ಬಿಸಿಯೂಟದ ಕೋಣೆ ಮೇಲೆ ಬಿದ್ದ ಮರ,ಗಾಯ

ಸಿದ್ಧಾಪುರ ತಾಲೂಕಿನ ಕಾನಗೋಡು
ಹಿ.ಪ್ರಾ.ಶಾಲೆಯ ಬಿಸಿಯೂಟದ ಅಡುಗೆಮನೆ ಮೇಲೆ ಫಲಭರಿತ ಪಪ್ಪಾಯಿ ಮರ ಬಿದ್ದು ಭಾವಣಿಯ ಹೆಂಚು ಮುರಿದು ಹೋಗಿದೆ. ಅಡುಗೆತಯಾರಿಸುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿರುವುದರಿಂದ ಬಿಸಿಯೂಟ ತಯಾರಕರಿಗೆ ಸಣ್ಣ ಗಾಯಗಳಾಗಿದ್ದು ಅವರು ಸಿದ್ದಾಪುರ ತಾಲೂಕಾ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಆಯ್.ಆರ್.ಬಿ. ಕಂಪನಿ ವಿರುದ್ಧ ಕ.ರಾ.ವೇ.ಪ್ರತಿಭಟನೆ
ಗೋವಾ ಮಂಗಳೂರು ಚತುಶ್ಪಥ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಆಯ್.ಆರ್.ಬಿ. ಕಂಪನಿಯಿಂದ ಸ್ಥಳಿಯರಿಗಾಗುತ್ತಿರುವ ತೊಂದರೆ ತಪ್ಪಿಸುವಂತೆ ಒತ್ತಾಯಿಸಲು ಇಂದು ಕುಮಟಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಯಿತು.
ಕ.ರಾ.ವೇ. ಜಿಲ್ಲಾಧ್ಯಕ್ಷ ಭಾಸ್ಕರ್ ಪಟಗಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸ್ಥಳಿಯರು ಆಯ್.ಆರ್.ಬಿ. ಕಂಪನಿಯಿಂದ ಆಗುತ್ತಿರುವ ತೊಂದರೆ ತಪ್ಪಬೇಕು, ಸಂತೃಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಅನರ್ಹತೆ ರದ್ದು ಅಸಂಭವ
ಹಿಂದಿನ ಸ್ಫೀಕರ್ ರಮೇಶ್ ಕುಮಾರ್ ಮಾಡಿರುವ 17 ಜನ ಶಾಸಕರ ಅಮಾನತ್ ಸುಪ್ರೀಂ ಕೋರ್ಟ್‍ನಲ್ಲಿ ರದ್ಧಾಗುವ ಸಾಧ್ಯತೆ ಕಡಿಮೆ ಎಂದು ಮಾಜಿ ಸಚಿವ ಆನಂದ ಅಸ್ನೋಟಿಕರ್ ತಿಳಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದೆ ಅಮಾನತ್ ಬಗ್ಗೆ ಮೊದಲೇ ವಿಧಾನಸಭೆಯಿಂದ ನೋಟೀಸ್ ನೀಡಿರಲಿಲ್ಲ ಎನ್ನುವ ಕಾರಣದಿಂದ ನಮ್ಮ ಅನರ್ಹತೆ ರದ್ಧಾಗಿತ್ತು. ಈಗ ಪರಿಸ್ಥಿತಿ ಬೇರೆ ಇದೆ. ಅತೃಪ್ತಶಾಸಕರು ಅಧಿವೇಶನಕ್ಕೆ ಬರಬೇಕಿತ್ತು, ಅಧಿವೇಶನಕ್ಕೆ ಹಾಜರಾಗಿ ವಿಶ್ವಾಸಮತದ ವಿರುದ್ಧ ಮತ ಚಲಾಯಿಸುವ ಅವಕಾಶವಿತ್ತು. ಆದರೆ ಮುಂಬೈ ನಲ್ಲಿ ಅಡಗಿಕುಳಿತು ಜನಾದೇಶ, ಸಂವಿಧಾನದ ಆಶಯ ಧಿಕ್ಕರಿಸಿದ್ದು ಸರಿ ಇಲ್ಲ. ಅವರ ಅನರ್ಹತೆ ರದ್ಧಾಗಬಾರದು ಎಂದು ಅವರು ಹೇಳಿದರು.

ಕಾಗೇರಿ ಸ್ಫೀಕರ್
ರಾಜ್ಯ ವಿಧಾನಸಭೆಯ ಸ್ಫೀಕರ್ ಹುದ್ದೆಗೆ ನಾಳೆ (ಜು.31,ಬುಧವಾರ) ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿ.ಜೆ.ಪಿ.ಯ ಅಭ್ಯರ್ಥಿಯಾಗಿ ಶಿರಸಿ-ಸಿದ್ಧಾಪುರ ಕ್ಷೇತ್ರದ ಶಾಸಕ, ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಸುರೇಶ್ ಕುಮಾರ್, ಜಗಧೀಶ್ ಶೆಟ್ಟರ್ ಸೇರಿದಂತೆ ಕೆಲವು ಹಿರಿಯ ಶಾಸಕರಲ್ಲಿ ವಿಶ್ವೇಶ್ವರ ಹೆಗಡೆ ಸಭಾಪತಿಯಾಗುವ ಬಗ್ಗೆ ನಿರೀಕ್ಷೆಗಳಿದ್ದವು.
ಹೆಗಡೆ ಸತತ 6 ಬಾರಿ ಗೆದ್ದು ಹಿರಿಯ ಶಾಸಕರಾದವರು.ಮೂರು ಬಾರಿ ಉತ್ತರ ಕನ್ನಡದ ಹಿಂದಿನ ಅಂಕೋಲಾ ವಿಧಾನಸಭಾ ಕ್ಷೇತ್ರ ಮತ್ತು ಈಗ ಸತತ ಮೂರು ಬಾರಿ ಶಿರಸಿ ಕ್ಷೇತ್ರ ಪ್ರತಿನಿಧಿಸುತಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *