡು, ಕರಾವಳಿ ತಾಲೂಕುಗಳಲ್ಲಿ ಕೊಟ್ಯಂತರ ಹಾನಿ ಸಂಭವಿಸುತ್ತಿದ್ದರೂ ಅರಣ್ಯ ಇಲಾಖೆ ನೂರು, ಸಾವಿರ ಲೆಕ್ಕದಲ್ಲಿ ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದೆ.
ನಾವೇ ಉತ್ತಮರು ಎಂದು ಒಂದು ಅವಧಿಗೆ ಎರಡ್ಮೂರು ಮುಖ್ಯಮಂತ್ರಿಗಳಾಗುವವರು, ಹೊಸ ಸಂಪುಟ, ಸಚಿವಾಲಯದ ಸದಸ್ಯರಾಗುವವರು ಮಲೆನಾಡಿನ ಈ ಸಮಸ್ಯೆ ಕೇಳಲೇಬೇಕಾದ ಅನಿವಾರ್ಯತೆ ಈಗ ಸೃಷ್ಟಿಯಾಗಿದೆ.
ಸಿದ್ದಾಪುರ
ತಾಲೂಕಿನ ಇಟಗಿ ಗ್ರಾಪಂ ವ್ಯಾಪ್ತಿಯ ತಾರಗೋಡ ಆಲಳ್ಳಿಯ ಸುಬ್ರಾಯ ಹೆಗಡೆ ಯವರ ಅಡಕೆ ತೋಟಕ್ಕೆ ಕಾಡು ಹಂದಿಗಳ ಹಿಂಡು ದಾಳಿ ನಡೆಸಿ 40ಕ್ಕೂ ಹೆಚ್ಚು ಅಡಕೆ ಹಾಗೂ ಬಾಳೆಸಸಿಗಳನ್ನು ನಾಶಪಡಿಸಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಅಡಕೆ ತೋಟಕ್ಕೆ ದಾಳಿ ನಡೆಸುತ್ತಿರುವ ಕಾಡು ಹಂದಿಗಳು ಅಡಕೆ ಹಾಗೂ ಬಾಳೆ ಸಸಿಗಳನ್ನು ನಾಶಪಡಿಸಿವೆ. ಇನ್ನೊಂದೆಡೆ ಮಂಗಗಳು ಅಡಕೆ ಮಿಳ್ಳೆಗಳನ್ನು ನಾಶಪಡಿಸುತ್ತಿವೆ. ದಿನದಿಂದ ದಿನಕ್ಕೆ ರೈತರು ಬೆಳೆದ ಬೆಳೆಗಳೆಲ್ಲ ಕಾಡುಪ್ರಾಣಿಗಳ ಪಾಲಾಗುತ್ತಿರುವುದರಿಂದ ರೈತರ ಸಂಕಷ್ಟ ಹೆಚ್ಚಾಗುತ್ತಿದೆ. ಈ ಕುರಿತು ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಬೆಳೆ ಹಾನಿಯ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಹಾಗೂ ಕಾಡುಪ್ರಾಣಿಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸುಬ್ರಾಯ ಹೆಗಡೆ ಆಲಳ್ಳಿ ಆಗ್ರಹಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *