ಮಳೆ+ಗಾಳಿ=ಹಾನಿ,ಶಾಲಾ-ಕಾಲೇಜುಗಳಿಗೆ ರಜೆ

ಶಾಲಾ-ಕಾಲೇಜುಗಳಿಗೆ ರಜೆ
(ಸಿದ್ಧಾಪುರ,ಆ.05-) ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಿದ್ಧಾಪುರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.6 ರ ಮಂಗಳವಾರ ರಜೆ ಘೋಶಿಸಿರುವುದಾಗಿ ತಹಸಿಲ್ದಾರ ಕಛೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲೂ ನೀರು-
ಸಿದ್ಧಾಪುರ, ಹಾಳದಕಟ್ಟಾ, ಕೊಂಡ್ಲಿ ಭಾಗದಲ್ಲಿ ಅವೈಜ್ಞಾನಿಕ ನಿರ್ಮಾಣಗಳ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ನೀರು ತುಂಬಿ ಜನರು, ವಿದ್ಯಾರ್ಥಿಗಳು ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ಈ ತೊಂದರೆ ಬಗ್ಗೆ ಪ.ಪಂ. ಆಡಳಿತ ಮತ್ತು ಶಾಸಕರು ಗಮನ(ಹರಿ) ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.
ಮಳೆ+ಗಾಳಿ=ಹಾನಿ
ಕಳೆದ ಎರಡ್ಮೂರು ದಿವಸಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಬೀಳುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ಹಳ್ಳ-ಕೊಳ್ಳ ಗಳೆಲ್ಲಾ ತುಂಬಿ ಹರಿಯುತ್ತಿವೆ. ಜನರು ಕೃಷಿ ಕೆಲಸ ಮಾಡಲು ಹಿಂಜರಿಯುವಂತೆ ಮಳೆ,ಗಾಳಿ ರಭಸ ಹೆಚ್ಚಾಗಿದ್ದು ಜನಜಾನುವಾರುಗಳ ಓಡಾಟಕ್ಕೂ ತೊಂದರೆಯಾಗಿದೆ.
ಶುಕ್ರವಾರ ಶನಿವಾರದ ಅವಧಿಯ ಮಳೆ ಗಾಳಿಗೆ ಕೋಲಶಿರ್ಸಿ ಪಂಚಾಯತ್ ನ ಅವರಗುಪ್ಪಾದ ಈಶ್ವರ ದೇವಾಲಯದ ಕಲ್ಲುಗಳು ಕುಸಿದಿವೆ. ಈ ಈಶ್ವರ ದೇವಾಲಯ ಪುರಾತನ ದೇವಾಲಯವಾಗಿದ್ದು ಗ್ರಾಮಸ್ಥರು ಈ ದೇವಸ್ಥಾನದ ಪುನರ್ ನಿರ್ಮಾಣದ ಬಗ್ಗೆ ಯೋಚಿಸುತ್ತಿದ್ದ ಸಮಯದಲ್ಲೇ ಇದು ಉದುರಿಬೀಳುವಂತೆ ಕಟ್ಟಡದ ಕಲ್ಲು,ಮಣ್ಣು, ಮರಳು ಜರಿಯತೊಡಗಿದೆ.
ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಇಲ್ಲಿಯ ಗ್ರಾಮ ಸಮೀತಿ ಸ್ಥಳಿಯ ಆಡಳಿತವನ್ನು ಆಗ್ರಹಿಸಿದೆ. ರವಿವಾರ ಶಿರಸಿ ರಸ್ತೆಯ 16 ನೇ ಮೈಲ್‍ಕಲ್ ಬಳಿ ಬುಡಮೇಲಾಗಿ ಬಿದ್ದ ಬಿದಿರಿನ ಹಿಂಡು ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಿತ್ತು. ಸೋಮವಾರ ಬೆಳಿಗ್ಗೆ ರಭಸದ ಮಳೆ-ಗಾಳಿ ಪರಿಣಾಮ ಸಿದ್ಧಾಪುರ ಸಿವಿಲ್ ಕೋರ್ಟ್ ಎದುರಿಗೆ ಮೇ ಫ್ಲವರ್ ಮರವೊಂದು ಬುಡಸಹಿತ ಧರೆಗುರುಳಿದ್ದು ಸಂಬಂಧಿಸಿದವರು ರಸ್ತೆ ತೆರವು ಮಾಡಿಕೊಟ್ಟಿದ್ದಾರೆ.

ಇದೊಂಥರಾ ವಿಶಿಷ್ಟ ನಾಗಪಂಚಮಿ
ವಿಶೇಶಚೇತನರಿಗೆ ಹಾಲು,ಸಿಹಿ ಹಂಚಿ ನಾಗರ ಪಂಚಮಿ ಆಚರಣೆ
ನಿರಂತರ ಮಳೆ, ಮಹಾಪೂರಗಳ ನಡುವೆ ನಾಡಿನಾದ್ಯಂತ ಇಂದು ನಾಗರ ಪಂಚಮಿ ಆಚರಿಸಲಾಯಿತು.
ಬಹುತೇಕ ಕಡೆ ಕಲ್ಲುನಾಗರ, ಮೂರ್ತಿನಾಗರ, ಜೀವಂತನಾಗರ ದೇವರ ಆರಾಧನೆ ನಡೆದರೆ, ಕಾರವಾರದಲ್ಲಿ ನಗರದ ಗಣ್ಯರು ವಿಭಿನ್ನವಾಗಿ ನಾಗರಪಂಚಮಿ ಆಚರಿಸಿದರು.
ಇಲ್ಲಿಯ ಖುರಸಾವಾಡಾ ದಲ್ಲಿರುವ ಆಶಾನಿಕೇತನ ವಿಶೇಶಚೇತನ ಮಕ್ಕಳ ಶಾಲೆಗೆ ತರಳಿ ನಾಗಪಂಚಮಿ ಆಚರಿಸಿದ ಜನಶಕ್ತಿ ಸಂಘಟನೆಯ ಮುಖ್ಯಸ್ಥ ಮಾಧನ ನಾಯ್ಕ ನೇತೃತ್ವದ ತಂಡ ಇಲ್ಲಿಯ ಮಕ್ಕಳಿಗೆ ಸಿಹಿ-ಹಾಲು ವಿತರಿಸಿ, ಊಟ ಬಡಿಸುವ ಮೂಲಕ ನಾಗರಪಂಚಮಿ ಆಚರಿಸಿತು.
ಈ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಕಲ್ಲು, ಕಲ್ಲಿನ ನಾಗರ ಮೂರ್ತಿಗೆ ಹಾಲು ಸುರಿದು ಹಾಳು ಮಾಡುವ ಬದಲು ಇಂಥ ಅಸಹಾಯಕ, ದುರ್ಬಲ ಮಕ್ಕಳು,ಹಿರಿಯರಿಗೆ ಹಾಲು,ಹಣ್ಣು- ಸಿಹಿ ವಿತರಿಸುವ ಮೂಲಕ ನಾಗರ ಪಂಚಮಿ ಆಚರಿಸಿದರೆ ಅದರಿಂದಲೂ ಫಲ ದೊರೆಯುತ್ತದೆ ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *