ಬಾವಿಗಳೆ ಕುಸಿದವು, ಕೆರೆ ಒಡೆದವು,ಶಾಲೆಮುರಿದವು…ಇದು ಸಂಸದರ ಆದರ್ಶಗ್ರಾಮದ ಕತೆ

ಮಳೆ ನಿಂತುಹೋದ ಮೇಲೆ-ಭಾಗ-06
ಇದು ಕಾನಗೋಡು ಗ್ರಾ.ಪಂ. ಮಳೆಕಹಾನಿ
ಸಿದ್ಧಾಪುರ ತಾಲೂಕಿನ ಕಾನಗೋಡು,ಶಿರಳಗಿ, ಕಾವಂಚೂರು ಪಂಚಾಯತ್‍ಗಳು ಅರೆಬಯಲುಸೀಮೆಯಂತಿರುವ ಭೌಗೋಲಿಕತೆಯ ಪ್ರದೇಶ. ಹಿಂದಿನ ಜಲಾನಯನ ಇಲಾಖೆ ಈಭಾಗವನ್ನು ಮಲೆನಾಡು, ಶಿರಸಿ-ಸಾಗರ ರಸ್ತೆಯ ಪಶ್ಚಿಮದ ಪಕ್ಕಾ ಮಲೆನಾಡನ್ನು ಅರೆಮಲೆನಾಡೆಂದು ವಿಭಾಗಿಸಿ ಈ ಭಾಗಕ್ಕೆ ದ್ರೋಹ ಬಗೆದಿದೆ. ಇದರ ಹಿಂದಿರುವ ಕೈಗಳಲ್ಲ, ಕೆಸರಿನ ಕಮಲಗಳು ಯಾರು ಎಂದರೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎನ್ನುವ ಸ್ಥಿತಿ.
ಕಾನಗೋಡಿನಲ್ಲಿ ಒಂದು ದೊಡ್ಡಕೆರೆ ಇರುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ಇನ್ನೊಂದು ಕೆರೆ ಮತ್ತೊಂದು ಗದ್ದೆಬೈಲಿಗೆ ನೀರುಣಿಸುತ್ತದೆ. ಆ ಕೆರೆಯೆ ತಾವರೆಕೆರೆ. ಎರಡೆಕರೆಯ ಈ ತಾವರೆಕೆರೆ ಈ ಮಳೆಗಾಲದಲ್ಲಿ ಒಳಗೊಳಗೇ ಅಸರಿದೆ. ಅದರ ಬಂಡು,ಚಾನೆಲ್ ಬಾಯಿಗಳೆಲ್ಲಾ ಕಿತ್ತು ನೀರು ಹೊರಹೋಗಿದೆ. ಈ ಬೃಹತ್ ಪ್ರಮಾಣದ ನೀರು ತುಂಬಿ, ಒಳಗೊಳಗೆ ಅಸರಿ ಹೋಗದಿದ್ದರೆ ಈ ಕೆರೆ ಒಡೆದು ನೂರಾರು ಎಕರೆ ಕೃಷಿಭೂಮಿ ಹಾಳಾಗುತಿತ್ತು. ಇದು ಮೇಲಿನ ಕೆರೆಯ ಕತೆಯಾದರೆ, ಊರಹೊರಗಿನ ದೊಡ್ಡಕೆರೆ ಅಥವಾ ಮಾರಿಕೆರೆ ಈ ಭಾಗದ ಪ್ರಮುಖ ಜಲಮೂಲ.


ಈ ಕೆರೆಯ ಬಂಡು ಒಡೆದಂತಾಗಿ ನೀರು ಹೊರಹೋಗದಿದ್ದರೆ ಈ ಕೆರೆಯ ನೀರು ಸಾವಿರಾರು ಎಕರೆ ಕೃಷಿ ಭೂಮಿಯನ್ನೇ ಕೊಚ್ಚಿಕೊಂಡು ಹೋಗುತಿತ್ತು. ಈ ಕೆರೆಗಳಿಗೆ ಮುಂದಿನ ಮಳೆಗಾಲದ ಮೊದಲು ಅಗತ್ಯ ದುರಸ್ಥಿ-ಕೆರೆಕಟ್ಟುವ ಕಾಮಗಾರಿ ಮಾಡಬೇಕು ಎಂಬುದು ಈ ಗ್ರಾಮದ ಜನರ ಬೇಡಿಕೆ.
ಭಾವಿಗಳು ಕುಸಿದವು- ಈ ವರ್ಷದ ಮಹಾಮಳೆಗೆ ಸಿದ್ದಾಪುರ ತಾಲೂಕು ಉತ್ತರಕನ್ನಡ ಜಿಲ್ಲೆಯ ಬಹಳ ಕಡೆ ತೆರೆದ ಬಾವಿಗಳು ಮುಚ್ಚಿವೆ. ಆದರೆ ಇಲ್ಲಿಯ ಗಣೇಶ್ ನಗರದಲ್ಲಿ ಎರಡ್ಮೂರು ಬಾವಿಗಳು ಕುಸಿದಿವೆ. ನೀರು ಎತ್ತಲು ಭಯ ಪಡುವಂತಾದ ದುಸ್ಥಿತಿಯಲ್ಲಿ ಇಲ್ಲಿಯ ಜನರು ಈ ಭಾವಿಗಳ ನೀರು ಎತ್ತುತಿದ್ದಾರೆ. ಈ ಗ್ರಾಮ ಪಂಚಾಯತ್ ವ್ಯಾಪ್ತಿ ಕಿರಿದು, ಇಲ್ಲಿ ಸಂಪರ್ಕ ರಸ್ತೆಗಳು ವ್ಯವಸ್ಥಿತವಾಗಿಲ್ಲ. ಕಾನಗೋಡು, ಐಗೋಡು, ಮಂಕೋಡು,ಹಳ್ಳಿಬೈಲ್ ಸೇರಿದಂತೆ ಇಲ್ಲಿಯ ಬಹುತೇಕ ರಸ್ತೆಗಳೆಲ್ಲಾ ಕೆಸರುಗುಂಡಿಗಳಂತಾಗಿವೆ. ಈ ರಸ್ತೆಗಳ ಉನ್ನತೀಕರಣಕ್ಕೆ ಅನುದಾನದ ಕೊರತೆ ಇದೆ ಎನ್ನುತ್ತಾರೆ ಗ್ರಾ.ಪಂ. ಮುಖಂಡ ಎಚ್.ಕೆ. ಶಿವಾನಂದ.


ಕಾನಗೋಡಿನ ಶಾಲೆ, ಅಂಗನವಾಡಿಗಳಿಗೆ ವ್ಯವಸ್ಥಿತ ಕಟ್ಟಡಗಳಿಲ್ಲ, ಮಹಾಮಳೆಯಲ್ಲಿ ಇರುವ ಒಂದೆರಡು ಕೊಠಡಿಗಳೂ ಬಳಕೆಗೆ ಅಯೋಗ್ಯವಾಗಿವೆ. ಇದೇ ಪಂಚಾಯತ್ ನ ವಡಗೇರಿಯಲ್ಲಿ ಮಾಜಿ ಶಾಸಕ ಗೋಪಾಲಕಾನಡೆಯವರು ದಾನವಾಗಿ ನೀಡಿದ ಪ್ರದೇಶದಲ್ಲಿ ಹೊಸ ಶಾಲೆ ಪ್ರಾರಂಭವಾಗಿದೆ. ಆದರೆ ಅಲ್ಲಿ ಕೊಠಡಿಗಳ ಕೊರತೆ. ಈ ಕೊರತೆ ನೀಗಿಸಲು ಹಳೆಶಾಲೆಯ ಒಂದೆರಡು ಕೊಠಡಿ ಬಳಸಿಕೊಳ್ಳಲಾಗುತಿತ್ತು ಆದರೆ ಮಳೆಯ ನಂತರ ಆ ಶಾಲೆ ಕುಸಿಯುವ ಅಪಾಯ ಎದುರಿಸುತ್ತಿದೆ. ಇದೇ ಶೈಕ್ಷಣಿಕ ವರ್ಷದಲ್ಲಿ ಈ ಶಾಲೆಗೆ ಕನಿಷ್ಟ ಎರಡು ಹೆಚ್ಚುವರಿ ಕೊಠಡಿಗಳು ಬೇಕು ಎನ್ನುವುದು ಅಲ್ಲಿಯ ಅನಿವಾರ್ಯ ಬೇಡಿಕೆ.
ಈ ಮಳೆಗಾಲದಲ್ಲಿ ಇಲ್ಲಿಯ ಬಳ್ಳಟ್ಟೆ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅದೃಷ್ಟ ನೆಟ್ಟಗಿಲ್ಲದಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಜಿಲ್ಲಾಧಿಕಾರಿಗಳ ಮುಂಜಾಗ್ರತಾ ಕ್ರಮದಿಂದ ಇಲ್ಲಿ ಆಗಬಹುದಾಗಿದ್ದ ಸಂಭವನೀಯ ಅನಾಹುತ ತಪ್ಪಿದ ಖುಷಿಯಿದೆ. ಒಂದು ದಿನದ ಮಳೆಗೆ ಈ ಶಾಲೆಯ ಚಾವಣಿ ಮುರಿದು ಹೆಂಚುಗಳು ನೆಲಕ್ಕುರುಳಿದವು. ಈಗ ಈ ಶಾಲೆಯಲ್ಲಿ ಒಂದು ಕೊಠಡಿಯಲ್ಲಿ ಎರಡೆರಡು ತರಗತಿ ನಡೆಯುವ ಅನಿವಾರ್ಯತೆ. ಈ ಕಟ್ಟಡ ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಲೇಬೇಕಾದ ಅನಿವಾರ್ಯತೆ ಇಲ್ಲಿ ಎದುರಾಗಿದೆ.
ವಿವಾದಿತ ಜಕ್ರಗುಂಡಿ ಹೊಳೆಯಲ್ಲಿ ನೀರು ಹರಿದಿದೆ. ಕಾನಗೋಡು ಗ್ರಾಮ ಪಂಚಾಯತ್ ಮಳೆಗೆ ಬೆಚ್ಚಿದೆ. ಮೋದಿಯವರ ಸಂಸದರ ಮಾದರಿ ಗ್ರಾಮ ಎಂಬ ಹುಸಿ ಘೋಷಣೆಯ ನಾಟಕದ ಮಾತಿಗೆ ಮರುಳಾದ ಇಲ್ಲಿಯ ಜನ ಸಂಸದನೂ ಇಲ್ಲ, ಅವನ ಆದರ್ಶವೂ ಇಲ್ಲ, ಆದರ್ಶ ಗ್ರಾಮವೂ ಇಲ್ಲ. ಬಿ.ಜೆ.ಪಿ. ಅಧಿಕಾರದಾಹಿ ರಾಜಕಾರಣದ ನಾಟಕಕ್ಕೆ ಬಲಿಯಾದ ಸಂಸದರ ಮಾದರಿ ಗ್ರಾಮಗಳ ವಾಸ್ತವಸ್ಥಿತಿ ನೋಡಬೇಕೆಂದರೆ ಆಮೋದಿ,ಈ ಯಡಿಯೂರಪ್ಪನೇ ಇಲ್ಲಿಗೆ ಬರಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಾರೆ. ಇಲ್ಲಿಯ ಸ್ಥಳಿಯರು.
ಅಂದಹಾಗೆ ಸಂಸದರ ಈ ಆದರ್ಶ!ಗ್ರಾಮದಲ್ಲಿ ಕೆರೆ ಒಡೆದು,ಭಾವಿಗಳು ಕುಸಿದು, ರಸ್ತೆ, ಶಾಲೆ, ಜನಜೀವನ ಮೂರಾಬಟ್ಟೆಯಾದರೂ ಸಂಸದರ ಪತ್ತೆ ಇಲ್ಲ. ನಮ್ಮ ಸಂಸದರು, ಶಾಸಕರನ್ನು ನಾವು ಹಗಲಲ್ಲೂ ಬ್ಯಾಟರಿ ಹಿಡಿದು ಹುಡುಕಬೇಕಿದೆ ಎನ್ನುವ ಈ ಸ್ಥಳಿಯರ ವ್ಯಂಗ್ಯ ಇಲ್ಲಿಯ ಸಂಸದರು, ಶಾಸಕರ ಜನಸ್ಫಂದನಕ್ಕೆ ಉತ್ತಮ ದೃಷ್ಟಾಂತ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *