ಸಾರಿಗೆ ಸಂಸ್ಥೆಸಿಬ್ಬಂದಿಗಳ ಬೆವರಿಳಿಸಿದ ಸದಸ್ಯರು

ತಾ.ಪಂ. ಸಾಮಾನ್ಯ ಸಭೆ-
ಸಾರಿಗೆ ಸಂಸ್ಥೆಸಿಬ್ಬಂದಿಗಳ
ಬೆವರಿಳಿಸಿದ ಸದಸ್ಯರು
ಸಿದ್ಧಾಪುರ ತಾಲೂಕಿನಲ್ಲಿ ಸಾರಿಗೆ ಸಂಸ್ಥೆ ಬಸ್ ಅವ್ಯವಸ್ಥೆ, ರಾತ್ರಿನಿಲುಗಡೆ ಬಸ್‍ಗಳನ್ನು ರಾತ್ರಿಯೇ ಕೊಂಡೊಯ್ಯುವುದು ಸೇರಿದಂತೆ ರಸ್ತೆಸಾರಿಗೆ ಸಂಸ್ಥೆಯ ಬೇಜವಾಬ್ಧಾರಿಗಳ ಬಗ್ಗೆ ಧ್ವನಿ ಎತ್ತಿದ ಸದಸ್ಯರು, ಮತ್ತು ಪತ್ರಕರ್ತರಿಂದಾಗಿ ವಾಯವ್ಯ ರಸ್ತೆ ಸಾರಿಗೆ ವಿಭಾಗದ ನೌಕರರು ತಲೆತಗ್ಗಿಸುವಂತಾದ ಘಟನೆ ಇಂದು ತಾಲೂಕಾ ಪಂಚಾಯತ್ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಘಟಿಸಿದೆ.
ತಾಲೂಕಿನಾದ್ಯಂತ ವಿಶೇಶವಾಗಿ ಹಾರ್ಸಿಕಟ್ಟಾ,ಹೆಗ್ಗರಣೆ ಮಾರ್ಗದಲ್ಲಿ ರಾತ್ರಿ ನಿಲುಗಡೆಯ ಬಸ್ ಗಳನ್ನು ರಾತ್ರಿಯೇ ತಾಲೂಕು ಕೇಂದ್ರಕ್ಕೆ ಮರಳಿ ತರಲಾಗುತ್ತಿದೆ, ಇದರಿಂದ ಸ್ಥಳಿಯರು, ವಿದ್ಯಾರ್ಥಿಗಳು,ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂದು ಪತ್ರಕರ್ತರು ಸಭೆಯ ಗಮನಕ್ಕೆ ತಂದರು.
ಅದಕ್ಕೆ ಪ್ರತಿಕ್ರೀಯಿಸಿದ ಡಿಪೋ ವ್ಯವಸ್ಥಾಪಕ ರವೀಂದ್ರ ಉತ್ತರಿಸಲು ತಡವರಿಸಿದರು. ನಂತರ ಸಂಬಂಧಿಸಿದ ಅಧಿಕಾರಿಯನ್ನು ಸಭೆಗೆ ಕರೆಸಬೇಕೆಂದು ಪಟ್ಟುಹಿಡಿದಾಗ ಸಾರಿಗೆ ನಿಯಂತ್ರಣಾಧಿಕಾರಿಗಳು ಸರಿಯಾದ ಉತ್ತರ ನೀಡಲಿಲ್ಲ. ಇದೇ ಸಮಯಕ್ಕೆ ಮಾತು ಪ್ರಾರಂಭಿಸಿದ ನಾಶಿರ್ಖಾನ್ ಕೆ.ಎಸ್.ಆರ್.ಟಿ.ಸಿ. ಬಗ್ಗೆ ಮಾತನಾಡಲು ನಾಚಿಕೆಯಾಗಿ ಸುಮ್ಮನೆ ಕೂತಿದ್ದೆ ವ್ಯವಸ್ಥೆಯೂ ಸರಿಯಾಗುವುದಿಲ್ಲ, ಅಧಿಕಾರಿಗಳೂ ಸರಿಯಾಗುವುದಿಲ್ಲ. ಈ ಸಭೆ ಮಾಡಿಯೂ ಉಪಯೋಗವಿಲ್ಲ ಎಂದು ಬೇಸರಿಸಿದರು. ಆಗ ಸಾರಿಗೆ ಅದಾಲತ್ ಮಾಡುವ ಮೂಲಕ ಸಾರಿಗೆ ಅವ್ಯವಸ್ಥೆ, ಗೊಂದಲ ಬಗೆಹರಿಸಲು ಸರ್ವಾನುಮತದ ಠರಾವು ಸ್ವೀಕರಿಸಲಾಯಿತು. ಹಾಲ್ಟಿಂಗ್ ಬಸ್ ಅಂದೇ ಮರಳುತ್ತಿರುವ ತೊಂದರೆಗೆ ಕಾರಣವಾದವರ ಮೇಲೆ ಕ್ರಮಜರುಗಿಸಿ,ಮಾಹಿತಿ ನೀಡುವಂತೆ ಆಗ್ರಹಿಸಲಾಯಿತು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *