

ಮಲೆನಾಡು, ಕರಾವಳಿ ಭಾಗದ ಜನರ ವಿಪರೀತ ಕಟ್ಟಿಗೆ ಅವಲಂಬನೆಯಿಂದ ಇಲ್ಲಿಯ ಕಾಡು ನಾಶವಾಗಿದ್ದು, ನಶಿಸಿದ ಮೇಲೆ ಬುದ್ಧಿ-ವಿವೇಕ ಬರುವಂತೆ ಈಗಲಾದರೂ ಅರಣ್ಯ ಪರಿಸರ ಉಳಿಸುವ ಮನೋಭಾವ ವೃದ್ಧಿಯಾಗುತ್ತಿರುವುದು ಉತ್ತಮ ಲಕ್ಷಣ ಎಂದು ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಜಿ.ನಾಗರಾಜ್ ಶ್ಲಾಘಿಸಿದ್ದಾರೆ.
ಇಲ್ಲಿಯ ಎ.ಪಿ.ಎಂ.ಸಿ.ಯಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅವರು ಗಿಡ ನೆಡುವ ಜೊತೆಗೆ ಅದರ ರಕ್ಷಣೆ,ಸಂರಕ್ಷಣೆಯ ಕಾಳಜಿ ವಹಿಸುವುದು ಮುಖ್ಯ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಸ್ಥಳಿಯ ವರ್ತಕರ ಸಂಘದ ಅಧ್ಯಕ್ಷ ಆರ್.ಎಸ್. ಹೆಗಡೆ ಮಾತನಾಡಿ ಅರಣ್ಯ ನಾಶ, ಜಾಗತಿಕ ತಾಪಮಾನ ಏರಿಕೆಯಿಂದ ವಾತಾವರಣದ ವೈಪರೀತ್ಯಗಳು ಆಗುತಿದ್ದು ಒಂದು ಮರ ಕಡಿದರೆ ಹತ್ತು ಮರ ನೆಡು ಎನ್ನುವ ನಮ್ಮ ಪಾರಂಪರಿಕ ವಿವೇಕ ಆಚರಿಸುವ ಮೂಲಕ ಈ ತೊಂದರೆಗೆ ಪರಿಹಾರ ಕಂಡುಕೊಳ್ಳಬೆಕು ಎಂದರು.
ನಾಗರಾಜ್ ನಾಯ್ಕ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಎ.ಪಿ.ಎಂ.ಸಿ. ಕಾರ್ಯದರ್ಶಿ ಎಂ.ಜಿ.ನಾಯ್ಕ ವಂದಿಸಿದರು.
ವನಮಹೋತ್ಸವದಲ್ಲಿ ನೆಟ್ಟ ಗಿಡಗಳೆಲ್ಲಾ ಬದುಕಿದ್ದರೆ ಸಿದ್ಧಾಪುರ ದೊಡ್ಡ ಕಾಡಾಗುತಿತ್ತು. ಈಗ ಕೃತಕ ಗಾಳಿ, ಶುದ್ಧ ನೀರು ಸಂಗ್ರಹಿಸುವ ಕಾಲಬಂದಿದೆ. ಒಬ್ಬ ಮನುಷ್ಯನಿಗೆ ದಿನವೊಂದಕ್ಕೆ ಬೇಕಾಗುವ 1800 ರೂ. ಮೌಲ್ಯದ ಗಾಳಿಯನ್ನು ಮರಗಳು ನಮಗೆ ಉಚಿತವಾಗಿ ನೀಡುತ್ತಿವೆ. ಇದು ಕಾಡು, ಅರಣ್ಯ, ಪರಿಸರದ ಮಹತ್ವಕ್ಕೆ ಸಾಕ್ಷಿ


- ಡಾ.ಶ್ರೀಧರ ವೈದ್ಯ

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






