ಅಳಗೋಡ ದೊಡ್ಡ ಹೊಳೆ ಸೇತುವೆಯ ಅಕ್ಕಪಕ್ಕದ ತಡೆ ಕವಚಗಳು ನೀರುಪಾಲು


ಸಿದ್ದಾಪುರ ತಾಲೂಕಿನ ಹಲಗೇರಿಯಿಂದ ಗುಂಜಗೋಡ ಮಾರ್ಗದಲ್ಲಿಯ ಅಳಗೋಡಿನ ದೊಡ್ಡ ಹೊಳೆಯ ಕಿರು ಸೇತುವೆಯ ಅಕ್ಕ ಪಕ್ಕಗಳಲ್ಲಿ ಕೂಡ್ರಿಸಲಾಗಿದ್ದ ರಕ್ಷಣಾ ಹಿಡಿಕೆಗಳು ಇತ್ತೀಚಿನ ಭಾರೀ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು ಇದೀಗ ಈ ಕಿರು ಸೇತುವೆಯ ಮೇಲೆ ನಾಗರಿಕರು ಸುಗಮ ಸಂಚಾರ ಮಾಡಲಾಗದೇ ಪರಿತಪಿಸುವಂತಾಗಿದೆ.
ಈ ಸೇತುವೆಯ ಮೇಲೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ವಾಹನಗಳ ಸಂಚಾರ ನಡೆಸುತ್ತಿದ್ದು ಇದೀಗ ಅವರೆಲ್ಲರೂ ಎಡಗೈಯ್ಯಲ್ಲಿ ಜೀವ ಹಿಡಿದು ಸಂಚರಿಸುವಂತಾಗಿದೆ. ಮನೆಯ ಕೆಲಸ ಬಿಟ್ಟು ಎರಡೂ ಹೊತ್ತು ಶಾಲಾ ಮಕ್ಕಳನ್ನು ಈ ಸೇತುವೆಯಿಂದ ದಾಟಿಸಲು ಹಿರಿಯರು ಹೋಗುವುದೂ ಅನಿವಾರ್ಯವಾಗಿದೆ. ರಸ್ತೆಯ ಒಂದು ಭಾಗವೇ ಆಗಿರುವ ಸೇತುವೆಯಲ್ಲಿ ಸಂಚರಿಸುವವರು ಕೊಂಚ ಜಾರಿದರೂ ನೀರು ಪಾಲಾಗುವ ಸಾಧ್ಯತೆಯಿದೆ. ವಿಷಯವನ್ನು ಶಾಸಕರು, ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಗಮನಕ್ಕೆ ವಾರದ ಹಿಂದೆ ತರಲಾಗಿದೆ. ಅವರು ಈ ಕುರಿತಂತೆ ಶೀಘ್ರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರೂ ಈ ವರೆಗೆ ಯಾವುದೇ ಕ್ರಮ ನಡೆದಿಲ್ಲ. ಈಗಲಾದರೂ ಈ ಕುರಿತು ಅಧಿಕಾರಿಗಳು ಗಮನಹರಿಸಿ ನಾಗರಿಕರ ಸುರಕ್ಷಿತ ಸಂಚಾರಕ್ಕೆ ಅನುವುಮಾಡಿಕೊಡಬೇಕೆಂದು ಹಲಗೇರಿ ಗ್ರಾಮ ಪಂಚಾಯತ ಸದಸ್ಯೆ ರೇಣುಕಾ ಪರಶುರಾಮ ಕೋರಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *