ಸಂತೃಸ್ತರ ನಡುವೆ ಸಮಯಕೊಟ್ಟ ನಿಸ್ವಾರ್ಥಿಗಳು

ನೆರೆಪೀಡಿತ ಪ್ರದೇಶಗಳಲ್ಲಿ ಕೆಲಸಮಾಡುವ ಎಂ.ಎಲ್.ಎ. ಗಳು ಎಂ.ಪಿ., ಮಂತ್ರಿ, ಅಧಿಕಾರಿ,ಇತ್ಯಾದಿ ಸರ್ಕಾರಿ ವೇತನ, ಭತ್ಯೆ, ಅನುಕೂಲ ಪಡೆದು ಕೆಲಸ ಮಾಡುವವರಿಗೆ ಅದು ಕರ್ತವ್ಯ ಮತ್ತು ಜವಾಬ್ಧಾರಿ.
ಆದರೆ ಇಂಥ ಅನುಕೂಲಗಳಿಲ್ಲದೆ ನಿಸ್ವಾರ್ಥದಿಂದ ಸೇವೆ ಮಾಡುವವರು ಅನೇಕರಿದ್ದಾರೆ ಅವರು ಹೆಚ್ಚೆಂದರೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ಫೋಟೋ ಹಾಕಿಕೊಳ್ಳಬಹುದು, ಅಥವಾ ಪತ್ರಿಕೆಗಳಿಗೆ ವರದಿ, ಚಿತ್ರ ನೀಡಬಹುದು. ಆದರೆ ಮನೆ, ಮಠ ಬಿಟ್ಟು ಸಂತೃಸ್ತರಿಗಾಗಿ ದುಡಿಯುವ ಈ ನಿಸ್ವಾರ್ಥ ಸೇವಕರಿದ್ದಾರಲ್ಲ ಅವರು ನಿಜಕ್ಕೂ ಸನ್ಮಾನ, ಪ್ರಶಂಸೆ, ಗೌರವಕ್ಕೆ ಅರ್ಹರು.
ಈ ವಾರದ ಉತ್ತರ ಕನ್ನಡದ ನೆರೆ ಹಾವಳಿಯಲ್ಲಿ ಹೀಗೆ ಕೆಲಸ ಮಾಡಿದ ಕೈ, ಮನಸ್ಸುಗಳು ಅನೇಕ.
ಸಿದ್ಧಾಪುರದಲ್ಲಿ ಹೆಮ್ಮನಬೈಲ್ ಮತ್ತು ಕಲ್ಯಾಣಪುರ, ಅಕ್ಕುಂಜಿಗಳಲ್ಲಿ ತಾತ್ಕಾಲಿಕ ಪುನರ್‍ವಸತಿ ಕೇಂದ್ರಗಳಲ್ಲಿ ದುಡಿದ ಅನೇಕರು ನಮ್ಮ ಗಮನ ಸೆಳೆದರು. ಆದರೆ ಅವರೆಲ್ಲರ ಮುಖ ಪರಿಚಯವಾಗಲಿ,ಸ್ನೇಹ-ಸಂಬಂಧಗಳಾಗಲಿ ನಮಗಿಲ್ಲ. ಆದರೆ ನಮ್ಮ ಪರಿಚಯದ ತಾ.ಪಂ. ಸದಸ್ಯ ನಾಸಿರ್‍ಖಾನ್ ಈ ವಾರವಿಡೀ ಈ ಸಂತೃಸ್ತರ ಜೊತೆಗಿದ್ದರು. ಸಿದ್ಧಾಪುರದ ತಹಸಿಲ್ಧಾರರು ಹುರುಪಿನಿಂದಲೇ ಇಲ್ಲಿಯ ಜವಾಬ್ಧಾರಿ ನಿರ್ವಹಿಸಿದ್ದಾರೆ. ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ದುಡಿದ ಅನೇಕರಿದ್ದಾರೆ. ಇವರೆಲ್ಲರ ಜೊತೆಗೆ ರಾತ್ರಿ ಹಗಲೆನ್ನದೆ ಕೆಲಸ ಮಾಡಿದ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರಿದ್ದಾರೆ. ಇವರಲ್ಲಿ ಕೊಂಡ್ಲಿ ಗ್ರಾಮ ಚಾವಡಿಯ ಆರ್.ಐ. ದಿವಾಕರ್ ನಾಯ್ಕ ತಮ್ಮ ಬಿರುಕುಬಿಟ್ಟ ಕಾಲ್ ಬೆರಳುಗಳ ಪಾದವನ್ನೇ ಊರುತ್ತಾ ಇಡೀ ತಾಲೂಕು ಸುತ್ತಿದ್ದಾರೆ!.
ಇವರ ಮಧ್ಯೆ ಗವಿನಗುಡ್ಡ ಸೇರಿದಂತೆ ಸಿದ್ದಾಪುರ ತಾಲೂಕು, ಉತ್ತರಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಉದ್ದಗಲಕ್ಕೂ ಹೀಗೆ ನಿಸ್ವಾರ್ಥ ಸೇವೆ ಮಾಡಿದ ಅನೇಕರಿದ್ದಾರೆ. ಇವರೆಲ್ಲರಿಗೆ ಧನ್ಯವಾದಗಳು. ಊರು ಕೊಚ್ಚಿಹೋದ ಮೇಲೆ ವಾರದ ಕೊನೆ ಅವಧಿಯಲ್ಲ ಓಡೋಡಿ ಬಂದು ಸುದ್ದಿ ಮಾಡಿದ ಕೆಲವು ಎಂ.ಪಿ., ಎಂ.ಎಲ್.ಎ.ಗಳಿಗೂ. ಅವರ ಚಿತ್ರ ಹಾಕಿ ಭಟ್ಟಂಗಿತನ ಮೆರೆದ ಕೆಲವು ಭಕ್ತಹುಳುಗಳಿಗೂ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *