ನೆರೆ ಸಂತ್ರಸ್ತರಿಗೆ ಆಶ್ರಯ ಒದಗಿಸಲು ಗೋಸ್ವರ್ಗದ ಬಾಗಿಲು ತೆರೆದಿದೆ

ಸಿದ್ದಾಪುರ; ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಶ್ರೀರಾಮಚಂದ್ರಾಪುರ ಮಠ ತನ್ನ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ಭಾನ್ಕುಳಿಯಲ್ಲಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಸ್ವ-ಇಚ್ಛೆಯಿಂದ ಆರಂಭಿಸಿದೆ. ಯಾವುದೇ ಸರ್ಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೆ ಮಠ ತನ್ನ ಕರ್ತವ್ಯ ಎಂದು ಭಾವಿಸಿ ಈ ಕೇಂದ್ರ ಆರಂಭಿಸುತ್ತಿದೆ ಎಂದು ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಹೇಳಿದ್ದಾರೆ.
ಗಿರಿನಗರದ ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು ಶನಿವಾರ ಆಶೀರ್ವಚನದಲ್ಲಿ ಈ ವಿಷಯ ಪ್ರಕಟಿಸಿ
ರಾಜ್ಯದ ಜನ ಭೀಕರ ಪ್ರವಾಹದಿಂದ ತತ್ತರಿಸಿದ್ದಾರೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಕ್ಕೆ ಧುಮುಕಬೇಕಾದ ಸಮಯವಿದು. ಗೋಸ್ವರ್ಗದಲ್ಲಿ ಸಾವಿರಾರು ಮಂದಿಗೆ ಆಶ್ರಯ ನೀಡಲು ಸ್ಥಳಾವಕಾಶವಿದೆ. ಊಟೋಪಚಾರ ಒದಗಿಸಲು ವ್ಯವಸ್ಥೆಯಿದೆ. ಪ್ರವಾಹ ಸಂತ್ರಸ್ತರು ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಇದನ್ನು ಬಳಸಿಕೊಳ್ಳಬಹುದು. ಗೋಸ್ವರ್ಗವು ನೆರೆ ಸಂತ್ರಸ್ತರ ಪಾಲಿಗೂ ಸ್ವರ್ಗವಾಗಬೇಕು ಎನ್ನುವುದು ನಮ್ಮ ಬಯಕೆ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ಇನ್ನೂ ಯಾವ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಬಗ್ಗೆ ಮಠದಿಂದ ಚಿಂತನೆ ನಡೆದಿದೆ ಎಂದು ಶ್ರೀಗಳು ತಿಳಿಸಿದ್ದಾರೆ.
………………………………………………………………………………………………………………………………………………………………………
ಪರಿಹಾರ ಸಾಮಗ್ರಿ ಸಂಗ್ರಹ: ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಸಂಗ್ರಹಕ್ಕೆ ಕೂಡಾ ಶ್ರೀಮಠ ವ್ಯವಸ್ಥೆ ಮಾಡಿದೆ. ಮಂಗಳೂರಿನ ನಂತೂರು ಶ್ರೀಭಾರತೀ ಸಮೂಹಸಂಸ್ಥೆಯ ಸೇವಾಸಮಿತಿ ಕಚೇರಿ, ಮಾಣಿಮಠ ಕಚೇರಿ, ಉತ್ತರ ಕನ್ನಡ ಜಿಲ್ಲೆಯ ಕೆಕ್ಕಾರು ಮಠ ಕಚೇರಿ, ಅಪ್ಸರಕೊಂಡ ಮಠದ ಕಚೇರಿ, ಭಾನ್ಕುಳಿ ಗೋಸ್ವರ್ಗ ಆವರಣದಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ವಿತರಿಸಲಾಗುತ್ತದೆ.
ಎಲ್ಲರ ನಡಿಗೆ ಸಂತೃಸ್ತರ ಕಡೆಗೆ, ಭಾದಿತರ ನಡಿಗೆ ಮನೆ ಕಡೆಗೆ
ಕಳೆದ ವಾರದ ಮಳೆ, ಪ್ರವಾಹಗಳಿಂದ ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಗಳೆಲ್ಲಾ ಪ್ರವಾಹದ ಮಹಾಪೂರದಲ್ಲಿ ಮುಳುಗಿವೆ.
ಈ ಪ್ರವಾಹ ಸಂತೃಸ್ತರ ನೆರವಿಗೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಕೈಜೋಡಿಸಿದ್ದಾರೆ. ರಾಜ್ಯದಲ್ಲಿ ಏಕವ್ಯಕ್ತಿ ಸರ್ಕಾರದಿಂದಾಗಿ ಜನರಿಗೆ ಸರಿಯಾದ ಸರ್ಕಾರದ ಸ್ಫಂದನ ನೆರವು ದೊರೆಯದ ಅಸಮಧಾನದ ನಡುವೆ ಸೆಲಿಬ್ರಿಟಿಗಳು, ಸಂಘ ಸಂಸ್ಥೆಗಳು ಭಾದಿತರ ಕಣ್ಣೊರೆಸುವ ಕೆಲಸ ಮಾಡುತ್ತಿವೆ.
ಉತ್ತರ ಕರ್ನಾಟಕದಲ್ಲಿ ಸ್ವಂತ ಶಿವರಾಜಕುಮಾರ ಮತ್ತು ಪುನೀತ್ ರಾಜಕುಮಾರ ನೆರವಿಗೆ ಧಾವಿಸಿದ್ದು ನಾವು ಸ್ಟಾರ್‍ಡಮ್ ಅನುಭವಿಸಲು ಕಾರಣ ಕನ್ನಡದ ಜನತೆ ಹಾಗಾಗಿ ನಾವು, ನಮ್ಮ ಅಭಿಮಾನಿಗಳು ಕಷ್ಟದಲ್ಲಿರುವ ಜನರ ಸೇವೆಗೆ ಧಾವಿಸುತ್ತೇವೆ ಎಂದಿದ್ದಾರೆ. ನಟ ವಿಜಯರಾಘವೇಂದ್ರ ಸೇರಿದಂತೆ ಅನೇಕ ನಟ,ನಟಿಯರು ಸಂತೃಸ್ತರ ಜೊತೆಗೆ ನಾವಿದ್ದೇವೆ ಎಂದು ಸಾರಿದ್ದಾರೆ.
ಇನ್ಫೋಸಿಸ್ ಸುಧಾಮೂರ್ತಿ ಸೇರಿದಂತೆ ಪ್ರಮುಖ ಉದ್ಯಮಿಗಳು ಕರ್ನಾಟಕದ ಪ್ರವಾಹ ಸಂತೃಸ್ತರ ನೆರವಿಗೆ ನಿಂತಿದ್ದಾರೆ. ಉತ್ತರಕನ್ನಡದಲ್ಲೂ ಸ್ಥಳಿಯ ಸಂಘ ಸಂಸ್ಥೆಗಳು ಸಂತೃಸ್ತರ ನೆರವಿಗೆ ಬಂದಿವೆ. ಶನಿವಾರ ಜಿಲ್ಲಾ ಕಾಂಗ್ರೆಸ್ ಸಮೀತಿ ಸಂತೃಸ್ತರ ಕೇಂದ್ರಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದೆ.
ಶಿರಸಿ ಎ.ಪಿ.ಎಂ.ಸಿ. ಅಧ್ಯಕ್ಷ ಸುನಿಲ್ ನಾಯ್ಕ ತಂಡ ತಾವು ಸಂಗ್ರಹಿಸಿದ ವಸ್ತುಗಳನ್ನು ಸಂತೃಸ್ತರ ಶಿಬಿರಗಳಿಗೆ ತೆರಳಿ ನೀಡಿದೆ. ಇಂದು ಆಳ್ವಾ ಫೌಂಡೇಶನ್ ಮತ್ತು ಭಾರತೀಯ ವೈದ್ಯಕೀಯ ಸಂಘಗಳು ಸಂತೃಸ್ತರನ್ನು ಸಂದರ್ಶಿಸಿ, ಉಪಚಾರ ನೀಡಿದ್ದಾರೆ.
ಸಿದ್ಧಾಪುರ ತಾ.ಪಂ. ಸದಸ್ಯ ನಾಶಿರ್‍ಖಾನ್ ಸಂತೃಸ್ತರೊಂದಿಗೆ ಕ್ಯಾಂಪ್ ಫೈರ್ ಮಾಡಿ ಹಾಡಿ ರಂಜಿಸುವ ಮೂಲಕ ಸಂತೃಸ್ತರ ಬವಣೆಗೆ ಮನೋರಂಜನೆಯ ಔಷದೋಪಚಾರ ಮಾಡಿದ್ದಾರೆ. ಅಂದಹಾಗೆ ಇಂದು ಮಳೆಯ ಆರ್ಭಟ ತಗ್ಗಿದ್ದು ಉತ್ತರ ಕನ್ನಡ ಜಿಲ್ಲೆಯ ಸಂತೃಸ್ತರ ನಡಿಗೆ ಮನೆಕಡೆಗೆ ಎನ್ನಲಡ್ಡಿಯೇನಿಲ್ಲ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *