ಮಳೆ+ಗಾಳಿ=ಹಾನಿ,ಶಾಲಾ-ಕಾಲೇಜುಗಳಿಗೆ ರಜೆ

ಶಾಲಾ-ಕಾಲೇಜುಗಳಿಗೆ ರಜೆ
(ಸಿದ್ಧಾಪುರ,ಆ.05-) ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಿದ್ಧಾಪುರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.6 ರ ಮಂಗಳವಾರ ರಜೆ ಘೋಶಿಸಿರುವುದಾಗಿ ತಹಸಿಲ್ದಾರ ಕಛೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲೂ ನೀರು-
ಸಿದ್ಧಾಪುರ, ಹಾಳದಕಟ್ಟಾ, ಕೊಂಡ್ಲಿ ಭಾಗದಲ್ಲಿ ಅವೈಜ್ಞಾನಿಕ ನಿರ್ಮಾಣಗಳ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ನೀರು ತುಂಬಿ ಜನರು, ವಿದ್ಯಾರ್ಥಿಗಳು ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಈ ತೊಂದರೆ ಬಗ್ಗೆ ಪ.ಪಂ. ಆಡಳಿತ ಮತ್ತು ಶಾಸಕರು ಗಮನ(ಹರಿ) ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.
ಮಳೆ+ಗಾಳಿ=ಹಾನಿ
ಕಳೆದ ಎರಡ್ಮೂರು ದಿವಸಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಬೀಳುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಹಳ್ಳ-ಕೊಳ್ಳ ಗಳೆಲ್ಲಾ ತುಂಬಿ ಹರಿಯುತ್ತಿವೆ. ಜನರು ಕೃಷಿ ಕೆಲಸ ಮಾಡಲು ಹಿಂಜರಿಯುವಂತೆ ಮಳೆ,ಗಾಳಿ ರಭಸ ಹೆಚ್ಚಾಗಿದ್ದು ಜನಜಾನುವಾರುಗಳ ಓಡಾಟಕ್ಕೂ ತೊಂದರೆಯಾಗಿದೆ.
ಶುಕ್ರವಾರ ಶನಿವಾರದ ಅವಧಿಯ ಮಳೆ ಗಾಳಿಗೆ ಕೋಲಶಿರ್ಸಿ ಪಂಚಾಯತ್ ನ ಅವರಗುಪ್ಪಾದ ಈಶ್ವರ ದೇವಾಲಯದ ಕಲ್ಲುಗಳು ಕುಸಿದಿವೆ. ಈ ಈಶ್ವರ ದೇವಾಲಯ ಪುರಾತನ ದೇವಾಲಯವಾಗಿದ್ದು ಗ್ರಾಮಸ್ಥರು ಈ ದೇವಸ್ಥಾನದ ಪುನರ್ ನಿರ್ಮಾಣದ ಬಗ್ಗೆ ಯೋಚಿಸುತ್ತಿದ್ದ ಸಮಯದಲ್ಲೇ ಇದು ಉದುರಿಬೀಳುವಂತೆ ಕಟ್ಟಡದ ಕಲ್ಲು,ಮಣ್ಣು, ಮರಳು ಜರಿಯತೊಡಗಿದೆ.
ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಇಲ್ಲಿಯ ಗ್ರಾಮ ಸಮೀತಿ ಸ್ಥಳಿಯ ಆಡಳಿತವನ್ನು ಆಗ್ರಹಿಸಿದೆ. ರವಿವಾರ ಶಿರಸಿ ರಸ್ತೆಯ 16 ನೇ ಮೈಲ್‍ಕಲ್ ಬಳಿ ಬುಡಮೇಲಾಗಿ ಬಿದ್ದ ಬಿದಿರಿನ ಹಿಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿತ್ತು. ಸೋಮವಾರ ಬೆಳಿಗ್ಗೆ ರಭಸದ ಮಳೆ-ಗಾಳಿ ಪರಿಣಾಮ ಸಿದ್ಧಾಪುರ ಸಿವಿಲ್ ಕೋರ್ಟ್ ಎದುರಿಗೆ ಮೇ ಫ್ಲವರ್ ಮರವೊಂದು ಬುಡಸಹಿತ ಧರೆಗುರುಳಿದ್ದು ಸಂಬಂಧಿಸಿದವರು ರಸ್ತೆ ತೆರವು ಮಾಡಿಕೊಟ್ಟಿದ್ದಾರೆ.

ಇದೊಂಥರಾ ವಿಶಿಷ್ಟ ನಾಗಪಂಚಮಿ
ವಿಶೇಶಚೇತನರಿಗೆ ಹಾಲು,ಸಿಹಿ ಹಂಚಿ ನಾಗರ ಪಂಚಮಿ ಆಚರಣೆ
ನಿರಂತರ ಮಳೆ, ಮಹಾಪೂರಗಳ ನಡುವೆ ನಾಡಿನಾದ್ಯಂತ ಇಂದು ನಾಗರ ಪಂಚಮಿ ಆಚರಿಸಲಾಯಿತು.
ಬಹುತೇಕ ಕಡೆ ಕಲ್ಲುನಾಗರ, ಮೂರ್ತಿನಾಗರ, ಜೀವಂತನಾಗರ ದೇವರ ಆರಾಧನೆ ನಡೆದರೆ, ಕಾರವಾರದಲ್ಲಿ ನಗರದ ಗಣ್ಯರು ವಿಭಿನ್ನವಾಗಿ ನಾಗರಪಂಚಮಿ ಆಚರಿಸಿದರು.
ಇಲ್ಲಿಯ ಖುರಸಾವಾಡಾ ದಲ್ಲಿರುವ ಆಶಾನಿಕೇತನ ವಿಶೇಶಚೇತನ ಮಕ್ಕಳ ಶಾಲೆಗೆ ತರಳಿ ನಾಗಪಂಚಮಿ ಆಚರಿಸಿದ ಜನಶಕ್ತಿ ಸಂಘಟನೆಯ ಮುಖ್ಯಸ್ಥ ಮಾಧನ ನಾಯ್ಕ ನೇತೃತ್ವದ ತಂಡ ಇಲ್ಲಿಯ ಮಕ್ಕಳಿಗೆ ಸಿಹಿ-ಹಾಲು ವಿತರಿಸಿ, ಊಟ ಬಡಿಸುವ ಮೂಲಕ ನಾಗರಪಂಚಮಿ ಆಚರಿಸಿತು.
ಈ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕಲ್ಲು, ಕಲ್ಲಿನ ನಾಗರ ಮೂರ್ತಿಗೆ ಹಾಲು ಸುರಿದು ಹಾಳು ಮಾಡುವ ಬದಲು ಇಂಥ ಅಸಹಾಯಕ, ದುರ್ಬಲ ಮಕ್ಕಳು,ಹಿರಿಯರಿಗೆ ಹಾಲು,ಹಣ್ಣು- ಸಿಹಿ ವಿತರಿಸುವ ಮೂಲಕ ನಾಗರ ಪಂಚಮಿ ಆಚರಿಸಿದರೆ ಅದರಿಂದಲೂ ಫಲ ದೊರೆಯುತ್ತದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *