weekend tour- ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ

ಶೀರಲಗದ್ದೆಗೆ ಬೇಕು ಸರ್ವಋತು ರಸ್ತೆ,

ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ
ಜಲಪಾತಗಳ ಜಿಲ್ಲೆ ಉತ್ತರಕನ್ನಡದ ಸಿದ್ಧಾಪುರದ ಶೀರಲಗದ್ದೆ ಜಲಪಾತಕ್ಕೆ ಹೆಚ್ಚಿನ ಮಹತ್ವ, ಆಕರ್ಷಣೆ ಬರುತಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗಳು ಈ ಜಲಪಾತಕ್ಕೆ ಭೇಟಿ ನೀಡುತ್ತಿರುವುದು ಸಾಕ್ಷಿಯಾಗಿದೆ.
ಶಿರಸಿ-ಸಿದ್ಧಾಪುರ ರಾಜ್ಯ ಹೆದ್ದಾರಿಯಲ್ಲಿ ಸಿದ್ಧಾಪುರದಿಂದ 16 ಕಿ,ಮೀ ದೂರ ಮತ್ತು ಶಿರಸಿಯಿಂದ 22 ಕಿ.ಮೀ ದೂರದ ಶೀರಲಗದ್ದೆ ಜಲಪಾತ ವೀಕ್ಷಣೆ ಸರಳ ಮತ್ತು ಸುಲಭ ಇರುವುದರಿಂದ ರಾಜ್ಯ ಪರರಾಜ್ಯಗಳ ಜನರು ಈ ಜಲಪಾತಕ್ಕೆ ಭೇಟಿ ನೀಡಿ ನೀರು,ನಿಸರ್ಗದ ಸೊಬಗನ್ನು ಸವಿಯುತ್ತಿದ್ದಾರೆ.
ರಾಜ್ಯಮುಖ್ಯರಸ್ತೆಯಿಂದ ಕೇವಲ 2 ಕಿ.ಮೀ ದೂರದ ಅರಣ್ಯದ ಮಧ್ಯೆ ಹರಿಯುತ್ತಿರುವ ಈ ಜಲಧಾರೆ ಇಷ್ಟುವರ್ಷ ಎಲೆಮರೆಯ ಕಾಯಿಯಂತಿದ್ದುದೇ ಆಶ್ಚರ್ಯದ ವಿಷಯ. ಚಂಡ ಸೇರಿದಂತೆ ಕೆಲವು ಕನ್ನಡ ಚಿತ್ರಗಳ ಚಿತ್ರೀಕರಣ ಈ ಜಲಪಾತದಲ್ಲಾದರೂ ಇದಕ್ಕೆ ಪ್ರಚಾರ,ಪ್ರಸಾರ ದೊರೆತದ್ದು ಕಡಿಮೆ.
ಸ್ಥಳಿಯ ನಾರಾಯಣ ನಾಯ್ಕ ಎನ್ನುವ ಯುವಕ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಈ ಜಲಪಾತದ ಪ್ರಚಾರ ಮಾಡಿದ ನಂತರ ಜನಾಕರ್ಷಣೆ ವೃದ್ಧಿಸಿತಾದರೂ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೊರ್ಟಲ್ ಕೊಟ್ಟ ಪ್ರಚಾರದಿಂದ ಈ ಜಲಪಾತಕ್ಕೆ ಹೆಚ್ಚಿನ ಪ್ರಚಾರ,ಜನಪ್ರೀಯತೆ ದೊರೆತಿದೆ.
ಹೀಗೆ ಎಲೆಮರೆಯ ಕಾಯಿಯಂತಿದ್ದ ಶೀರಲಗದ್ದೆ ಜಲಪಾತ ಕಾಳೇನಳ್ಳಿಗೆ ಸಮೀಪ ಸುಲಭ ಪ್ರಯಾಣಕ್ಕೆ ಸಿಗುವ ಅಪರೂಪದ ನೈಸರ್ಗಿಕ ಸೌಂದರ್ಯವಾದರೂ ಇಲ್ಲಿಗೆ ತೆರಳಲು ಸೂಕ್ತ ಸರ್ವಋತು ರಸ್ತೆಯಿಲ್ಲ.
ಈ ಜಲಪಾತಕ್ಕೆ ವ್ಯವಸ್ಥಿತ ರಸ್ತೆಮಾಡಿ ಎಂದು ಈ ಭಾಗದ ಜನಪ್ರತಿನಿಧಿಗಳು ಸಾಮಾಜಿಕ ಮುಖಂಡರಾದ ನಾರಾಯಣ,ಅಶೋಕ ನಾಯ್ಕ,ಗೌರೀಶ್ ನಾಯ್ಕ, ವಸಂತ ಹೆಗಡೆ, ಸುಬ್ರಾಯ ಮತ್ತೀಹಳ್ಳಿ ಸೇರಿದ ಅನೇಕರು ಸ್ಥಳಿಯ ಶಾಸಕರು, ಸಂಸದರನ್ನು ಆಗ್ರಹಿಸಿದ್ದರೂ ಕಳೆದ ಕೆಲವು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯ ಕಡೆ ಬೊಟ್ಟುಮಾಡುತ್ತಿರುವ ಇಲ್ಲಿಯ ಸಂಸದರು, ಶಾಸಕರು ಈ ಜಲಪಾತಕ್ಕೆ ‘ಬೇಡ’ ದವರಾಗಿದ್ದಾರೆ.
ಇತ್ತೀಚೆಗೆ ಈ ಜಲಪಾತಕ್ಕೆ ಭೇಟಿ ನೀಡಿದ ಸಿದ್ಧಾಪುರ ಪತ್ರಕರ್ತರ ತಂಡ ಇಷ್ಟು ಸಮೀಪದ ಅದ್ಭುತ ಜಲಪಾತ ಪ್ರಚಾರ,ಅಭಿವೃದ್ಧಿಯ ವಿಷಯದಲ್ಲಿ ಕತ್ತಲೆಯಲ್ಲಿರುವುದರಿಂದ ಬೇಸರ ವ್ಯಕ್ತಪಡಿಸಿ ಈ ಜಲಪಾತದ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳ ಪೂರೈಕೆಗೆ ಅಗತ್ಯ ಒತ್ತಡ, ಪ್ರಚಾರ ನೀಡುವುದಾಗಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಸಚಿವರಾಗಿದ್ದ ಹಿಂದಿನ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಕಣ್ಣಿಗೆ ಬೀಳದೆ, ಗಮನ ಸೆಳೆಯದ ಈ ಪ್ರೇಕ್ಷಣೀಯ ಸ್ಥಳದ ಅಭಿವೃದ್ಧಿ ಬಗ್ಗೆ ಈಗಿನ ರಾಜ್ಯ, ಕೇಂದ್ರ ಸರ್ಕಾರಗಳು ಕಣ್ಣು ತರೆಯಬಹುದೆ ಎನ್ನುವ ನಿರೀಕ್ಷೆ ಸ್ಥಳೀಯರಲ್ಲಿದೆ.
ರಸ್ತೆ, ವೀಕ್ಷಣಾಗೋಪುರ, ಪಾರ್ಕಿಂಗ್, ಊಟೋಪಚಾರಕ್ಕೆ ಅಗತ್ಯವಾಗಿ ಬೇಕಾದ ಹೋಟೆಲ್ ನಿರ್ಮಾಣವಾದರೆ ಸಿದ್ಧಾಪುರದ ಈ ಜಲಪಾತ ಪ್ರಪಂಚದ ಪ್ರಕೃತಿಪ್ರೀಯರನ್ನು ಆಕರ್ಷಿಸುವಲ್ಲಿ ಅನುಮಾನಗಳಿಲ್ಲ. ಆಸಕ್ತ ಚಾರಣ ತಜ್ಞರು ಇಲ್ಲಿ ಜಲಕ್ರೀಡೆ,ಜಲಸಾಹಸ ಚಾರಣಗಳನ್ನು ಆಯೋಜಿಸುವಂತೆ ಮಾಡಿ ಸ್ಥಳಿಯರು, ಪ್ರವಾಸಿಗಳಿಗೆ ಅನುಕೂಲಮಾಡಿಕೊಡುವ ಹಿನ್ನೆಲೆಯಲ್ಲಿ ಸ್ಥಳಿಯ ಆಡಳಿತ ಪ್ರಯತ್ನಿಸಬೇಕಾಗಿದೆ. ವರ್ಷದ ಕನಿಷ್ಟ ಆರು ತಿಂಗಳು ತುಂಬಿಹರಿಯುವ ಕಾರಗೋಡು ಹೊಳೆಯ ಈ ಶೀರಲಗದ್ದೆ ಜಲಪಾತ ಸಿದ್ಧಾಪುರದ ಪ್ರಮುಖ ಕೆಲವು ಪ್ರವಾಸಿತಾಣಗಳಲ್ಲಿ ಒಂದಾಗುವ ಸಾಧ್ಯತೆಗಳಂತೂ ಇವೆ.
ನಿಸರ್ಗ ಸೌಂದರ್ಯದ ಈ ಜಲಪಾತ ತೆರೆಮರೆಯಲ್ಲಿರುವುದೇ ಆಶ್ಚರ್ಯ,ಸ್ಥಳಿಯ ಜವಾಬ್ಧಾರಿ ವ್ಯಕ್ತಿಗಳು,ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಆಸಕ್ತಿವಹಿಸಿದರೆ ತಾಲೂಕಿನ ಈ ಜಲಪಾತ ಒಂದು ಪ್ರವಾಸಿತಾಣವಾಗುವುದಂತೂ ನಿಶ್ಚಿತ.ಗುಣಮಟ್ಟದ ಸರ್ವಋತು ರಸ್ತೆ ಇಲ್ಲಿಯ ಮೊದಲ ಆದ್ಯತೆ.- ರವೀಂದ್ರಭಟ್,ಗಂಗಾಧರ ಕೊಳಗಿ, ಬರಹಗಾರರು,ಸಿದ್ಧಾಪುರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *