weekend tour- ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ

ಶೀರಲಗದ್ದೆಗೆ ಬೇಕು ಸರ್ವಋತು ರಸ್ತೆ,

ತೆರೆಮರೆಯ ತಾಣ ಜನಾಕರ್ಷಣೆಯ ಕೇಂದ್ರ
ಜಲಪಾತಗಳ ಜಿಲ್ಲೆ ಉತ್ತರಕನ್ನಡದ ಸಿದ್ಧಾಪುರದ ಶೀರಲಗದ್ದೆ ಜಲಪಾತಕ್ಕೆ ಹೆಚ್ಚಿನ ಮಹತ್ವ, ಆಕರ್ಷಣೆ ಬರುತಿದ್ದು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರವಾಸಿಗಳು ಈ ಜಲಪಾತಕ್ಕೆ ಭೇಟಿ ನೀಡುತ್ತಿರುವುದು ಸಾಕ್ಷಿಯಾಗಿದೆ.
ಶಿರಸಿ-ಸಿದ್ಧಾಪುರ ರಾಜ್ಯ ಹೆದ್ದಾರಿಯಲ್ಲಿ ಸಿದ್ಧಾಪುರದಿಂದ 16 ಕಿ,ಮೀ ದೂರ ಮತ್ತು ಶಿರಸಿಯಿಂದ 22 ಕಿ.ಮೀ ದೂರದ ಶೀರಲಗದ್ದೆ ಜಲಪಾತ ವೀಕ್ಷಣೆ ಸರಳ ಮತ್ತು ಸುಲಭ ಇರುವುದರಿಂದ ರಾಜ್ಯ ಪರರಾಜ್ಯಗಳ ಜನರು ಈ ಜಲಪಾತಕ್ಕೆ ಭೇಟಿ ನೀಡಿ ನೀರು,ನಿಸರ್ಗದ ಸೊಬಗನ್ನು ಸವಿಯುತ್ತಿದ್ದಾರೆ.
ರಾಜ್ಯಮುಖ್ಯರಸ್ತೆಯಿಂದ ಕೇವಲ 2 ಕಿ.ಮೀ ದೂರದ ಅರಣ್ಯದ ಮಧ್ಯೆ ಹರಿಯುತ್ತಿರುವ ಈ ಜಲಧಾರೆ ಇಷ್ಟುವರ್ಷ ಎಲೆಮರೆಯ ಕಾಯಿಯಂತಿದ್ದುದೇ ಆಶ್ಚರ್ಯದ ವಿಷಯ. ಚಂಡ ಸೇರಿದಂತೆ ಕೆಲವು ಕನ್ನಡ ಚಿತ್ರಗಳ ಚಿತ್ರೀಕರಣ ಈ ಜಲಪಾತದಲ್ಲಾದರೂ ಇದಕ್ಕೆ ಪ್ರಚಾರ,ಪ್ರಸಾರ ದೊರೆತದ್ದು ಕಡಿಮೆ.
ಸ್ಥಳಿಯ ನಾರಾಯಣ ನಾಯ್ಕ ಎನ್ನುವ ಯುವಕ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳಲ್ಲಿ ಈ ಜಲಪಾತದ ಪ್ರಚಾರ ಮಾಡಿದ ನಂತರ ಜನಾಕರ್ಷಣೆ ವೃದ್ಧಿಸಿತಾದರೂ ಸಮಾಜಮುಖಿ ಪತ್ರಿಕೆ ಮತ್ತು ನ್ಯೂಸ್ ಪೊರ್ಟಲ್ ಕೊಟ್ಟ ಪ್ರಚಾರದಿಂದ ಈ ಜಲಪಾತಕ್ಕೆ ಹೆಚ್ಚಿನ ಪ್ರಚಾರ,ಜನಪ್ರೀಯತೆ ದೊರೆತಿದೆ.
ಹೀಗೆ ಎಲೆಮರೆಯ ಕಾಯಿಯಂತಿದ್ದ ಶೀರಲಗದ್ದೆ ಜಲಪಾತ ಕಾಳೇನಳ್ಳಿಗೆ ಸಮೀಪ ಸುಲಭ ಪ್ರಯಾಣಕ್ಕೆ ಸಿಗುವ ಅಪರೂಪದ ನೈಸರ್ಗಿಕ ಸೌಂದರ್ಯವಾದರೂ ಇಲ್ಲಿಗೆ ತೆರಳಲು ಸೂಕ್ತ ಸರ್ವಋತು ರಸ್ತೆಯಿಲ್ಲ.
ಈ ಜಲಪಾತಕ್ಕೆ ವ್ಯವಸ್ಥಿತ ರಸ್ತೆಮಾಡಿ ಎಂದು ಈ ಭಾಗದ ಜನಪ್ರತಿನಿಧಿಗಳು ಸಾಮಾಜಿಕ ಮುಖಂಡರಾದ ನಾರಾಯಣ,ಅಶೋಕ ನಾಯ್ಕ,ಗೌರೀಶ್ ನಾಯ್ಕ, ವಸಂತ ಹೆಗಡೆ, ಸುಬ್ರಾಯ ಮತ್ತೀಹಳ್ಳಿ ಸೇರಿದ ಅನೇಕರು ಸ್ಥಳಿಯ ಶಾಸಕರು, ಸಂಸದರನ್ನು ಆಗ್ರಹಿಸಿದ್ದರೂ ಕಳೆದ ಕೆಲವು ವರ್ಷಗಳಿಂದ ಪ್ರವಾಸೋದ್ಯಮ ಇಲಾಖೆಯ ಕಡೆ ಬೊಟ್ಟುಮಾಡುತ್ತಿರುವ ಇಲ್ಲಿಯ ಸಂಸದರು, ಶಾಸಕರು ಈ ಜಲಪಾತಕ್ಕೆ ‘ಬೇಡ’ ದವರಾಗಿದ್ದಾರೆ.
ಇತ್ತೀಚೆಗೆ ಈ ಜಲಪಾತಕ್ಕೆ ಭೇಟಿ ನೀಡಿದ ಸಿದ್ಧಾಪುರ ಪತ್ರಕರ್ತರ ತಂಡ ಇಷ್ಟು ಸಮೀಪದ ಅದ್ಭುತ ಜಲಪಾತ ಪ್ರಚಾರ,ಅಭಿವೃದ್ಧಿಯ ವಿಷಯದಲ್ಲಿ ಕತ್ತಲೆಯಲ್ಲಿರುವುದರಿಂದ ಬೇಸರ ವ್ಯಕ್ತಪಡಿಸಿ ಈ ಜಲಪಾತದ ಅಭಿವೃದ್ಧಿ, ಮೂಲಭೂತ ಸೌಲಭ್ಯಗಳ ಪೂರೈಕೆಗೆ ಅಗತ್ಯ ಒತ್ತಡ, ಪ್ರಚಾರ ನೀಡುವುದಾಗಿ ತಿಳಿಸಿದ್ದಾರೆ.
ಪ್ರವಾಸೋದ್ಯಮ ಸಚಿವರಾಗಿದ್ದ ಹಿಂದಿನ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಕಣ್ಣಿಗೆ ಬೀಳದೆ, ಗಮನ ಸೆಳೆಯದ ಈ ಪ್ರೇಕ್ಷಣೀಯ ಸ್ಥಳದ ಅಭಿವೃದ್ಧಿ ಬಗ್ಗೆ ಈಗಿನ ರಾಜ್ಯ, ಕೇಂದ್ರ ಸರ್ಕಾರಗಳು ಕಣ್ಣು ತರೆಯಬಹುದೆ ಎನ್ನುವ ನಿರೀಕ್ಷೆ ಸ್ಥಳೀಯರಲ್ಲಿದೆ.
ರಸ್ತೆ, ವೀಕ್ಷಣಾಗೋಪುರ, ಪಾರ್ಕಿಂಗ್, ಊಟೋಪಚಾರಕ್ಕೆ ಅಗತ್ಯವಾಗಿ ಬೇಕಾದ ಹೋಟೆಲ್ ನಿರ್ಮಾಣವಾದರೆ ಸಿದ್ಧಾಪುರದ ಈ ಜಲಪಾತ ಪ್ರಪಂಚದ ಪ್ರಕೃತಿಪ್ರೀಯರನ್ನು ಆಕರ್ಷಿಸುವಲ್ಲಿ ಅನುಮಾನಗಳಿಲ್ಲ. ಆಸಕ್ತ ಚಾರಣ ತಜ್ಞರು ಇಲ್ಲಿ ಜಲಕ್ರೀಡೆ,ಜಲಸಾಹಸ ಚಾರಣಗಳನ್ನು ಆಯೋಜಿಸುವಂತೆ ಮಾಡಿ ಸ್ಥಳಿಯರು, ಪ್ರವಾಸಿಗಳಿಗೆ ಅನುಕೂಲಮಾಡಿಕೊಡುವ ಹಿನ್ನೆಲೆಯಲ್ಲಿ ಸ್ಥಳಿಯ ಆಡಳಿತ ಪ್ರಯತ್ನಿಸಬೇಕಾಗಿದೆ. ವರ್ಷದ ಕನಿಷ್ಟ ಆರು ತಿಂಗಳು ತುಂಬಿಹರಿಯುವ ಕಾರಗೋಡು ಹೊಳೆಯ ಈ ಶೀರಲಗದ್ದೆ ಜಲಪಾತ ಸಿದ್ಧಾಪುರದ ಪ್ರಮುಖ ಕೆಲವು ಪ್ರವಾಸಿತಾಣಗಳಲ್ಲಿ ಒಂದಾಗುವ ಸಾಧ್ಯತೆಗಳಂತೂ ಇವೆ.
ನಿಸರ್ಗ ಸೌಂದರ್ಯದ ಈ ಜಲಪಾತ ತೆರೆಮರೆಯಲ್ಲಿರುವುದೇ ಆಶ್ಚರ್ಯ,ಸ್ಥಳಿಯ ಜವಾಬ್ಧಾರಿ ವ್ಯಕ್ತಿಗಳು,ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಆಸಕ್ತಿವಹಿಸಿದರೆ ತಾಲೂಕಿನ ಈ ಜಲಪಾತ ಒಂದು ಪ್ರವಾಸಿತಾಣವಾಗುವುದಂತೂ ನಿಶ್ಚಿತ.ಗುಣಮಟ್ಟದ ಸರ್ವಋತು ರಸ್ತೆ ಇಲ್ಲಿಯ ಮೊದಲ ಆದ್ಯತೆ.- ರವೀಂದ್ರಭಟ್,ಗಂಗಾಧರ ಕೊಳಗಿ, ಬರಹಗಾರರು,ಸಿದ್ಧಾಪುರ

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *