ನಾಳೆ ಏನೇನು?

ನಾಳೆ ಕರೆಂಟಿಲ್ಲ-
ಹೆಸ್ಕಾಂ ಸಿದ್ಧಾಪುರ ಉಪವಿಭಾಗ ಮತ್ತು ಶಿರಸಿ ವಿಭಾಗದ ತುರ್ತು ದುರಸ್ಥಿ ಹಿನ್ನೆಲೆಯಲ್ಲಿ ಆ.22 ಗುರುವಾರ ಮುಂಜಾನೆ 8 ರಿಂದ ಸಾಯಂಕಾಲ 4ರ ವರೆಗೆ ತಾಲೂಕಿನಾದ್ಯಂತ ವಿದ್ಯುತ್ ನಿಲುಗಡೆಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ನಾಳೆ ಬಾಲಭವನದಲ್ಲಿ ಎ.ಜಿ.ಪೈ ಶೃಂದ್ಧಾಂಜಲಿ ಸಭೆ
ಸಿದ್ಧಾಪುರ,ಆ.21- ಎ.ಜಿ.ಪೈ ಮಳಗಿ ಇತ್ತೀಚೆಗೆ ನಿಧನರಾಗಿದ್ದಾರೆ.
ಇವರು ಪತ್ನಿ, ನಾಲ್ವರು ಪುತ್ರರು, ಕುಟುಂಬದವರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಎ.ಜಿ.ಪೈ ಮೂಲತಹ ಸಿದ್ದಾಪುರದವರಾಗಿದ್ದು, ಮಾಜಿಮುಖ್ಯಮಂತ್ರಿ ದಿ.ರಾಮಕೃಷ್ಣ ಹೆಗಡೆ, ಕಡವೆ ಶ್ರೀಪಾದ ಹೆಗಡೆ, ದಿ.ಜಿ.ಎಸ್ ಹೆಗಡೆ ಅಜ್ಜಿಬಳ, ವಿ.ಎಸ್.ಸೋಂದೆ ಹಾಗೂ ಇನ್ನೂ ಅನೇಕ ಉತ್ತರಕನ್ನಡ ಜಿಲ್ಲೆಯ ರಾಜಕೀಯ-ಸಾಮಾಜಿಕ-ಪ್ರಗತಿಪರ ಕೃಷಿಕರ ಒಡನಾಡಿಗಳಾಗಿದ್ದರು.
ಕೃಷಿಕರ ಮತ್ತು ಬಡವರ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದು ವೆನಿಲಾ ಅಭಿವೃದ್ಧಿ ಟ್ರಸ್ಟಿನ ಸಂಸ್ಥಾಪಕ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು.
ಜಿಲ್ಲೆ ಮತ್ತು ರಾಜ್ಯದಲ್ಲಿ ವೆನಿಲ್ಲಾ ಬೆಳೆಯನ್ನು ಪರಿಚಯಿಸಿ ಅಭಿವೃದ್ಧಿಪಡಿಸಿ, ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಿಕೊಡುವಲ್ಲಿ ಅವರ ಪ್ರಯತ್ನ ಸ್ಮರಣೀಯ. ಜಿಲ್ಲೆಯಾದ್ಯಂತ ಅನೇಕ ಕೃಷಿ ವಿಚಾರ-ವಿನಿಮಯ ಕೇಂದ್ರ ಮತ್ತು ವೆನಿಲ್ಲಾ ಬೆಳೆಗಾರರ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ ಜಿಲ್ಲೆಯ ಕೃಷಿಕರ ಸಂಘಟನೆಗೆ ಜೀವ ತುಂಬಿದ್ದರು.
ಎ.ಜಿ.ಪೈ ಅಗಲಿರುವುದು ತುಂಬಲಾರದ ನಷ್ಟವಾಗಿದ್ದು. ಅವರ ಆತ್ಮಕ್ಕೆ ಚಿರಶಾಂತಿ ಕೋರಿ, ಅಗಲುವಿಕೆಯ ದು:ಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಹಾಗೂ ಹಿತೈಶಿಗಳಿಗೆ ಭಗವಂತ ಕರುಣಿಸಲೆಂದು ಪ್ರಾರ್ಥಿಸಲು ಆ. 22-08-2019 ರ ಗುರುವಾರ ಬೆಳಿಗ್ಗೆ 10.30ನಿಮಿಷಕ್ಕೆ ಸಿದ್ದಾಪುರದ ಲಯನ್ಸ ಭವನ (ಬಾಲಭವನ ಶಿರಸಿ ರಸ್ತೆ) ದಲ್ಲಿ ಶೃದ್ಧಾಂಜಲಿ ಸಭೆಯನ್ನು ಇಟ್ಟುಕೊಳ್ಳಲಾಗಿದ್ದು ಈ ಸಭೆಗೆ ನಮ್ಮ ಜಿಲ್ಲೆಯ ಅವರ ಅಭಿಮಾನಿಗಳು-ಬಂಧುಗಳು ಮತ್ತು ವೆನಿಲ್ಲಾ ಬೆಳಾಗಾರರು ಹಾಗೂ ಕೃಷಿ ವಿಚಾರ ವಿನಿಮಯ ಕೇಂದ್ರದ ಸದಸ್ಯರು ಆಗಮಿಸಲು ವೆನಿಲ್ಲಾ ಅಭಿವೃದ್ಧಿ ಟ್ರಸ್ಟಿನ ಟ್ರಸ್ಟಿಗಳಲ್ಲೊಬ್ಬರಾದ ಭಾಸ್ಕರ ಹೆಗಡೆ ಕೊಡಗೀಬೈಲು ಮಾಧ್ಯಮಗಳ ಮೂಲಕ ಕೋರಿದ್ದಾರೆ.

ತ್ವರೆಮಾಡಿ ಕೊನೆಯ ಎರಡು ದಿವಸಗಳು ಮಾತ್ರ
ನಿಮ್ಮ ಹೂಡಿಕೆಗೆ ಗರಿಷ್ಠ ಬಡ್ಡಿ ನೀಡುವ ಜೀವನ್‍ಶಾಂತಿ & ಜೀವನ್ ಅಕ್ಷಯ ಪಾಲಸಿಗಳಲ್ಲಿ ಹೂಡಿಕೆಮಾಡಲು ಆ.23 ರ ವರೆಗೆ ಎರಡು ದಿವಸಗಳ ವರೆಗೆ ಮಾತ್ರ ಅವಕಾಶ. ಹೂಡಿಕೆ,ಪಾಲಸಿ(ಎಲ್.ಐ.ಸಿ.) ಮಾಡುವ ಆಸಕ್ತರು 8277517164 ಸಂಖ್ಯೆಗೆ ಕರೆಮಾಡಿ. ನೆನಪಿಡಿ ವಿಶ್ವದ ಗರಿಷ್ಟ ಬಡ್ಡಿ ನೀಡುವ ಎರಡೂ ಯೋಜನೆಗಳು 23 ರ ನಂತರ ಲಭ್ಯವಿಲ್ಲ.
ಮಳೆನಿಂತುಹೋದಮೇಲೆ!-ಭಾಗ-03
ಮಳೆಮಾಪನ ಯಂತ್ರಗಳ ಬಗ್ಗೆ ಅನುಮಾನ, ವಿಶೇಷ ಪ್ಯಾಕೇಜ್‍ಗೆ ಒತ್ತಾಯ
ಸಿದ್ಧಾಪುರ ತಾಲೂಕಿನಲ್ಲಿ ಆಗಷ್ಟ್ ತಿಂಗಳಲ್ಲಿ ಸುರಿದ ಗರಿಷ್ಟ ಮಳೆ ತಾಲೂಕಿನ ಕೃಷಿ ಮತ್ತು ಕೃಷಿ ಉತ್ಫನ್ನದ ಮೇಲೆ ದುಷ್ಫರಿಣಾಮ ಬೀರಿದೆ. ಈ ಬಗ್ಗೆ ಕೃಷಿಕರು ಮರುಕಪಟ್ಟು ಗೋಳಾಡುತಿದ್ದರೆ, ಕೆಲವು ಕೃಷಿಕರ ಸಹಕಾರಿ ಸಂಘಗಳು ತಮ್ಮ ಬೆಳೆ ಹಾನಿ ಮತ್ತು ತೊಂದರೆಗೆ ಸ್ಫಂದಿಸುವಂತೆ ಸರ್ಕಾರವನ್ನು ಆಗ್ರಹಿಸುತಿದ್ದಾರೆ. ಮೊನ್ನೆ ಈ ಬಗ್ಗೆ ಮಾಧ್ಯಮಗೋಷ್ಠಿ ಕರೆದ ತ್ಯಾಗಲಿ ಸೇವಾ ಸಹಕಾರಿ ಸಂಘ ತಮ್ಮ ವ್ಯಾಪ್ತಿ ಮತ್ತು ತ್ಯಾಗಲಿ ಪಂಚಾಯತ್ ನ ಕೃಷಿಕರು ಮತ್ತು ಕೃಷಿಗೆ ಮಳೆಯಿಂದಾದ ಹಾನಿ ಬಗ್ಗೆ ವಿವರ ನೀಡಿ ಸರ್ಕಾರ ರೈತರಿಗೆ ಸಹಕರಿಸದಿದ್ದರೆ ರೈತರ ಬದುಕು ಕಷ್ಟ ಎಂದು ವರದಿ ನೀಡಿತು.
ಈ ಭಾಗದ ರೈತರ ಪರವಾಗಿ ಮಾತನಾಡಿದ ತ್ಯಾಗಲಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಬಿ.ಹೆಗಡೆ ಮತ್ತೀಹಳ್ಳಿ ತಮ್ಮ ಸಂಘದ ವ್ಯಾಪ್ತಿಗೆ ಬರುವ ಕೃಷಿಕರ ಒಟ್ಟೂ 650 ಎಕರೆ ಕೃಷಿ ಭೂಮಿಯಲ್ಲಿ 300 ಎಕರೆ ಅಡಿಕೆ ಬೆಳೆ ಮತ್ತು ಕ್ಷೇತ್ರಕ್ಕೆ ಹಾನಿಯಾಗಿದೆ. 325 ಎಕರೆ ಭತ್ತದ ಗದ್ದೆ ಕ್ಷೇತ್ರದಲ್ಲಿ ಬಹುತೇಕ ಕಡೆ ನಾಟಿಗೆ ಅವಕಾಶ ಸಿಕ್ಕಿಲ್ಲ, ಕೆಲವೆಡೆ ಬಿತ್ತಿದ ಬೀಜ, ಅಗೆ ನಾಟಿ ಮಾಡಿದ ಸಸಿ ಕೂಡಾ ನಾಶವಾಗಿದೆ ಎಂದರು.
ಸೈಕಲ್ ನೀಡುವ ಹಿಂದೆ ಕಲಿಕೆಯ ಉತ್ತೇಜನದ ಉದ್ಧೇಶ
ಸಿದ್ಧಾಪುರ,ಆ.21-ಸರ್ಕಾರ ವಿಶೇಶ ಸೌಲಭ್ಯಗಳ ಮೂಲಕ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೂ ಅನುಕೂಲ ಮಾಡುತ್ತಿರುವುದು ಸಮಾನತೆಗೆ ಅನುಕೂಲ ಎಂದಿರುವ ತಾಲೂಕಾ ಪಂಚಾಯತ್ ಅಧ್ಯಕ್ಷ ಸುಧೀರ್ ಗೌಡರ್ ಹಿಂದೆ ಬಡವ ಬಲ್ಲಿದನೆಂಬ ಭೇದವಿರಲಿಲ್ಲ ಈಗ ಈ ಭೇದವನ್ನು ಅಳಿಸಲು ಸರ್ಕಾರ ಪ್ರಯತ್ನಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ಇಂದು ಇಲ್ಲಿಯ ಎಸ್.ವಿ. ಪ್ರೌಢಶಾಲೆಯಲ್ಲಿ ಸರ್ಕಾರದ ಬೈಸಿಕಲ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಈ ಮೇಲಿನಂತೆ ನುಡಿದರು. ಕಾರ್ಯಕ್ರಮದ ಅತಿಥಿಯಾಗಿದ್ದ ಜಿ.ಪಂ. ಸದಸ್ಯೆ ಸುಮಂಗಲಾ ನಾಯ್ಕ ಮಾತನಾಡಿ ಶಿಕ್ಷಣದಿಂದ ಅಭಿವೃದ್ಧಿಯಾಗುತಿದ್ದು ಗ್ರಾಮೀಣ ಪ್ರತಿಭೆಗಳೂ ವಿಜೃಂಬಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ತಾ.ಪಂ. ಸ್ಥಾಯಿಸಮೀತಿ ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಸೈಕಲ್ ಕೊಡುವ ಪ್ರಕ್ರಿಯೆ ಹಿಂದೆ ಶಿಕ್ಷಣ ಮತ್ತು ಶಿಕ್ಷಣಕ್ಕೆ ಉತ್ತೇಜಿಸುವುದೇ ಆಗಿದೆ ಎಂದರು, ದೈಹಿಕ ಪರಿವೀಕ್ಷಕ ಕಮಲಾಕರ ನಾಯ್ಕ ಸ್ವಾಗತಿಸಿದರು. ಪಾಲೇಕರ್ ನಿರೂಪಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆರ್. ನಾಯ್ಕ ಅಧ್ಯಕ್ಷತೆ ವಹಿಸಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *