weekend tour- ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ

ಶೀರಲಗದ್ದೆಗೆ ಬೇಕು ಸರ್ವಋತು ರಸ್ತೆ,

ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ
ಜಲಪಾತಗಳ ಜಿಲ್ಲೆ ಉತ್ತರಕನ್ನಡದ ಸಿದ್ಧಾಪುರದ ಶೀರಲಗದ್ದೆ ಜಲಪಾತಕ್ಕೆ ಹೆಚ್ಚಿನ ಮಹತ್ವ, ಆಕರ್ಷಣೆ ಬರುತಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗಳು ಈ ಜಲಪಾತಕ್ಕೆ ಭೇಟಿ ನೀಡುತ್ತಿರುವುದು ಸಾಕ್ಷಿಯಾಗಿದೆ.
ಶಿರಸಿ-ಸಿದ್ಧಾಪುರ ರಾಜ್ಯ ಹೆದ್ದಾರಿಯಲ್ಲಿ ಸಿದ್ಧಾಪುರದಿಂದ 16 ಕಿ,ಮೀ ದೂರ ಮತ್ತು ಶಿರಸಿಯಿಂದ 22 ಕಿ.ಮೀ ದೂರದ ಶೀರಲಗದ್ದೆ ಜಲಪಾತ ವೀಕ್ಷಣೆ ಸರಳ ಮತ್ತು ಸುಲಭ ಇರುವುದರಿಂದ ರಾಜ್ಯ ಪರರಾಜ್ಯಗಳ ಜನರು ಈ ಜಲಪಾತಕ್ಕೆ ಭೇಟಿ ನೀಡಿ ನೀರು,ನಿಸರ್ಗದ ಸೊಬಗನ್ನು ಸವಿಯುತ್ತಿದ್ದಾರೆ.
ರಾಜ್ಯಮುಖ್ಯರಸ್ತೆಯಿಂದ ಕೇವಲ 2 ಕಿ.ಮೀ ದೂರದ ಅರಣ್ಯದ ಮಧ್ಯೆ ಹರಿಯುತ್ತಿರುವ ಈ ಜಲಧಾರೆ ಇಷ್ಟುವರ್ಷ ಎಲೆಮರೆಯ ಕಾಯಿಯಂತಿದ್ದುದೇ ಆಶ್ಚರ್ಯದ ವಿಷಯ. ಚಂಡ ಸೇರಿದಂತೆ ಕೆಲವು ಕನ್ನಡ ಚಿತ್ರಗಳ ಚಿತ್ರೀಕರಣ ಈ ಜಲಪಾತದಲ್ಲಾದರೂ ಇದಕ್ಕೆ ಪ್ರಚಾರ,ಪ್ರಸಾರ ದೊರೆತದ್ದು ಕಡಿಮೆ.
ಸ್ಥಳಿಯ ನಾರಾಯಣ ನಾಯ್ಕ ಎನ್ನುವ ಯುವಕ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಈ ಜಲಪಾತದ ಪ್ರಚಾರ ಮಾಡಿದ ನಂತರ ಜನಾಕರ್ಷಣೆ ವೃದ್ಧಿಸಿತಾದರೂ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೊರ್ಟಲ್ ಕೊಟ್ಟ ಪ್ರಚಾರದಿಂದ ಈ ಜಲಪಾತಕ್ಕೆ ಹೆಚ್ಚಿನ ಪ್ರಚಾರ,ಜನಪ್ರೀಯತೆ ದೊರೆತಿದೆ.
ಹೀಗೆ ಎಲೆಮರೆಯ ಕಾಯಿಯಂತಿದ್ದ ಶೀರಲಗದ್ದೆ ಜಲಪಾತ ಕಾಳೇನಳ್ಳಿಗೆ ಸಮೀಪ ಸುಲಭ ಪ್ರಯಾಣಕ್ಕೆ ಸಿಗುವ ಅಪರೂಪದ ನೈಸರ್ಗಿಕ ಸೌಂದರ್ಯವಾದರೂ ಇಲ್ಲಿಗೆ ತೆರಳಲು ಸೂಕ್ತ ಸರ್ವಋತು ರಸ್ತೆಯಿಲ್ಲ.
ಈ ಜಲಪಾತಕ್ಕೆ ವ್ಯವಸ್ಥಿತ ರಸ್ತೆಮಾಡಿ ಎಂದು ಈ ಭಾಗದ ಜನಪ್ರತಿನಿಧಿಗಳು ಸಾಮಾಜಿಕ ಮುಖಂಡರಾದ ನಾರಾಯಣ,ಅಶೋಕ ನಾಯ್ಕ,ಗೌರೀಶ್ ನಾಯ್ಕ, ವಸಂತ ಹೆಗಡೆ, ಸುಬ್ರಾಯ ಮತ್ತೀಹಳ್ಳಿ ಸೇರಿದ ಅನೇಕರು ಸ್ಥಳಿಯ ಶಾಸಕರು, ಸಂಸದರನ್ನು ಆಗ್ರಹಿಸಿದ್ದರೂ ಕಳೆದ ಕೆಲವು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯ ಕಡೆ ಬೊಟ್ಟುಮಾಡುತ್ತಿರುವ ಇಲ್ಲಿಯ ಸಂಸದರು, ಶಾಸಕರು ಈ ಜಲಪಾತಕ್ಕೆ ‘ಬೇಡ’ ದವರಾಗಿದ್ದಾರೆ.
ಇತ್ತೀಚೆಗೆ ಈ ಜಲಪಾತಕ್ಕೆ ಭೇಟಿ ನೀಡಿದ ಸಿದ್ಧಾಪುರ ಪತ್ರಕರ್ತರ ತಂಡ ಇಷ್ಟು ಸಮೀಪದ ಅದ್ಭುತ ಜಲಪಾತ ಪ್ರಚಾರ,ಅಭಿವೃದ್ಧಿಯ ವಿಷಯದಲ್ಲಿ ಕತ್ತಲೆಯಲ್ಲಿರುವುದರಿಂದ ಬೇಸರ ವ್ಯಕ್ತಪಡಿಸಿ ಈ ಜಲಪಾತದ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳ ಪೂರೈಕೆಗೆ ಅಗತ್ಯ ಒತ್ತಡ, ಪ್ರಚಾರ ನೀಡುವುದಾಗಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಸಚಿವರಾಗಿದ್ದ ಹಿಂದಿನ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಕಣ್ಣಿಗೆ ಬೀಳದೆ, ಗಮನ ಸೆಳೆಯದ ಈ ಪ್ರೇಕ್ಷಣೀಯ ಸ್ಥಳದ ಅಭಿವೃದ್ಧಿ ಬಗ್ಗೆ ಈಗಿನ ರಾಜ್ಯ, ಕೇಂದ್ರ ಸರ್ಕಾರಗಳು ಕಣ್ಣು ತರೆಯಬಹುದೆ ಎನ್ನುವ ನಿರೀಕ್ಷೆ ಸ್ಥಳೀಯರಲ್ಲಿದೆ.
ರಸ್ತೆ, ವೀಕ್ಷಣಾಗೋಪುರ, ಪಾರ್ಕಿಂಗ್, ಊಟೋಪಚಾರಕ್ಕೆ ಅಗತ್ಯವಾಗಿ ಬೇಕಾದ ಹೋಟೆಲ್ ನಿರ್ಮಾಣವಾದರೆ ಸಿದ್ಧಾಪುರದ ಈ ಜಲಪಾತ ಪ್ರಪಂಚದ ಪ್ರಕೃತಿಪ್ರೀಯರನ್ನು ಆಕರ್ಷಿಸುವಲ್ಲಿ ಅನುಮಾನಗಳಿಲ್ಲ. ಆಸಕ್ತ ಚಾರಣ ತಜ್ಞರು ಇಲ್ಲಿ ಜಲಕ್ರೀಡೆ,ಜಲಸಾಹಸ ಚಾರಣಗಳನ್ನು ಆಯೋಜಿಸುವಂತೆ ಮಾಡಿ ಸ್ಥಳಿಯರು, ಪ್ರವಾಸಿಗಳಿಗೆ ಅನುಕೂಲಮಾಡಿಕೊಡುವ ಹಿನ್ನೆಲೆಯಲ್ಲಿ ಸ್ಥಳಿಯ ಆಡಳಿತ ಪ್ರಯತ್ನಿಸಬೇಕಾಗಿದೆ. ವರ್ಷದ ಕನಿಷ್ಟ ಆರು ತಿಂಗಳು ತುಂಬಿಹರಿಯುವ ಕಾರಗೋಡು ಹೊಳೆಯ ಈ ಶೀರಲಗದ್ದೆ ಜಲಪಾತ ಸಿದ್ಧಾಪುರದ ಪ್ರಮುಖ ಕೆಲವು ಪ್ರವಾಸಿತಾಣಗಳಲ್ಲಿ ಒಂದಾಗುವ ಸಾಧ್ಯತೆಗಳಂತೂ ಇವೆ.
ನಿಸರ್ಗ ಸೌಂದರ್ಯದ ಈ ಜಲಪಾತ ತೆರೆಮರೆಯಲ್ಲಿರುವುದೇ ಆಶ್ಚರ್ಯ,ಸ್ಥಳಿಯ ಜವಾಬ್ಧಾರಿ ವ್ಯಕ್ತಿಗಳು,ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಆಸಕ್ತಿವಹಿಸಿದರೆ ತಾಲೂಕಿನ ಈ ಜಲಪಾತ ಒಂದು ಪ್ರವಾಸಿತಾಣವಾಗುವುದಂತೂ ನಿಶ್ಚಿತ.ಗುಣಮಟ್ಟದ ಸರ್ವಋತು ರಸ್ತೆ ಇಲ್ಲಿಯ ಮೊದಲ ಆದ್ಯತೆ.- ರವೀಂದ್ರಭಟ್,ಗಂಗಾಧರ ಕೊಳಗಿ, ಬರಹಗಾರರು,ಸಿದ್ಧಾಪುರ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *