postmartum- ಮುಗಿದ ಮಹಾಮಳೆ,ಒಡೆದ ಭೂಮಿ,ಮುರಿದುಬಿದ್ದ ತೂಗುಸೇತುವೆ, ಸಂತೃಸ್ತರಿಗೆ ಸಿಹಿಹಂಚಿ ಬೀಳ್ಕೊಡುಗೆ

ಸಿದ್ಧಾಪುರ ತಾಲೂಕು, ಉತ್ತರಕನ್ನಡ ಜಿಲ್ಲೆ ಸೇರಿದ ಕರಾವಳಿ, ಮಲೆನಾಡಿನಲ್ಲಿ ಮಳೆಯ ರುದ್ರನರ್ತನ ನಿಂತಿದ್ದು ಮಳೆ,ಪ್ರವಾಹಗಳ ಸಂತೃಸ್ತರು ಗಂಜಿ ಕೇಂದ್ರದಿಂದ ಮನೆಗೆ ಮರಳಿದ್ದಾರೆ. ಕರಾವಳಿಯಲ್ಲಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹಪೀಡಿತ ಪ್ರದೇಶದ ಸಮೀಕ್ಷೆ ನಡೆಸಿದ್ದಾರೆ. ಕರಾವಳಿಯ ಬಹುತೇಕ ಕಡೆ ಪ್ರವಾಹ ಇಳಿದಿದ್ದು ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ.
ಯಲ್ಲಾಪುರ ತಾಲೂಕಿನ ಕೊಡಸಳ್ಳಿ ಜಲವಿದ್ಯುತ್ ಯೋಜನೆ ನಿರಾಶ್ರಿತರ ಪುನರ್ವಸತಿ ಕೇಂದ್ರಗಳಾದ ಹೆಗ್ಗಾರು, ಕಲ್ಲೇಶ್ವರ ಗಳಿಗೆ ಗಂಗಾವಳಿ ನದಿ ನೀರು ನುಗ್ಗಿ ಹಾನಿ ಮಾಡಿದೆ. ಈ ನಿರಾಶ್ರಿತರ ಕೇಂದ್ರಗಳಲ್ಲಿ ಇದೇ ವರ್ಷ ಮೊದಲ ಬಾರಿಗೆ ನೆಗಸುಬಂದಿದ್ದು ಒಮ್ಮೆ ಮನೆ,ಹೊಲ ಬಿಟ್ಟುಬಂದ ಇವರು ಮತ್ತೆ ಇಲ್ಲಿಂದ ಎತ್ತಂಗಡಿಯಾಗಬೇಕಾಗಬಹುದೆ? ಎನ್ನುವ ಆತಂಕದಲ್ಲಿದ್ದಾರೆ.
ಇದೇ ಯಲ್ಲಾಪುರ ತಾಲೂಕಿನ ಶಿರ್ಲೆ ಜಲಪಾತದಲ್ಲಿ ಸಿಲುಕಿ ಒಂದು ದಿನದ ನಂತರ ಅಗ್ನಿಶಾಮಕ ಸೇವೆಯ ಪ್ರಯತ್ನದಿಂದ ಮರಳಿಬಂದ 6 ಜನರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಧಾನ ವ್ಯಕ್ತವಾಗಿದೆ.
ಶಿರಸಿಯ ಪ್ರತಿವರ್ಷದ ನೆರೆಪ್ರದೇಶ ಮೊಗವಳ್ಳಿಯಲ್ಲಿ ದೋಣಿ ಬಳಸುವ ಮೂಲಕ ಜಿಲ್ಲಾಡಳಿತ ಸ್ಥಳಿಯರನ್ನು ಬಚಾವು ಮಾಡಿದೆ. ಸಿದ್ಧಾಪುರ ತಾಲೂಕಿನ ಹಸರಗೋಡು ಪಂಚಾಯತ್ ಬಾಳೂರಿನ ತೂಗುಸೇತುವೆ ನೀರಿನ ಸೆಳೆತಕ್ಕೆ ಸಿಕ್ಕು ಹಾಳಾಗಿ ಬಳಕೆಗೆ ಅನುಪಯುಕ್ತವಾಗಿದೆ.
ತಾಲೂಕಿನಾದ್ಯಂತ ಅನೇಕ ಕಡೆ ಭೂಕುಸಿತವಾಗಿದೆ. ಭಾನ್ಕುಳಿಯಲ್ಲಿ ಭೂಮಿ ಬಿರುಕು ಬಿಟ್ಟಿದ್ದು ರಾಮಚಂದ್ರ, ಕೃಷ್ಣ, ಲಕ್ಷ್ಮಣ ಎನ್ನುವವರ ಮನೆ,ತೋಟ-ಗದ್ದೆಗಳಿಗೆ ಹಾನಿಯಾಗಿದೆ.
ಹೆಮ್ಮನಬೈಲ್ ಸಂತೃಸ್ತರನ್ನು ಹಳ್ಳಿಬೈಲ್ ಹೈಸ್ಕೂಲ್‍ಗೆ ಸ್ಥಳಾಂತರಿಸಲಾಗಿದೆ. ಕಿಲವಳ್ಳಿಯ ಒಂದು ಕುಟುಂಬವನ್ನು ಪರಊರಿನ ಅವರ ಸಂಬಂಧಿಗಳ ಮನೆಗೆ ಸೇರಿಸಲಾಗಿದೆ.
ಅಕ್ಕುಂಜಿ, ಕಲ್ಯಾಣಪುರಗಳ ಸಂತೃಸ್ತರು ಇಂದು ಬೆಳಿಗ್ಗೆ ಮನೆ ಸೇರಿದ್ದಾರೆ. ಈ ಸಂತೃಸ್ತರೊಂದಿಗೆ ನಿಂತು ಸಹರಿಸಿದ್ದ ತಾ.ಪಂ. ಸದಸ್ಯ ನಾಶಿರ್‍ಖಾನ್ ಇಂದು ಬಕ್ರೀದ್ ಅಂಗವಾಗಿ ಸಂತೃಸ್ತರಿಗೆ ಸಿಹಿವಿತರಿಸಿ,ಸಂತೃಸ್ತರ ಕೇಂದ್ರದಿಂದ ಅವರನ್ನು ಬೀಳ್ಕೊಟ್ಟರು. ಸಂತ್ರಸ್ತರಿಗೆ ನಿರೀಕ್ಷೆ ಮೀರಿ ನೆರವು, ಸಹಾಯ, ಸಹಕಾರ ದೊರೆತಿರುವ ಮಾಹಿತಿ ಲಭ್ಯವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *