ಕಾಂಗ್ರೆಸ್‍ನ ಬಲಭೀಮ ಭೀಮಣ್ಣ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಿಸರ್ಜನೆಯಾಗುತ್ತದೆ. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಕಾಂಗ್ರೆಸ್ ಅಧ್ಯಕ್ಷತೆಯಿಂದ ಹೊರನಡೆಯುತ್ತಾರೆ ಎನ್ನಲಾಗುತಿದ್ದ ಸಂದರ್ಭದಲ್ಲೇ ಭೀಮಣ್ಣ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ.
ಭೀಮಣ್ಣ ನಾಯ್ಕ ಎಸ್. ಬಂಗಾರಪ್ಪ ಗರಡಿಯ ನಾಯಕ. ಬಂಗಾರಪ್ಪನವರ ಅವಧಿಯಲ್ಲೇ ಭೀಮಣ್ಣರನ್ನು ಶಾಸಕ, ಸಂಸದ ಮಾಡಬೇಕೆಂದಿದ್ದ ಬಂಗಾರಪ್ಪ ಕನಸು ಕೊನೆಗೂ ನನಸಾಗಲೇ ಇಲ್ಲ. ಆದರೆ ಭೀಮಣ್ಣ ನಾಯ್ಕ ರಾಜಕಾರಣ,ಸಮಾಜಸೇವೆಯಿಂದ ಹಿಂದೆ ಸರಿದಿಲ್ಲ. ಶಿರಸಿ ಕ್ಷೇತ್ರ, ಉತ್ತರ ಕನ್ನಡ ಜಿಲ್ಲೆಯಲ್ಲಿ ದಾನಶೂರನೆಂದೇ ಹೆಸರುಗಳಿಸಿರುವ ಭೀಮಣ್ಣ ನಾಯ್ಕ ಒಮ್ಮೆ ಸಮಾಜವಾದಿಪಕ್ಷದಿಂದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದು ಬಿಟ್ಟರೆ ಉಳಿದ ಅವಧಿಯಲ್ಲಿ ಅವರದು ಪಕ್ಷದ ನೇತೃತ್ವ, ಸಂಘಟನೆ.
ಉದ್ಯಮಿಯಾಗಿ ಹೆಸರು ಮಾಡಿರುವ ಭೀಮಣ್ಣ ಬಂಗಾರಪ್ಪನವರ ಕೊನೆ ದಿನಗಳಲ್ಲಿ ಅವರನ್ನು ಬಿಟ್ಟು ಕಾಂಗ್ರೆಸ್ ಸೇರಿದವರು. ಆದರೆ ಕಾಂಗ್ರೆಸ್ ಅವರನ್ನು ಬಳಸಿಕೊಂಡು ಒಮ್ಮೆ ಶಿರಸಿ ಕ್ಷೇತ್ರದ ವಿಧಾನಸಭಾ ಅವಕಾಶ ನೀಡಿದ್ದು ಬಿಟ್ಟರೆ ಕಾಂಗ್ರೆಸ್ ನಿಂದ ಭೀಮಣ್ಣ ಪಡೆದುಕೊಂಡಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು.
ಈಗ ಭೀಮಣ್ಣ ಕಾಂಗ್ರೆಸ್ ಮುಖಂಡರಾಗಿ,ಸಾಮಾಜಿಕ ಕಾರ್ಯಕರ್ತರಾಗಿ ಪ್ರವಾಹಪೀಡಿತ ಪ್ರದೇಶಗಳ ಭೇಟಿ ಮಾಡಿದ್ದಾರೆ. ಸಂತೃಸ್ತರಿಗೆ ಆಹಾರಧಾನ್ಯ, ಹಣ ನೀಡುವ ಮೂಲಕ ತಮ್ಮ ಕಳಕಳಿ ಪ್ರದರ್ಶಿಸಿದ್ದಾರೆ. ಕಾಲುಶತಮಾನಗಳಿಂದ ಜನಪ್ರತಿನಿಧಿಗಳು, ಸಚಿವರು,ಶಾಸಕರು, ಸಂಸದರು ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೇ ತಿಣಕಾಡುತ್ತಿರುವ ಸಂದರ್ಭದಲ್ಲಿ ಸರ್ಕಾರದ ನೆರವಿಲ್ಲದೆ ವೈಯಕ್ತಿಕ ನೆರವಿನ ಮೂಲಕ ಎಂದಿನಂತೆ ಭೀಮಣ್ಣ ಸಂತೃಸ್ತರು, ಸ್ಥಳಿಯರ ಗಮನ ಸೆಳೆದಿದ್ದಾರೆ.
ಪ್ರಚಾರ, ಅನುಕೂಲ, ಲಾಭಕ್ಕಾಗಿ ಸೇವೆಯ ಸೋಗುಹಾಕಿ ಪ್ರಚಾರಪಡೆಯುತ್ತಿರುವವರ ನಡುವೆ ಭೀಮಣ್ಣ ನಾಯ್ಕ ತಮ್ಮ ಸೇವೆ, ದಾನಗಳಿಂದ ಎಲ್ಲರ ಮನಸ್ಸು ಗೆದ್ದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *