ಜಲಪ್ರಳಯ ಕೆರೆಕಟ್ಟೆಒಡೆದುಬೆಳೆಹಾನಿ.ರಸ್ತೆ,ಸಂವಹನ,ಸಂಪರ್ಕಸ್ಥಗಿತ, ಜಿಲ್ಲಾಡಳಿತದ ಸಮರೋಪಾದಿಯ ಕ್ರಮ

ನಿರಂತರ ಗಾಳಿ ಮಳೆ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದ್ದು ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಾಗಾಟ ಸ್ಥಗಿತಗೊಂಡಿದೆ.
ಉತ್ತರಕನ್ನಡ ಜಿಲ್ಲೆಯಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಪ್ರಮುಖ ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಿಂದ ನೀರು ಹೊರಬಿಡುತಿದ್ದು ನಿರಾಶ್ರಿತರ ಸಂಖ್ಯೆ ವೃದ್ಧಿಯಾಗುತ್ತಿದೆ. ಶಿರಸಿ ಬನವಾಸಿ ಬಳಿಯ ಮೊಗಳ್ಳಿಯಲ್ಲಿ ವರದಾ ಪ್ರವಾಹದಿಂದಾಗಿ ಇಡೀ ಗ್ರಾಮವೇ ಸ್ಥಳಾಂತರವಾಗಿದೆ. ಶಿವಮೊಗ್ಗ ಜಿಲ್ಲೆಯ ಜೋಳದಗುಡ್ಡೆ, ಕತವಾಯಿ ನಡುವಿನ ಗದ್ದೆ ಬಯಲು ವರದಾ ನೀರಿನಿಂದ ತುಂಬಿದ್ದು ಬೆಳೆ ನಾಶವಾಗುವ ಸಾಧ್ಯತೆ ಹೆಚ್ಚಿದೆ.
ಸಿದ್ಧಾಪುರದಲ್ಲಿ ಅಘನಾಶಿನಿ ನದಿ, ಉಪನದಿಗಳೆಲ್ಲಾ ತುಂಬಿ ಹರಿಯುತಿದ್ದು ಹೆಮ್ಮನಬೈಲಿನ ಆರು ಕುಟುಂಬಗಳಿಗೆ ಸೋವಿನಕೊಪ್ಪ ಶಾಲೆಯಲ್ಲಿ ಪುನರ್ ವಸತಿ ಕಲ್ಫಸಲಾಗಿದೆ. ಸಿದ್ಧಾಪುರ ಕಲ್ಯಾಣಪುರದಲ್ಲೂ ನೆರೆ ಇಳಿಯದ ಪರಿಣಾಮ ಗಂಜಿಕೇಂದ್ರ ಮುಂದುವರಿದಿದೆ.
ರಸ್ತೆ ಸಂಪರ್ಕ, ದೂರವಾಣಿ, ಮೊಬೈಲ್ ಸಂಪರ್ಕಗಳೆಲ್ಲಾ ಸ್ಥಗಿತಗೊಂಡಿದ್ದು ಸಂವಹನ, ಸಂಪರ್ಕ ಕಷ್ಟಸಾಧ್ಯವಾಗಿದೆ. ಕರಾವಳಿ,ಮಲೆನಾಡು ಬೆಸೆಯುವ ಪ್ರಮುಖ ರಸ್ತೆಗಳ ಮೇಲೆಲ್ಲಾ ನೀರು ಹರಿದು, ಮರಬಿದ್ದು ಸಂಪರ್ಕ ಅಸ್ಯವ್ಯಸ್ತವಾಗಿದೆ. ಈ ತೊಂದರೆಗಳ ಹಿನ್ನೆಲೆಯಲ್ಲಿ ಗುರುವಾರ ಕೂಡಾ ಉತ್ತರ ಕನ್ನಡ ಜಿಲ್ಲೆಯ ಶಾಲಾ, ಕಾಲೇಜು ಅಂಗನವಾಡಿಗಳಿಗೆ ರಜೆ ಮುಂದುವರಿಸಲಾಗಿದೆ.
ಸಿದ್ಧಾಪುರದ ಸುದ್ದಿ- ಕಳೆದ 48 ಗಂಟೆಗಳಲ್ಲಿ ಸಿದ್ಧಾಪುರ ತಾಲೂಕಿನಲ್ಲಿ ರಾಜ್ಯದಲ್ಲೇ ಗರಿಷ್ಟ 300 ಮಿ.ಮೀ. ಮಳೆ ಸುರಿದಿದೆ. ಈ ಮಹಾಮಳೆಯ ಪರಿಣಾಮ ಕಾನಗೋಡಿನ ಕೆರೆಯ ಕೋಡಿ ಮುರಿದು ನೀರು ಗದ್ದೆ, ತೋಟಗಳ ಮೇಲೆ ಹರಿಯುತ್ತಿದೆ.
ನಿನ್ನೆ ರಾತ್ರಿಯ ವಿಪರೀತ ಮಳೆಗೆ ಅವರಗುಪ್ಪಾ ಕೆರೆಯ ಕೋಡಿಯ ಕೆಳಗಿನ ಜಾಗ ಕುಸಿದಿದ್ದು, ಇದರಲ್ಲಿ ನೀರು ನುಗ್ಗಿದರೆ ನೂರಾರು ಎಕರೆ ಅಡಿಕೆ, ಭತ್ತದಗದ್ದೆ ಬೆಳೆ ನಾಶವಾಗುವ ಅಪಾಯ ಎದುರಾಗಿದೆ. ತಾಲೂಕಿನಾದ್ಯಂತ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು ಪುನರ್‍ರ್ವಸತಿ,ತುರ್ತು ಕೆಲಸ ಭರದಿಂದ ನಡೆಯುತ್ತಿದೆ. ಈ ಮಳೆಯ ಪರಿಣಾಮ ತಾಲೂಕಿನ ಹಣಜಿಬೈಲ್ ನಲ್ಲಿ ಒಂದು ಜೀವಹಾನಿ ಮತ್ತು ಇನ್ನೊಂದು ಕಡೆ ಜಾನುವಾರು ತೇಲಿಹೋದ ವರದಿಯಾಗಿದೆ. ಐಸೂರು,ಚಪ್ಪರಮನೆ,ಹಳದೋಟ ಸೇರಿದಂತೆ ಅನೇಕ ಕಡೆ ಜರಿ ಕುಸಿದಿದ್ದು ಸಂಚಾರಕ್ಕೆ ಅಡಚಣೆಯಾಗಿದೆ.
ತಾಲೂಕಿನಲ್ಲಿ 344 ಎಕರೆ ಬೆಳೆಗೆ ಹಾನಿಯಾಗಿದೆ. 67 ಜನರನ್ನು ಸಂತ್ರಸ್ತರೆಂದು ಗುರುತಿಸಿದ್ದು ಅವರಿಗೆ ಎರಡು ಕಡೆ ಪುನರ್ ವಸತಿ ಕಲ್ಫಿಸಲಾಗಿದೆ. ಕೆರೆ ಹಾನಿ ಮತ್ತು ಬೆಳೆ ಹಾನಿ ಸಂಭವನೀಯತೆ ಹಿನ್ನೆಲೆಯಲ್ಲಿ ಅವರಗುಪ್ಪಾ ಮತ್ತು ಕಾನಗೋಡಿನ ಜನರು ಸೂಕ್ತ ವ್ಯವಸ್ಥೆಗಾಗಿ ತಹಸಿಲ್ಧಾರರಿಗೆ ಮನವಿ ಮಾಡಿದ್ದಾರೆ. ತಾಲೂಕಿನ ಸೋವಿನಕೊಪ್ಪಾ ಹೆಮ್ಮನಬೈಲಿನ ಪುನರ್ವಸತಿ ಕೇಂದ್ರಕ್ಕೆ ಇಂದು ಭೇಟಿ ನೀಡಿದ ತಾಲೂಕಾ ಪಂಚಾತ್ ಅಧ್ಯಕ್ಷರು ಸದಸ್ಯರು ವ್ಯವಸ್ಥೆ ಪರಿಶೀಲಿಸಿದರು. ಜನಪ್ರತಿನಿಧಿಗಳು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂತೃಸ್ತರು ತಮಗೆ ಅಪಾಯವಿಲ್ಲದ ಪ್ರದೇಶದಲ್ಲಿ ಶಾಶ್ವತ ವಸತಿ ವ್ಯವಸ್ಥೆಗೆ ಆಗ್ರಹಿಸಿದರು. ಪುನರರ್ವಸತಿ ಕೇಂದ್ರದಲ್ಲಿ ಆರೋಗ್ಯ, ಆಹಾರ, ರಕ್ಷಣೆ, ಭದ್ರತೆ ವ್ಯವಸ್ಥೆಗಳು ಸಮರ್ಪಕವಾಗಿರುವುದು ಕಂಡು ಬಂತು.ಸರ್ಕಾರಿವ್ಯವಸ್ಥೆಯೊಂದಿಗೆ ಸ್ಥಳಿಯರು ಅಲ್ಲಲ್ಲಿ ಸಂತ್ರಸ್ತರ ನೆರವಿಗೆ ಬಂದಿದ್ದು ಗಮನಕ್ಕೆ ಬಂತು. ಹೆಮ್ಮನಬೈಲಿನಲ್ಲಿ ಪ್ರವಾಹ ಪರಿಸ್ಥಿತಿ ಕುಗ್ಗಿದ ಪರಿಣಾಮ ಹಾನಿಗೊಳಗಾದ ಪ್ರದೇಶ, ಮನೆಗಳ ಪರಿಸ್ಥಿತಿ ಅವಲೋಕನಕ್ಕೆ ಅವಕಾಶವಾಯಿತು. ನೂರಾರು ವರ್ಷಗಳಿಂದ ವಾಸ್ತವ್ಯ ಹೂಡಿದ್ದ ಜನತೆ ಜನಜಾನುವಾರುಗಳೊಂದಿಗೆ ಸ್ಥಳಾಂತರವಾಗಿದ್ದು ವಸ್ತು, ಪರಿಸ್ಥಿತಿ ವಸ್ತುಸ್ಥಿತಿ ಅವಲೋಕಿಸಲು ಅವಕಾಶವಾಯಿತು. ಸಂಪೂರ್ಣ ಹಾನಿ ಸಮೀಕ್ಷೆ ಈವರೆಗೆ ಸಾಧ್ಯವಾಗಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *