ಬೆಳೆಹಾನಿ ಅರ್ಜಿ ಪಡೆಯಲು ಗ್ರಾ.ಪಂ.ಗಳ ನಿರಾಸಕ್ತಿ,ಸಮಯಾವಕಾಶಕ್ಕೆ ಮನವಿ


ಪ್ರವಾಹ ಮತ್ತು ಬೆಳೆಹಾನಿ ಸಮೀಕ್ಷೆ ಒಂದೆಡೆ ನಡೆಯುತಿದ್ದರೆ,ಪರಿಹಾರಕ್ಕಾಗಿ ರೈತರು ನೀಡಬೇಕಾದ ಅರ್ಜಿ ಪ್ರಮಾಣ ವಿಪರೀತವಾಗಿ ಕಡಿಮೆಯಾಗಿರುವುದು ಕಂದಾಯ (ಉ.ಕ.)ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಪ್ರವಾಹ ಮತ್ತು ಮಹಾಮಳೆಯ ನಿರ್ವಹಣೆ ಕೆಲಸವನ್ನು ಕಂದಾಯ ಇಲಾಖೆ ನೇತೃತ್ವದಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿ ಮಾಡಿದೆ. ನಂತರ ತಾತ್ಕಾಲಿಕ ವ್ಯವಸ್ಥೆ ಮತ್ತು ಪ್ರಾಥಮಿಕ ಸಮೀಕ್ಷೆನಡೆಸುವಲ್ಲಿ ಯಶಸ್ವಿಯಾಗಿದ್ದ ಜಿಲ್ಲಾಡಳಿತಕ್ಕೆ ಈಗ ಗ್ರಾ.ಪಂ.
ಗಳ ಅಸಹಕಾರ ತಲೆನೋವಾಗಿ ಪರಿಣಮಿಸಿರುವ ವಿದ್ಯಮಾನ ಬಹಿರಂಗವಾಗಿದೆ.
ಪ್ರವಾಹ, ಮಳೆತೊಂದರೆ ಸಮಯಗಳಲ್ಲೆಲ್ಲಾ ಕಂದಾಯ ಇಲಾಖೆಗೆ ಸ್ಫಂದಿಸಿ ಕೆಲಸಮಾಡಿದ್ದ ಜಿ.ಪಂ. ಆಡಳಿತ ರೈತರ ಬೆಳೆಹಾನಿ ವೈಯಕ್ತಿಕ ಅರ್ಜಿ ಪಡೆಯುವಲ್ಲಿ ಆಸಕ್ತಿ ವಹಿಸುತ್ತಿಲ್ಲ. ಒಂದೆಡೆ ಸಮೀಕ್ಷೆ, ಇನ್ನೊಂದೆಡೆ ನಿತ್ಯ ಕೆಲಸ ಇವುಗಳ ಮಧ್ಯೆ ರೈತರ ವೈಯಕ್ತಿಕ ಅರ್ಜಿಗಳನ್ನು ಪಡೆಯಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈಯಕ್ತಿಕ ಅರ್ಜಿ ಪಡೆಯುವ ಕೆಲಸವನ್ನು ಕಂದಾಯ ಇಲಾಖೆ ಗ್ರಾ.ಪಂ. ಗಳಿಗೆ ವಹಿಸಿತ್ತು. ಆದರೆ ಬಹುತೇಕ ಗ್ರಾ.ಪಂ. ಗಳು ಈ ಬಗ್ಗೆ ಗಮನಹರಿಸಿಲ್ಲ, ಕೆಲವೆಡೆ ವೈಯಕ್ತಿಕ ಅರ್ಜಿ ಕೊಡಲು ಗ್ರಾ.ಪಂ. ಗೆ ತೆರಳಿದ ರೈತರಿಗೆ ಅರ್ಜಿ ಪಡೆಯದೆ ಮರಳಿಕಳುಹಿಸಿದ್ದಾರೆ ಎನ್ನುವ ಆರೋಪಗಳೂ ವ್ಯಕ್ತವಾಗಿವೆ.
ಈ ಬಗ್ಗೆ ಆಕ್ಷೇಪಿಸಿರುವ ತಾ.ಪಂ. ಸದಸ್ಯ ನಾಶಿರ್‍ಖಾನ್ ಪಂಚಾಯತ್‍ಗಳಲ್ಲಿ ಬೆಳೆಹಾನಿ ಅರ್ಜಿ ಪಡೆಯುತ್ತಿಲ್ಲ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳು ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿವೆ ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ ಎಂದಿದ್ದಾರೆ.
ಈ ನಡುವೆ ಮಾಹಿತಿ-ವ್ಯವಸ್ಥೆ, ನಿರ್ವಹಣೆ ತೊಂದರೆಗಳಿಂದ ತಾಲೂಕಿನ 11 ಸಾವಿರ ರೈತರಲ್ಲಿ ಒಂದೆರಡು ಸಾವಿರ ರೈತರ ಅರ್ಜಿಗಳೂ ಸಲ್ಲಿಕೆಯಾಗದಿರುವುದರಿಂದ ಹೆಚ್ಚಿನ ಸಮಯಾವಕಾಶ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿದೆ.
ಈಗಾಗಲೇ ಮಳೆ, ಪ್ರವಾಹ ನಿರ್ವಹಣೆ ಕೆಲಸದಿಂದ ಹೈರಾಣಾಗಿರುವ ಕೆಲವು ಇಲಾಖೆಗಳ ನೌಕರರಿಗೆ ಗ್ರಾ.ಪಂ. ಗಳ ಅಸಹಕಾರ ಹೆಚ್ಚುವರಿ ತಲೆನೋವಾಗಿ ಕಾಡುವಂತಾಗಿದೆ. ಈ ಬಗ್ಗೆ ಜಿ.ಪಂ. ಮುಖ್ಯ ಕಾರ್ಯದರ್ಶಿಗಳಿಗೆ ದೂರು ನೀಡುವ ಸಾಧ್ಯತೆ ಕಂಡುಬಂದಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *